Home / ಕವನ / ಕವಿತೆ / ದೇಶವೆಂದರೆ

ದೇಶವೆಂದರೆ

ಜೀವವೆಂದರೆ ಬರಿ ಒಡಲು ಅಲ್ಲ
ಒಡಲಿಲ್ಲದೆ ಜೀವವು ಇಲ್ಲ
ಒಡಲು ಜೀವಗಳ ಸಂಬಂಧವೇ
ಜೀವನಾನುಬಂಧ
ಅದು ಎನಿತು ಸುಂದರ

ಫಲವೆಂದರೆ ಬರಿ ವೃಕ್ಷವಲ್ಲ
ವೃಕ್ಷವಿಲ್ಲದೆ ಫಲವು ಇಲ್ಲ
ವೃಕ್ಷ ಫಲಗಳ ಸಂಬಂಧವೇ
ಜೀವನಾನುಬಂಧ
ಅದು ಎನಿತು ಸುಂದರ

ಅರ್ಥವೆಂದರೆ ಬರಿ ವಾಕ್ಯವಲ್ಲ
ವಾಕ್ಯವಿಲ್ಲದೆ ಅರ್ಥವು ಇಲ್ಲ
ವಾಗರ್ಥ ಸಂಬಂಧ
ಅದು ಎನಿತು ಸುಂದರ

ದಯೆಯೆಂದರೆ ಬರಿ ದಾನವಲ್ಲ
ದಾನವಿಲ್ಲದೆ ದಯೆಯು ಇಲ್ಲ
ದಾನ ದಯೆಗಳ ಸಂಬಂಧ
ಅದು ಎನಿತು ಸುಂದರ

ಪ್ರೀತಿಯೆಂದರೆ ಬರಿ ನೀತಿಯಲ್ಲ
ನೀತಿಯಿಲ್ಲದೆ ಪ್ರೀತಿಯು ಇಲ್ಲ
ನೀತಿ ಪ್ರೀತಿಗಳ ಸಂಬಂಧ
ಅದು ಎನಿತು ಸುಂದರ

ಜ್ಞಾನವೆಂದರೆ ಬರಿ ಯೋಗವಲ್ಲ
ಯೋಗವಿಲ್ಲದೆ ಜ್ಞಾನವು ಇಲ್ಲ
ಯೋಗ ಜ್ಞಾನ ಸಂಬಂಧ
ಅದು ಎನಿತು ಸುಂದರ
*****

Tagged:

One Comment

  • ಗೋನವಾರ ಕಿಶನ್ ರಾವ
    Reply

    ತಿರುಮಲೇಸರು ಮಾಡುವ ಹಲ ಕೆಲವು ಪ್ರಯೋಗಗಳಲ್ಲಿ ಈ ಕವಿತೆಯೂಒಂದು. ಸಾಮಾನ್ಯ ವಸ್ತುವನ್ನು ಕಾವ್ಯಮಯವಾಗಿ ನೋಡುವ,ಅನೇಕ ಒಳಾರ್ಥಗಳನ್ನು ಪ್ತಿಪಾದಿಸುವ ಅವರ ಅನೇಕ ಕವಿತೆಗಳಲ್ಲಿ ಇದೂ ಒಂದು.

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...