ನಿನ್ನ ಹೆಸರು

ಕಾಡಿನ ಹಾದಿಯಲಿ ನಾನೊಬ್ಬನೆ ನಡೆವಾಗ
ಆವರಿಸಿದ ಸುಗಂಧವೇ ನಿನ್ನ ಹೆಸರು
ಯಾವ ಪುಷ್ಪ ಯಾವ ವೃಕ್ಷ ಯಾವ ವನದೇವಿ
ಯಾವ ಗಿರಿಸಾನುಗಳ ಔಷಧಿಯೆ ನಿನ್ನ ಹೆಸರು

ಸಂತೆಬೀದಿಗಳಲ್ಲಿ ಜನರ ನಡುವಿರುವಾಗ
ಬೆಳುದಿಂಗಳಂತೆ ಬಂದ ಚೆಲುವೆ
ನಿದ್ದೆ ಎಚ್ಚರಗಳಲಿ ಸ್ವಪ್ನ ಬಿದ್ದಿರುವಾಗ
ತೇಲಿಬಂದ ಬೆಳಕೇ ನಿನ್ನ ಹೆಸರು
ಯಾವ ಮುಗಿಲಂಚೆ ಯಾವ ದೈವದ ಸಂಚೆ
ಯಾವ ಅಪ್ಸರೆ ಕಣ್ಣ ಮಿಂಚೆ ನಿನ್ನ ಹೆಸರು

ನೀ ಯಾರು ನಾ ಯಾರು
ಬಂಧವೇನು ಸಂಬಂಧವೇನು
ನೆನಪು ಚೀಲಗಳ ಹುಡುಕಿ ನೋಡುವೆನು
ಸೋರಿಹೋಗಿವೆ ಎಲ್ಲವೂ

ಲೋಕ ಚೈತನ್ಯಗಳ ನನ್ನದೆಂದೆನು
ಪಡೆಯಲೆಳಸಿದೆನು ತಹತಹಿಸಿದೆನು ನನ್ನೊಳಗೆ ನಾನು
ದಹಿಸಿದೆನು ಬೂದಿಯಾದೆನು
ದೈವ ಬಯಸಿದ ಹಾಗೆ ಇದು ಹೀಗೆ ಎಂದೊ
ಉರಿವ ಮೂಲಕವೆ ಅರಿಯಬೇಕೆಂದೊ
ನಿನ್ನ ಹೆಸರು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪತ್ರ – ೧೦
Next post ಮೈಸೂರು ಮಕ್ಕಳು

ಸಣ್ಣ ಕತೆ

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…