Home / ಕವನ / ಕವಿತೆ / ದೇಶವೆಂದರೆ

ದೇಶವೆಂದರೆ

ಜೀವವೆಂದರೆ ಬರಿ ಒಡಲು ಅಲ್ಲ
ಒಡಲಿಲ್ಲದೆ ಜೀವವು ಇಲ್ಲ
ಒಡಲು ಜೀವಗಳ ಸಂಬಂಧವೇ
ಜೀವನಾನುಬಂಧ
ಅದು ಎನಿತು ಸುಂದರ

ಫಲವೆಂದರೆ ಬರಿ ವೃಕ್ಷವಲ್ಲ
ವೃಕ್ಷವಿಲ್ಲದೆ ಫಲವು ಇಲ್ಲ
ವೃಕ್ಷ ಫಲಗಳ ಸಂಬಂಧವೇ
ಜೀವನಾನುಬಂಧ
ಅದು ಎನಿತು ಸುಂದರ

ಅರ್ಥವೆಂದರೆ ಬರಿ ವಾಕ್ಯವಲ್ಲ
ವಾಕ್ಯವಿಲ್ಲದೆ ಅರ್ಥವು ಇಲ್ಲ
ವಾಗರ್ಥ ಸಂಬಂಧ
ಅದು ಎನಿತು ಸುಂದರ

ದಯೆಯೆಂದರೆ ಬರಿ ದಾನವಲ್ಲ
ದಾನವಿಲ್ಲದೆ ದಯೆಯು ಇಲ್ಲ
ದಾನ ದಯೆಗಳ ಸಂಬಂಧ
ಅದು ಎನಿತು ಸುಂದರ

ಪ್ರೀತಿಯೆಂದರೆ ಬರಿ ನೀತಿಯಲ್ಲ
ನೀತಿಯಿಲ್ಲದೆ ಪ್ರೀತಿಯು ಇಲ್ಲ
ನೀತಿ ಪ್ರೀತಿಗಳ ಸಂಬಂಧ
ಅದು ಎನಿತು ಸುಂದರ

ಜ್ಞಾನವೆಂದರೆ ಬರಿ ಯೋಗವಲ್ಲ
ಯೋಗವಿಲ್ಲದೆ ಜ್ಞಾನವು ಇಲ್ಲ
ಯೋಗ ಜ್ಞಾನ ಸಂಬಂಧ
ಅದು ಎನಿತು ಸುಂದರ
*****

Tagged:

One Comment

  • ಗೋನವಾರ ಕಿಶನ್ ರಾವ
    Reply

    ತಿರುಮಲೇಸರು ಮಾಡುವ ಹಲ ಕೆಲವು ಪ್ರಯೋಗಗಳಲ್ಲಿ ಈ ಕವಿತೆಯೂಒಂದು. ಸಾಮಾನ್ಯ ವಸ್ತುವನ್ನು ಕಾವ್ಯಮಯವಾಗಿ ನೋಡುವ,ಅನೇಕ ಒಳಾರ್ಥಗಳನ್ನು ಪ್ತಿಪಾದಿಸುವ ಅವರ ಅನೇಕ ಕವಿತೆಗಳಲ್ಲಿ ಇದೂ ಒಂದು.

Leave a Reply to ಗೋನವಾರ ಕಿಶನ್ ರಾವ Cancel reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...