ದೇಶವೆಂದರೆ

ಜೀವವೆಂದರೆ ಬರಿ ಒಡಲು ಅಲ್ಲ
ಒಡಲಿಲ್ಲದೆ ಜೀವವು ಇಲ್ಲ
ಒಡಲು ಜೀವಗಳ ಸಂಬಂಧವೇ
ಜೀವನಾನುಬಂಧ
ಅದು ಎನಿತು ಸುಂದರ

ಫಲವೆಂದರೆ ಬರಿ ವೃಕ್ಷವಲ್ಲ
ವೃಕ್ಷವಿಲ್ಲದೆ ಫಲವು ಇಲ್ಲ
ವೃಕ್ಷ ಫಲಗಳ ಸಂಬಂಧವೇ
ಜೀವನಾನುಬಂಧ
ಅದು ಎನಿತು ಸುಂದರ

ಅರ್ಥವೆಂದರೆ ಬರಿ ವಾಕ್ಯವಲ್ಲ
ವಾಕ್ಯವಿಲ್ಲದೆ ಅರ್ಥವು ಇಲ್ಲ
ವಾಗರ್ಥ ಸಂಬಂಧ
ಅದು ಎನಿತು ಸುಂದರ

ದಯೆಯೆಂದರೆ ಬರಿ ದಾನವಲ್ಲ
ದಾನವಿಲ್ಲದೆ ದಯೆಯು ಇಲ್ಲ
ದಾನ ದಯೆಗಳ ಸಂಬಂಧ
ಅದು ಎನಿತು ಸುಂದರ

ಪ್ರೀತಿಯೆಂದರೆ ಬರಿ ನೀತಿಯಲ್ಲ
ನೀತಿಯಿಲ್ಲದೆ ಪ್ರೀತಿಯು ಇಲ್ಲ
ನೀತಿ ಪ್ರೀತಿಗಳ ಸಂಬಂಧ
ಅದು ಎನಿತು ಸುಂದರ

ಜ್ಞಾನವೆಂದರೆ ಬರಿ ಯೋಗವಲ್ಲ
ಯೋಗವಿಲ್ಲದೆ ಜ್ಞಾನವು ಇಲ್ಲ
ಯೋಗ ಜ್ಞಾನ ಸಂಬಂಧ
ಅದು ಎನಿತು ಸುಂದರ
*****

One thought on “0

  1. ತಿರುಮಲೇಸರು ಮಾಡುವ ಹಲ ಕೆಲವು ಪ್ರಯೋಗಗಳಲ್ಲಿ ಈ ಕವಿತೆಯೂಒಂದು. ಸಾಮಾನ್ಯ ವಸ್ತುವನ್ನು ಕಾವ್ಯಮಯವಾಗಿ ನೋಡುವ,ಅನೇಕ ಒಳಾರ್ಥಗಳನ್ನು ಪ್ತಿಪಾದಿಸುವ ಅವರ ಅನೇಕ ಕವಿತೆಗಳಲ್ಲಿ ಇದೂ ಒಂದು.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಾಗ್ದೇವಿ – ೫
Next post ಲೋಕದ ರೀತಿ

ಸಣ್ಣ ಕತೆ

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

cheap jordans|wholesale air max|wholesale jordans|wholesale jewelry|wholesale jerseys