ಬೆರಳ ಕೇಳಿದರೆ ಕೈಯ ಕೊಡುವವನು

ಬೆರಳ ಕೇಳಿದರೆ ಕೈಯ ಕೊಡುವವನು
ಕೈಯ ಕೇಳಿದರೆ ಕೊರಳನೆ ಕೊಡುವವನು
ನಮ್ಮ ಏಕಲವ್ಯ
ಕೊರಳ ಕೇಳಿದರೆ ಒಡಲನ ಕೊಡನೆ
ತನ್ನ ಪ್ರಾಣವ ತೆರನೆ
ಹೇ ಗುರು ದ್ರೋಣ

ಆ ಶಿಷ್ಯನಿರುವಂಥ ಗುರುಗಳೆ ಗುರುಗಳು
ಆ ಕತೆಯಿರುವಂಥ ಭಾರತವೆ ಭಾರತ
ಆವತ್ತಿಗಾ ಕತೆ ಈವತ್ತಿಗೇನೋ
ಹೇ ಗುರು ದ್ರೋಣ

ಕಾಲ ಬದಲಾಗುವುದು ಕತೆ ಬದಲಾಗುವುದು
ಗುರು ಬದಲಾಗುವರು ಶಿಷ್ಯರು ಬದಲಾಗುವರು
ಗುರುಭಕ್ತಿಯೆನ್ನುವುದು ನಗೆಪಾಟಲಾಗುವುದು
ಏಕಲವ್ಯ ಬರೆ ಭಿಲ್ಲನಾಗುವನು
ಹೇ ಗುರು ದ್ರೋಣ

ಭಿಲ್ಲನೇ ಅವನು ಭಿಲ್ಲನೆನ್ನುವುದು ಸರಿ
ಬಿಲ್ಲುವಿದ್ಯೆಯಲಿ ಪರಿಣತನು ಅಹುದು
ಅವನಿಗೇತಕೆ ಒಂದು ಮೂರುತಿಯ ಭಯಭಕುತಿ
ಅದು ಎಂಥ ಗುರುವೊ ಅದು ಎಂಥ ಋಣವೊ
ಹೇ ಗುರು ದ್ರೋಣ

ಕತೆ ಯಾಕಿಲ್ಲಿ ತಡೆಯುತ ಹೋಯಿತೊ
ಸಾಮ್ರಾಜ್ಯಗಳ ತಲೆ ಮುಗಿಯಿಸಿತೊ
ಕಲಿಸಿದ ಗುರು ಕಲ್ಪಿಸಿದ ಗುರು ಮನದೊಳು ಸಂಕಲ್ಪಿಸಿದ ಗುರು
ಕನಸಲಿ ಕಾಣಿಸಿದ ಗುರು
ಎಲ್ಲ ಗುರುಗಳು ಜಗದಾದಿ ಗುರುವೆಂದು
ಶರಣಾಯಿತೊ
ಹೇ ಗುರು ದ್ರೋಣ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಾಗ್ದೇವಿ – ೨೩
Next post `ನಾನು’ ಹೋದರೆ…

ಸಣ್ಣ ಕತೆ

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

cheap jordans|wholesale air max|wholesale jordans|wholesale jewelry|wholesale jerseys