Home / ಲೇಖನ / ವಿಜ್ಞಾನ / ೫೦ ವರ್ಷ ಬಳೆಸಬಹುದಾದ ಬ್ಯಾಟರಿ

೫೦ ವರ್ಷ ಬಳೆಸಬಹುದಾದ ಬ್ಯಾಟರಿ

ನಾವು ಬ್ಯಾಟರಿಗಳನ್ನು ಕೆಲವೇ ಕಾಲದವರೆಗೆ ಬಳಸಿ ಎಸೆದು ಬಿತುತ್ತೇವೆ. ಆದರೆ ೫೦ ವರ್ಷಗಳ ವರೆಗೆ ಬಾಳಿಕೆ ಬರಬಲ್ಲ ಬ್ಯಾಟರಿಗಳನ್ನು ವಿಜ್ಞಾನಿಗಳು ಕಂಡುಹಿಡಿದಿದ್ದಾರೆ. ಅಮೆರಿಕಾದ ಕಾರ್ನೆಲ್ ವಿಶ್ವವಿದ್ಯಾಲಯದ ವಿಜ್ಞಾನಿಗಳು ಈ ಸಂಶೋಧನೆಯನ್ನು ಮಾಡಿದ್ದಾರೆ. ಈ ವಿದ್ಯುತ್‌ಕೋಶ (cell) ಗಳನ್ನು ಬಳೆಸುವಲ್ಲಿ ಸಂಶೋಧನೆಯ ವಿವರ ಈ ರೀತಿ ಇದೆ. ರೇಡಿಯೋ ಆಕ್ಟಿವ್ (ವಿಕಿರಣ ಶೀಲ) ವಸ್ತುಗಳನ್ನು ಬಳಸಿ ತಯಾರಿಸಲಾಗುವ ಇಂತಹ ಬ್ಯಾಟರಿಯ ಬಳಕೆಯಿಂದ ದೀರ್ಘ ಅವಧಿಯವರೆಗೆ ಕಡಿಮೆ ಶಕ್ತಿಯನ್ನು ಬಳೆಸುವ ಗಡಿಯಾರದಂತಹ ಚಿಕ್ಕ ಎಲೆಕ್ಟ್ರಾನಿಕ್ ವಸ್ತುಗಳಿಗೆ ಶಕ್ತಿಯನ್ನು ಪೂರೈಸಬಹುದೆಂದು ಹೇಳಲಾಗಿದೆ. ಅತ್ಯಂತ ಕಡಿಮೆ ಮಟ್ಟದ ವಿಕಿರಣವನ್ನು ಹೊರ ಸೂಸುವ ನಿಕೆಲ್-63 (Nickel-93) ರಂತಹ ಐಸೋಟೋಪ್ (ಐಸೋಟೋಪ್ ಪರಮಾಣು ತೂಕಬೇರೆಯಾಗಿರುವ ಆದರೆ ರಾಸಾಯನಿಕ ಗುಣಗಳು ಒಂದೇ ಇರುವ ಒಂದೇ ಧಾತುವಿನ ಎರಡು ಅಥವಾ ಹೆಚ್ಚು ರೂಪಗಳು) ಬಳಸುವುದರಿಂದ ವಿಕಿರಣ ಶೀಲತೆ ದುಷ್ಟರಿಣಾಮಗಳನ್ನು ತಡೆಯಬಹುದೆಂಬ ವಿಶ್ವಾಸವನ್ನು ವಿಜ್ಞಾನಿಗಳು ವ್ಯಕ್ತಪಡಿಸಿದ್ದಾರೆ.

ತಾಮ್ರದ ಹಾಗೂ ನಿಕೆಲ್‍ನ ಪದರವೊಂದನ್ನು ಹೊಂದಿರುವ ಈ ಬ್ಯಾಟರಿಗಳಲ್ಲಿ ನಿಕಲ್ ಐಸೋಟೋಪ್ ಹೊರಸೂಸುವ ವಿಕಿರಣದಿಂದ ಶಕ್ತಿಯ ಉತ್ಪಾದನೆಯಾಗುತ್ತದೆ. ಅತ್ಯಂತ ಚಿಕ್ಕಗಾತ್ರದಲ್ಲಿಯೂ ಕೂಡ ನಿರ್ಮಿತವಾಗಬಲ್ಲ ಇಂತಹ ಬ್ಯಾಟರಿಗಳು ನಿಕೆಲ್ ಐಸೋಟೋಪದ ಅರ್ಧಾಯುಷ್ಯ ಅವಧಿಯಾದ ನೂರು ವರ್ಷಗಳವರೆಗೂ ಕಾರ್ಯನಿರ್ವಹಿಸಬಲ್ಲವು. ಅದರ ನಿಗದಿತ ಪ್ರಮಾಣಶಕ್ತಿ ಕನಿಷ್ಟವೆಂದರೂ ಐವತ್ತು ವರ್ಷಗಳವರೆಗೂ ಯಾವ ತೊಂದರೆಯೂ ಇಲ್ಲದಂತೆ ಕಾರ್ಯನಿರ್ವಹಿಸುತ್ತದೆ.

ಆದರೆ ಇಂತಹ ಟ್ಯಾಟರಿಯು ಹೊರಸೂಸುವ ವಿಕಿರಣ ಮಾನವನ ಮೇಲೆ ಉಂಟು ಮಾಡಬಲ್ಲ ದುಷ್ಪರಿಣಾಮ ಎಷ್ಟರಮಟ್ಟದ್ದು ಎಂಬ ಬಗೆಗೆ ಇನ್ನು ಚರ್ಚೆ ನಡೆಯುತ್ತವೆ. ಇವು ಹೊರಸೂಸುವ ಅತ್ಯಲ್ಪ ಮಟ್ಟದ ವಿಕಿರಣದಿಂದ ಕೆಟ್ಟ ಪರಿಣಾಮವೇನು ಉಂಟಾಗಲಾರದೆಂದು ಈ ಬ್ಯಾಟರಿಯನ್ನು ಕಂಡು ಹಿಡಿದ ವಿಜ್ಞಾನಿಗಳು ಹೇಳಿದರೆ ಇನ್ನು ಕೆಲ ವಿಜ್ಞಾನಿಗಳು ವಿಕಿರಣ ಎಷ್ಟೇ ಕಡಿಮೆಯಾದರೂ ಅದರಿಂದ ಮಾನವನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಖಂಡಿತವಾಗಿಯೂ ಉಂಟಾಗಲಿದೆ ಎನ್ನುತ್ತಾರೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...