Home / ಲೇಖನ / ವಿಜ್ಞಾನ / ೫೦ ವರ್ಷ ಬಳೆಸಬಹುದಾದ ಬ್ಯಾಟರಿ

೫೦ ವರ್ಷ ಬಳೆಸಬಹುದಾದ ಬ್ಯಾಟರಿ

ನಾವು ಬ್ಯಾಟರಿಗಳನ್ನು ಕೆಲವೇ ಕಾಲದವರೆಗೆ ಬಳಸಿ ಎಸೆದು ಬಿತುತ್ತೇವೆ. ಆದರೆ ೫೦ ವರ್ಷಗಳ ವರೆಗೆ ಬಾಳಿಕೆ ಬರಬಲ್ಲ ಬ್ಯಾಟರಿಗಳನ್ನು ವಿಜ್ಞಾನಿಗಳು ಕಂಡುಹಿಡಿದಿದ್ದಾರೆ. ಅಮೆರಿಕಾದ ಕಾರ್ನೆಲ್ ವಿಶ್ವವಿದ್ಯಾಲಯದ ವಿಜ್ಞಾನಿಗಳು ಈ ಸಂಶೋಧನೆಯನ್ನು ಮಾಡಿದ್ದಾರೆ. ಈ ವಿದ್ಯುತ್‌ಕೋಶ (cell) ಗಳನ್ನು ಬಳೆಸುವಲ್ಲಿ ಸಂಶೋಧನೆಯ ವಿವರ ಈ ರೀತಿ ಇದೆ. ರೇಡಿಯೋ ಆಕ್ಟಿವ್ (ವಿಕಿರಣ ಶೀಲ) ವಸ್ತುಗಳನ್ನು ಬಳಸಿ ತಯಾರಿಸಲಾಗುವ ಇಂತಹ ಬ್ಯಾಟರಿಯ ಬಳಕೆಯಿಂದ ದೀರ್ಘ ಅವಧಿಯವರೆಗೆ ಕಡಿಮೆ ಶಕ್ತಿಯನ್ನು ಬಳೆಸುವ ಗಡಿಯಾರದಂತಹ ಚಿಕ್ಕ ಎಲೆಕ್ಟ್ರಾನಿಕ್ ವಸ್ತುಗಳಿಗೆ ಶಕ್ತಿಯನ್ನು ಪೂರೈಸಬಹುದೆಂದು ಹೇಳಲಾಗಿದೆ. ಅತ್ಯಂತ ಕಡಿಮೆ ಮಟ್ಟದ ವಿಕಿರಣವನ್ನು ಹೊರ ಸೂಸುವ ನಿಕೆಲ್-63 (Nickel-93) ರಂತಹ ಐಸೋಟೋಪ್ (ಐಸೋಟೋಪ್ ಪರಮಾಣು ತೂಕಬೇರೆಯಾಗಿರುವ ಆದರೆ ರಾಸಾಯನಿಕ ಗುಣಗಳು ಒಂದೇ ಇರುವ ಒಂದೇ ಧಾತುವಿನ ಎರಡು ಅಥವಾ ಹೆಚ್ಚು ರೂಪಗಳು) ಬಳಸುವುದರಿಂದ ವಿಕಿರಣ ಶೀಲತೆ ದುಷ್ಟರಿಣಾಮಗಳನ್ನು ತಡೆಯಬಹುದೆಂಬ ವಿಶ್ವಾಸವನ್ನು ವಿಜ್ಞಾನಿಗಳು ವ್ಯಕ್ತಪಡಿಸಿದ್ದಾರೆ.

ತಾಮ್ರದ ಹಾಗೂ ನಿಕೆಲ್‍ನ ಪದರವೊಂದನ್ನು ಹೊಂದಿರುವ ಈ ಬ್ಯಾಟರಿಗಳಲ್ಲಿ ನಿಕಲ್ ಐಸೋಟೋಪ್ ಹೊರಸೂಸುವ ವಿಕಿರಣದಿಂದ ಶಕ್ತಿಯ ಉತ್ಪಾದನೆಯಾಗುತ್ತದೆ. ಅತ್ಯಂತ ಚಿಕ್ಕಗಾತ್ರದಲ್ಲಿಯೂ ಕೂಡ ನಿರ್ಮಿತವಾಗಬಲ್ಲ ಇಂತಹ ಬ್ಯಾಟರಿಗಳು ನಿಕೆಲ್ ಐಸೋಟೋಪದ ಅರ್ಧಾಯುಷ್ಯ ಅವಧಿಯಾದ ನೂರು ವರ್ಷಗಳವರೆಗೂ ಕಾರ್ಯನಿರ್ವಹಿಸಬಲ್ಲವು. ಅದರ ನಿಗದಿತ ಪ್ರಮಾಣಶಕ್ತಿ ಕನಿಷ್ಟವೆಂದರೂ ಐವತ್ತು ವರ್ಷಗಳವರೆಗೂ ಯಾವ ತೊಂದರೆಯೂ ಇಲ್ಲದಂತೆ ಕಾರ್ಯನಿರ್ವಹಿಸುತ್ತದೆ.

ಆದರೆ ಇಂತಹ ಟ್ಯಾಟರಿಯು ಹೊರಸೂಸುವ ವಿಕಿರಣ ಮಾನವನ ಮೇಲೆ ಉಂಟು ಮಾಡಬಲ್ಲ ದುಷ್ಪರಿಣಾಮ ಎಷ್ಟರಮಟ್ಟದ್ದು ಎಂಬ ಬಗೆಗೆ ಇನ್ನು ಚರ್ಚೆ ನಡೆಯುತ್ತವೆ. ಇವು ಹೊರಸೂಸುವ ಅತ್ಯಲ್ಪ ಮಟ್ಟದ ವಿಕಿರಣದಿಂದ ಕೆಟ್ಟ ಪರಿಣಾಮವೇನು ಉಂಟಾಗಲಾರದೆಂದು ಈ ಬ್ಯಾಟರಿಯನ್ನು ಕಂಡು ಹಿಡಿದ ವಿಜ್ಞಾನಿಗಳು ಹೇಳಿದರೆ ಇನ್ನು ಕೆಲ ವಿಜ್ಞಾನಿಗಳು ವಿಕಿರಣ ಎಷ್ಟೇ ಕಡಿಮೆಯಾದರೂ ಅದರಿಂದ ಮಾನವನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಖಂಡಿತವಾಗಿಯೂ ಉಂಟಾಗಲಿದೆ ಎನ್ನುತ್ತಾರೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...