ದೇಶವೆಂದರೆ

ಜೀವವೆಂದರೆ ಬರಿ ಒಡಲು ಅಲ್ಲ
ಒಡಲಿಲ್ಲದೆ ಜೀವವು ಇಲ್ಲ
ಒಡಲು ಜೀವಗಳ ಸಂಬಂಧವೇ
ಜೀವನಾನುಬಂಧ
ಅದು ಎನಿತು ಸುಂದರ

ಫಲವೆಂದರೆ ಬರಿ ವೃಕ್ಷವಲ್ಲ
ವೃಕ್ಷವಿಲ್ಲದೆ ಫಲವು ಇಲ್ಲ
ವೃಕ್ಷ ಫಲಗಳ ಸಂಬಂಧವೇ
ಜೀವನಾನುಬಂಧ
ಅದು ಎನಿತು ಸುಂದರ

ಅರ್ಥವೆಂದರೆ ಬರಿ ವಾಕ್ಯವಲ್ಲ
ವಾಕ್ಯವಿಲ್ಲದೆ ಅರ್ಥವು ಇಲ್ಲ
ವಾಗರ್ಥ ಸಂಬಂಧ
ಅದು ಎನಿತು ಸುಂದರ

ದಯೆಯೆಂದರೆ ಬರಿ ದಾನವಲ್ಲ
ದಾನವಿಲ್ಲದೆ ದಯೆಯು ಇಲ್ಲ
ದಾನ ದಯೆಗಳ ಸಂಬಂಧ
ಅದು ಎನಿತು ಸುಂದರ

ಪ್ರೀತಿಯೆಂದರೆ ಬರಿ ನೀತಿಯಲ್ಲ
ನೀತಿಯಿಲ್ಲದೆ ಪ್ರೀತಿಯು ಇಲ್ಲ
ನೀತಿ ಪ್ರೀತಿಗಳ ಸಂಬಂಧ
ಅದು ಎನಿತು ಸುಂದರ

ಜ್ಞಾನವೆಂದರೆ ಬರಿ ಯೋಗವಲ್ಲ
ಯೋಗವಿಲ್ಲದೆ ಜ್ಞಾನವು ಇಲ್ಲ
ಯೋಗ ಜ್ಞಾನ ಸಂಬಂಧ
ಅದು ಎನಿತು ಸುಂದರ
*****

One thought on “0

  1. ತಿರುಮಲೇಸರು ಮಾಡುವ ಹಲ ಕೆಲವು ಪ್ರಯೋಗಗಳಲ್ಲಿ ಈ ಕವಿತೆಯೂಒಂದು. ಸಾಮಾನ್ಯ ವಸ್ತುವನ್ನು ಕಾವ್ಯಮಯವಾಗಿ ನೋಡುವ,ಅನೇಕ ಒಳಾರ್ಥಗಳನ್ನು ಪ್ತಿಪಾದಿಸುವ ಅವರ ಅನೇಕ ಕವಿತೆಗಳಲ್ಲಿ ಇದೂ ಒಂದು.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಾಗ್ದೇವಿ – ೫
Next post ಲೋಕದ ರೀತಿ

ಸಣ್ಣ ಕತೆ

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…