Home / ಲೇಖನ / ವಿಜ್ಞಾನ / ಮೂಗಿನ ಮಹತ್ವ ಮತ್ತು ಮೂಗಿನ ಚಮತ್ಕಾರ!

ಮೂಗಿನ ಮಹತ್ವ ಮತ್ತು ಮೂಗಿನ ಚಮತ್ಕಾರ!

ಮೂಗು ಮನುಷ್ಯನ ಪಂಚೇಂದ್ರಿಯಗಳಲ್ಲಿ ಒಂದು ಪ್ರಮುಖವಾದ ಅಂಗ. ಈ ಮೂಗು ಮೂಸುವ ಶಕ್ತಿಯಿಂದ ಹೆಸರಾಗಿದೆ. ಮೂಗಿನಿಂದಲೇ ಸುವಾಸನೆಯ ಪ್ರಭಾವವನ್ನು ಕಂಡು ಹಿಡಿಯಬಹುಡು. ಕೆಲರೋಗಗಳನ್ನು ಮೂಗಿನಿಂದ ಹೀರಿದ ಸುವಾಸನೆಯಿಂದಲೇ ಸರಿಪಡಿಸಬಹುದು. ಅಲ್ಲದೇ ಈ ವಾಸನೆಯಿಂದಲೇ ದೇಹದ ಸ್ಥಿತಿಯನ್ನೇ ಬದಲಾಯಿಸಬಹುದು. ಬೇಸರವನ್ನು ಹೋಗಲಾಡಿಸಿ ಉತ್ಸಾಹ ಭರಿಸಬಹುದು ಸೆಕೆಯ ಚಡಪಡಿಕೆಯನ್ನು ದೂರಗೊಳಿಸಿ ತಂಪಿನ ಅನುಭವವುಂಟು ಮಾಡಬಹುದು. ಒಂದು ಅನಿಲವನ್ನು ಮೂಸಿ ನಗುವಂತೆ ಮಾಡಬಹುದು. ಈರುಳ್ಳಿ ರಸ ಮೂಸಿ ಕಣ್ಣಲ್ಲಿ ನೀರು ಬರುವಂತೆ ಮಾಡಬಹುದು, ಕ್ಲೋರೋಫಾರಮ್‌ ಮೂಸಿ ಶಸ್ತ್ರ ಚಿಕಿತ್ಸೆಯ ನೋವೆ ಆಗದಂತೆ ಮಾಡಿಕೊಳ್ಳಲೂಬಹುದು. ಅಶ್ರುವಾಯುವಿನ ಮೂಲಕ ಮನುಶ್ಯರನ್ನು ಅಳಿಸಲೂಬಹುದು. ಕೊಳೆತ ವಸ್ತುವಿನ ದುರ್ನಾತದಿಂದ (ವಾಸನೆಯಿಂದ) ಗಬ್ಬೆಂದು ದೂರ ಹೋಗಬಹುದು. ಈ ರೀತಿ ಅನೇಕ ವಾಸನೆಗಳನ್ನು ಗ್ರಹಿಸುವ ಮೂಗಿನ ಮಹತ್ವ ಮನುಷ್ಯನ ಬದುಕಲಿ ಅತ್ಯವಶ್ಯಕವಾಗಿದೆ. ಮೂಗೇ ಇಲ್ಲದಿದ್ದರೆ ಸುವಾಸನೆ, ಅಥವಾ ದುರ್ವಾಸನೆಗಳನ್ನರಿದೇ ಮೂಗನಾಗಿ, ಕೊರಡಾಗಬಹುದುಲ್ಲವೆ? ಒಂದು ವೇಳೆ ಮೂಗಿನಿಂದ ಈ ಯಾವ ವಾಸನೆಗಳನ್ನು ಗ್ರಹಿಸುವ ಶಕ್ತಿಯನ್ನು ಕಳೆದುಕೂಂಡ ಮನುಷ್ಯರಿಗೆಂದೇ ವಾಸನೆಗಳನ್ನು ಗ್ರಹಿಸುವ ಕೃತಕ ಮೂಗನ್ನು ವಿಜ್ಞಾನಿಗಳು ಕಂಡುಹಿಡಿದ್ದಾರೆ.

ಈ ಮೂಗಿಗೆ “ಸೈರೊನೋಸ್ ೨೦೦೦” ಎಂದು ಹೆಸರಿಟ್ಟಿದೆ. ಇದಕ್ಕೆ ‘ಈನೋಸ್’ ಎಂದೂ ಕೂಡ ಕರೆಯಲಾಗುತ್ತದೆ. ಒಬ್ಬ ಆರೋಗ್ಯವಂತನ ಮೂಗು ೬೫೦ ವಿಧದ ವಾಸನೆಗಳನ್ನು ಗುರುತಿಸಬಲ್ಲದೆಂದು ಮೂಗಿನ ತಜ್ಞರು ಹೇಳುತ್ತಾರೆ. ಈ ಕೃತಕ ಮೂಗಿನ ಸಾಮರ್ಥ್ಯ ಅಷ್ಟಿಲ್ಲದಿದ್ದರೂ ಮುಂದೆ ಇದನ್ನು ಅಭಿವೃದ್ಧಿಪಡಿಸಬಹುದೆಂದು ವಿಜ್ಞಾನಿಗಳು ಹೇಳುತ್ತಾರೆ. ಇದರ ಬೆಲೆ ೮ ಸಾವಿರ ಡಾಲರ್ ಇದೆ. ಈ ಕೃತಕ ಮೂಗು ಇದ್ದವರಿಗೆ ಉಪಕಾರಿ ಎಂದು ವಿಜ್ಞಾನಿಗಳು ಹೇಳುತ್ತಾರೆ. ಏಕೆಂದರೆ ಇದು ರೋಗಗಳನ್ನು ಮೂಸಬಲ್ಲದು. ಇದನ್ನು ಇಂಗ್ಗೆಂಡ್ ಓಸ್ಮೆಟಿಕ್ ಕಂಪನಿ ತಯಾರಿಸಿದೆ. ಇದು ವಿಷಾಣುಗಳನ್ನು ಗುರುತಿಸಿ ಯಾವುದರಿಂದ ಕಾಯಿಲೆ ಬರುತ್ತದೆಂದು ಕಂಡು ಹಿಡಿದು ಯಾವ ಔಷಧಿಗಳಿಂದ ಗುಣಪಡಿಸಬಹುದೆಂದು ತಿಳಿಸುತ್ತದೆ. (ಸೂಚಿಸುತ್ತದೆ)

ಮುಂದೊಂದು ದಿನ ಇದರ ಬೆಲೆಯಲ್ಲಿ ಇಳಿಕೆಯಾದರೆ ಸಾಮಾನ್ಯ ಜನರೂ ಇದನ್ನು ಉಪಯೋಗಿಸಬಹುದು. ಆಗ ಯಾವ ದಾರಿಯಲ್ಲಿ ಸಾಗಬಹುದು, ಎಲ್ಲಿ ದುರ್ವಾಸನೆ ಇದೆ ಯಾವ ಹೋಟೆಲಿನ ಆಹಾರ ದೇಹಕ್ಕೆ ಒಗ್ಗಲಾರದು. ಯಾವ ತೋಟದ ಹೂವು ಮನಸ್ಸಿಗೆ ಅಲ್ಹಾದಕರ ಎಂಬ ಎಲ್ಲ ಮಾಹಿತಿಗಳು ಈ ಮೂಗು ಹೊಂದುವವರಿಗೆ ತಿಳಿಯಬಹುದು. ಸಹಜ ಮೂಗಿನಂತೆ ಬಳಸಿ ಇದೆಲ್ಲವನ್ನು ತಿಳಿಯಬಹುದು. ಇದು ಇನ್ನು ಬಹಳ ಆವಿಪ್ಕಾರ ಹೊಂದಬೇಕಿದೆ ಅಲ್ಲಿಯವರೆಗೆ ಆಕಾಂಕ್ಷಿಗಳು ಕಾಯಬೇಕಿದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...