Home / ಕವನ / ಕವಿತೆ / ಎಲ್ಲಾದರು ಒಂದು ದಿನ

ಎಲ್ಲಾದರು ಒಂದು ದಿನ

ಎಲ್ಲಾದರು ಒಂದು ದಿನ ಎಂತಾದರು ಒಂದು ದಿನ
ಕಾಣದಿರುವೆನೇ ನಾ ನಿನ್ನನು

ಹಾಡುತಿರಬಹುದು ನೀ
ಮಾತಾಡುತಿರಬಹುದು ನೀ
ಸುಮ್ಮನೆ ಕುಳಿತಿರಬಹುದು ನೀ
ಕುಣಿಯುತಿರಬಹುದು ನೀ

ಬಸವಳಿದಿರಬಹುದು
ಮುತ್ತಿನಂಥ ಬೆವರ ಹನಿ ನಿನ್ನ
ಹಣೆ ಮೇಲಿರಬಹುದು-ಅಲ್ಲಿ
ಕುರುಳೊಂದು ಗಾಳಿಗೆ ಸುಮ್ಮನೆ ಸುಳಿಯುತಿರಬಹುದು

ತುಟಿಗಳ ಮೇಲೊಂದು
ಕಿರುನಗೆಯಿರಬಹುದು
ಅಥವಾ ಯಾವುದೊ ಮ್ಲಾನತೆ ಮುಖದಲಿ
ಮನೆ ಮಾಡಿರಬಹುದು

ಬೀದಿಯಲಿರಬಹುದು ನೀ
ಉದ್ಯಾನದಲಿರಬಹುದು
ನದೀ ತೀರದಲ್ಲಿರಬಹುದು ನೀ
ತೀರದ ಹಾದಿಯಲಿರಬಹುದು

ಒಬ್ಬಂಟಿಯಾಗಿರಬಹುದು ಇಲ್ಲವೆ
ಮಂದಿಯ ನಡುವಿರಬಹುದು
ನಾ ನಡೆದಷ್ಟೂ ನೀ ಮುಂದಿರಬಹುದು ಅಥವಾ
ಹಿಂದೆಯೆ ಉಳಿದಿರಬಹುದು

ಕಂಡೂ ಕಾಣದಂತಿರಬಹುದು
ಕಂಡರು ಗುರುತು ಸಿಗದಿರಬಹುದು
ಸಿಕ್ಕಿದರೂ ನುಡಿ ಗಂಟಲಲೇ ನಿಂತಿರಬಹುದು
ಮಾತಿಗಿಂತಲು ಮೌನವೆ ಸುಖವೆನಿಸಬಹುದು

ದೈವವೆ ಎದುರಿಗೆ ಬಂದಂತಿರಬಹುದು
ಚರಾಚರಗಳೊಂದು ಕ್ಷಣ ನಿಲ್ಲಬಹುದು
ಅಮರವೆನಿಸಬಹುದು ಜೀವನ
ಮಧುರ ಅನಿಸಬಹುದು ಮರಣ
*****

Tagged:

One Comment

  • ಗೋನವಾರ ಕಿಶನ್ ರಾವ
    Reply

    ಪರಿಣಾಮಕಾರಿಯಾದ ಕವನ.
    ಪ್ರತಿ ನುಡಿಯ ಕೊನೆ ಸಾಲು ಬಹುದು ಎಂದು ಕೊನೆಗೊಳ್ಳುತ್ತಿದ್ದರೂ, ಸಂದೇಹಾಸ್ಪದ ಎನಿಸಿತ್ತಿದ್ದರೂ. ಅದ೪ಒಳಗಿನ ಆಶಾಭಾವನೆಯ ಗಮನಿಸಿ.

    ಬೆಳೆಯುತ್ತ ಬೆಳೆಸುತ್ತಬಸಾಗುವ ಕವಿತೆ.🙏🙏

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...