ಎಲ್ಲಾದರು ಒಂದು ದಿನ

ಎಲ್ಲಾದರು ಒಂದು ದಿನ ಎಂತಾದರು ಒಂದು ದಿನ
ಕಾಣದಿರುವೆನೇ ನಾ ನಿನ್ನನು

ಹಾಡುತಿರಬಹುದು ನೀ
ಮಾತಾಡುತಿರಬಹುದು ನೀ
ಸುಮ್ಮನೆ ಕುಳಿತಿರಬಹುದು ನೀ
ಕುಣಿಯುತಿರಬಹುದು ನೀ

ಬಸವಳಿದಿರಬಹುದು
ಮುತ್ತಿನಂಥ ಬೆವರ ಹನಿ ನಿನ್ನ
ಹಣೆ ಮೇಲಿರಬಹುದು-ಅಲ್ಲಿ
ಕುರುಳೊಂದು ಗಾಳಿಗೆ ಸುಮ್ಮನೆ ಸುಳಿಯುತಿರಬಹುದು

ತುಟಿಗಳ ಮೇಲೊಂದು
ಕಿರುನಗೆಯಿರಬಹುದು
ಅಥವಾ ಯಾವುದೊ ಮ್ಲಾನತೆ ಮುಖದಲಿ
ಮನೆ ಮಾಡಿರಬಹುದು

ಬೀದಿಯಲಿರಬಹುದು ನೀ
ಉದ್ಯಾನದಲಿರಬಹುದು
ನದೀ ತೀರದಲ್ಲಿರಬಹುದು ನೀ
ತೀರದ ಹಾದಿಯಲಿರಬಹುದು

ಒಬ್ಬಂಟಿಯಾಗಿರಬಹುದು ಇಲ್ಲವೆ
ಮಂದಿಯ ನಡುವಿರಬಹುದು
ನಾ ನಡೆದಷ್ಟೂ ನೀ ಮುಂದಿರಬಹುದು ಅಥವಾ
ಹಿಂದೆಯೆ ಉಳಿದಿರಬಹುದು

ಕಂಡೂ ಕಾಣದಂತಿರಬಹುದು
ಕಂಡರು ಗುರುತು ಸಿಗದಿರಬಹುದು
ಸಿಕ್ಕಿದರೂ ನುಡಿ ಗಂಟಲಲೇ ನಿಂತಿರಬಹುದು
ಮಾತಿಗಿಂತಲು ಮೌನವೆ ಸುಖವೆನಿಸಬಹುದು

ದೈವವೆ ಎದುರಿಗೆ ಬಂದಂತಿರಬಹುದು
ಚರಾಚರಗಳೊಂದು ಕ್ಷಣ ನಿಲ್ಲಬಹುದು
ಅಮರವೆನಿಸಬಹುದು ಜೀವನ
ಮಧುರ ಅನಿಸಬಹುದು ಮರಣ
*****

One thought on “0

  1. ಪರಿಣಾಮಕಾರಿಯಾದ ಕವನ.
    ಪ್ರತಿ ನುಡಿಯ ಕೊನೆ ಸಾಲು ಬಹುದು ಎಂದು ಕೊನೆಗೊಳ್ಳುತ್ತಿದ್ದರೂ, ಸಂದೇಹಾಸ್ಪದ ಎನಿಸಿತ್ತಿದ್ದರೂ. ಅದ೪ಒಳಗಿನ ಆಶಾಭಾವನೆಯ ಗಮನಿಸಿ.

    ಬೆಳೆಯುತ್ತ ಬೆಳೆಸುತ್ತಬಸಾಗುವ ಕವಿತೆ.🙏🙏

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಾಗ್ದೇವಿ – ೭
Next post ಬಾರ ಬಾರ ದೇವ

ಸಣ್ಣ ಕತೆ

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…