Home / ಕವನ / ಕವಿತೆ / ದೇಶವೆಂದರೆ

ದೇಶವೆಂದರೆ

ಜೀವವೆಂದರೆ ಬರಿ ಒಡಲು ಅಲ್ಲ
ಒಡಲಿಲ್ಲದೆ ಜೀವವು ಇಲ್ಲ
ಒಡಲು ಜೀವಗಳ ಸಂಬಂಧವೇ
ಜೀವನಾನುಬಂಧ
ಅದು ಎನಿತು ಸುಂದರ

ಫಲವೆಂದರೆ ಬರಿ ವೃಕ್ಷವಲ್ಲ
ವೃಕ್ಷವಿಲ್ಲದೆ ಫಲವು ಇಲ್ಲ
ವೃಕ್ಷ ಫಲಗಳ ಸಂಬಂಧವೇ
ಜೀವನಾನುಬಂಧ
ಅದು ಎನಿತು ಸುಂದರ

ಅರ್ಥವೆಂದರೆ ಬರಿ ವಾಕ್ಯವಲ್ಲ
ವಾಕ್ಯವಿಲ್ಲದೆ ಅರ್ಥವು ಇಲ್ಲ
ವಾಗರ್ಥ ಸಂಬಂಧ
ಅದು ಎನಿತು ಸುಂದರ

ದಯೆಯೆಂದರೆ ಬರಿ ದಾನವಲ್ಲ
ದಾನವಿಲ್ಲದೆ ದಯೆಯು ಇಲ್ಲ
ದಾನ ದಯೆಗಳ ಸಂಬಂಧ
ಅದು ಎನಿತು ಸುಂದರ

ಪ್ರೀತಿಯೆಂದರೆ ಬರಿ ನೀತಿಯಲ್ಲ
ನೀತಿಯಿಲ್ಲದೆ ಪ್ರೀತಿಯು ಇಲ್ಲ
ನೀತಿ ಪ್ರೀತಿಗಳ ಸಂಬಂಧ
ಅದು ಎನಿತು ಸುಂದರ

ಜ್ಞಾನವೆಂದರೆ ಬರಿ ಯೋಗವಲ್ಲ
ಯೋಗವಿಲ್ಲದೆ ಜ್ಞಾನವು ಇಲ್ಲ
ಯೋಗ ಜ್ಞಾನ ಸಂಬಂಧ
ಅದು ಎನಿತು ಸುಂದರ
*****

Tagged:

One Comment

  • ಗೋನವಾರ ಕಿಶನ್ ರಾವ
    Reply

    ತಿರುಮಲೇಸರು ಮಾಡುವ ಹಲ ಕೆಲವು ಪ್ರಯೋಗಗಳಲ್ಲಿ ಈ ಕವಿತೆಯೂಒಂದು. ಸಾಮಾನ್ಯ ವಸ್ತುವನ್ನು ಕಾವ್ಯಮಯವಾಗಿ ನೋಡುವ,ಅನೇಕ ಒಳಾರ್ಥಗಳನ್ನು ಪ್ತಿಪಾದಿಸುವ ಅವರ ಅನೇಕ ಕವಿತೆಗಳಲ್ಲಿ ಇದೂ ಒಂದು.

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...