Home / ಲೇಖನ / ವಿಜ್ಞಾನ / ೫೦ ವರ್ಷ ಬಳೆಸಬಹುದಾದ ಬ್ಯಾಟರಿ

೫೦ ವರ್ಷ ಬಳೆಸಬಹುದಾದ ಬ್ಯಾಟರಿ

ನಾವು ಬ್ಯಾಟರಿಗಳನ್ನು ಕೆಲವೇ ಕಾಲದವರೆಗೆ ಬಳಸಿ ಎಸೆದು ಬಿತುತ್ತೇವೆ. ಆದರೆ ೫೦ ವರ್ಷಗಳ ವರೆಗೆ ಬಾಳಿಕೆ ಬರಬಲ್ಲ ಬ್ಯಾಟರಿಗಳನ್ನು ವಿಜ್ಞಾನಿಗಳು ಕಂಡುಹಿಡಿದಿದ್ದಾರೆ. ಅಮೆರಿಕಾದ ಕಾರ್ನೆಲ್ ವಿಶ್ವವಿದ್ಯಾಲಯದ ವಿಜ್ಞಾನಿಗಳು ಈ ಸಂಶೋಧನೆಯನ್ನು ಮಾಡಿದ್ದಾರೆ. ಈ ವಿದ್ಯುತ್‌ಕೋಶ (cell) ಗಳನ್ನು ಬಳೆಸುವಲ್ಲಿ ಸಂಶೋಧನೆಯ ವಿವರ ಈ ರೀತಿ ಇದೆ. ರೇಡಿಯೋ ಆಕ್ಟಿವ್ (ವಿಕಿರಣ ಶೀಲ) ವಸ್ತುಗಳನ್ನು ಬಳಸಿ ತಯಾರಿಸಲಾಗುವ ಇಂತಹ ಬ್ಯಾಟರಿಯ ಬಳಕೆಯಿಂದ ದೀರ್ಘ ಅವಧಿಯವರೆಗೆ ಕಡಿಮೆ ಶಕ್ತಿಯನ್ನು ಬಳೆಸುವ ಗಡಿಯಾರದಂತಹ ಚಿಕ್ಕ ಎಲೆಕ್ಟ್ರಾನಿಕ್ ವಸ್ತುಗಳಿಗೆ ಶಕ್ತಿಯನ್ನು ಪೂರೈಸಬಹುದೆಂದು ಹೇಳಲಾಗಿದೆ. ಅತ್ಯಂತ ಕಡಿಮೆ ಮಟ್ಟದ ವಿಕಿರಣವನ್ನು ಹೊರ ಸೂಸುವ ನಿಕೆಲ್-63 (Nickel-93) ರಂತಹ ಐಸೋಟೋಪ್ (ಐಸೋಟೋಪ್ ಪರಮಾಣು ತೂಕಬೇರೆಯಾಗಿರುವ ಆದರೆ ರಾಸಾಯನಿಕ ಗುಣಗಳು ಒಂದೇ ಇರುವ ಒಂದೇ ಧಾತುವಿನ ಎರಡು ಅಥವಾ ಹೆಚ್ಚು ರೂಪಗಳು) ಬಳಸುವುದರಿಂದ ವಿಕಿರಣ ಶೀಲತೆ ದುಷ್ಟರಿಣಾಮಗಳನ್ನು ತಡೆಯಬಹುದೆಂಬ ವಿಶ್ವಾಸವನ್ನು ವಿಜ್ಞಾನಿಗಳು ವ್ಯಕ್ತಪಡಿಸಿದ್ದಾರೆ.

ತಾಮ್ರದ ಹಾಗೂ ನಿಕೆಲ್‍ನ ಪದರವೊಂದನ್ನು ಹೊಂದಿರುವ ಈ ಬ್ಯಾಟರಿಗಳಲ್ಲಿ ನಿಕಲ್ ಐಸೋಟೋಪ್ ಹೊರಸೂಸುವ ವಿಕಿರಣದಿಂದ ಶಕ್ತಿಯ ಉತ್ಪಾದನೆಯಾಗುತ್ತದೆ. ಅತ್ಯಂತ ಚಿಕ್ಕಗಾತ್ರದಲ್ಲಿಯೂ ಕೂಡ ನಿರ್ಮಿತವಾಗಬಲ್ಲ ಇಂತಹ ಬ್ಯಾಟರಿಗಳು ನಿಕೆಲ್ ಐಸೋಟೋಪದ ಅರ್ಧಾಯುಷ್ಯ ಅವಧಿಯಾದ ನೂರು ವರ್ಷಗಳವರೆಗೂ ಕಾರ್ಯನಿರ್ವಹಿಸಬಲ್ಲವು. ಅದರ ನಿಗದಿತ ಪ್ರಮಾಣಶಕ್ತಿ ಕನಿಷ್ಟವೆಂದರೂ ಐವತ್ತು ವರ್ಷಗಳವರೆಗೂ ಯಾವ ತೊಂದರೆಯೂ ಇಲ್ಲದಂತೆ ಕಾರ್ಯನಿರ್ವಹಿಸುತ್ತದೆ.

ಆದರೆ ಇಂತಹ ಟ್ಯಾಟರಿಯು ಹೊರಸೂಸುವ ವಿಕಿರಣ ಮಾನವನ ಮೇಲೆ ಉಂಟು ಮಾಡಬಲ್ಲ ದುಷ್ಪರಿಣಾಮ ಎಷ್ಟರಮಟ್ಟದ್ದು ಎಂಬ ಬಗೆಗೆ ಇನ್ನು ಚರ್ಚೆ ನಡೆಯುತ್ತವೆ. ಇವು ಹೊರಸೂಸುವ ಅತ್ಯಲ್ಪ ಮಟ್ಟದ ವಿಕಿರಣದಿಂದ ಕೆಟ್ಟ ಪರಿಣಾಮವೇನು ಉಂಟಾಗಲಾರದೆಂದು ಈ ಬ್ಯಾಟರಿಯನ್ನು ಕಂಡು ಹಿಡಿದ ವಿಜ್ಞಾನಿಗಳು ಹೇಳಿದರೆ ಇನ್ನು ಕೆಲ ವಿಜ್ಞಾನಿಗಳು ವಿಕಿರಣ ಎಷ್ಟೇ ಕಡಿಮೆಯಾದರೂ ಅದರಿಂದ ಮಾನವನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಖಂಡಿತವಾಗಿಯೂ ಉಂಟಾಗಲಿದೆ ಎನ್ನುತ್ತಾರೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...