Home / ಲೇಖನ / ವಿಜ್ಞಾನ / ಸಿಡಿಲಿನ ಶಕ್ತಿ!!

ಸಿಡಿಲಿನ ಶಕ್ತಿ!!

‘ಸಿಡಿಲು’ ಎಂದಾಕ್ಷಣ ಯಾರಿಗೆ ತಾನೆ ಹೆದರಿಕೆ ಇಲ್ಲ. ಇದರ ಅಬ್ಬರ, ಶಬ್ದ ಬೆಂಕಿಯ ವೇಗಗಳನ್ನು ಕಂಡರೆ ಪ್ರಾಣಭಯ ಪಡುವವರೇ ಹೆಚ್ಚು. ಈಗಾಗಲೇ ಸಹಸ್ರಾರು ಜನ ಸತ್ತಿರುವ, ನೂರಾರು ಕಟ್ಟಡಗಳು ನೆಲಕ್ಕುರುಳಿರುವ, ಅಸಂಖ್ಯಾತ ಮರಗಳು ಸೀಳಿಕೊಂಡಿರುವ ಉದಾಹರಣೆಗಳಿವೆ, ಮಳೆಗಾಲ ಬಂತೆಂದರೆ ಸಿಡಿಲು-ಮಿಂಚುಗಳ ಅರ್ಭಟ ಹೆಚ್ಚಾಗುತ್ತದೆ.

ವಿದ್ಯುತ್ ಕಣಗಳ ಸಮೂಹವು ವೇಗದಿಂದ ಅಪ್ಪಳಿಸುವುದಕ್ಕೆ ನಾವು ‘ಸಿಡಿಲು’ ಎನ್ನುತ್ತೇವೆ. ಈ ಸಿಡಿಲಿನಿಂದ ಉತ್ಪತ್ತಿಯಾಗುವ ಶಕ್ತಿ ಸು.೧೦೦ ಕೋಟಿ ವೊಲ್ಟೇಜ್ ನಷ್ಟಿರುತ್ತದೆ ಎಂದರೆ ನಂಬಲಿಕ್ಕಾಗುವುದೇ ಇಲ್ಲ. ಸಿಡಿಲಿನಿಂದ ಉದ್ಭವಿಸುವ ಮಿಂಚುಗಳು ೩೦೦ ಅಡಿಗಳಿಂದ ನಾಲ್ಕು ಮೈಲಿ ದೂರದವರೆಗೂ ಪ್ರವಹಿಸುತ್ತವೆ. ಇವುಗಳ ಉಷ್ಣತೆ ೩೦,೦೦೦ ಡಿಗ್ರಿ ಸೆಂಟಿಗ್ರೇಡ್ ವರೆಗೂ ಇರುತ್ತದೆ. ಇದು ಸೂರ್ಯಕಿರಣಗಳ ಉಷ್ಣತೆಗಿಂತಲೂ ೫ ಪಟ್ಟು ಅಧಿಕವಾಗಿರುತ್ತದೆ. ಭೂಮಿಯ ಮೇಲೆ ನಿರಂತರವಾಗಿ ಎಲ್ಲೋ ಒಂದು ಕಡೆ ಸಿಡಿಲು ಬೀಳುತ್ತಲೇ ಇರುತ್ತದೆ. ಸೆಕೆಂಡಿಗೆ ೫೦ ರವರೆಗೂ ಬೀಳುವುದು ಸಾಮಾನ್ಯ. ಇವುಗಳಿಂದ ಭವನಗಳು ಕುಸಿಯದಿರಲು ಮಿಂಚು ಸಂವಾಹಕಗಳನ್ನು ಬಳಸುತ್ತಾರೆ. ಇವುಗಳ ಮೂಲಕ ಸಿಡಿಲು ಪ್ರವಹಿಸಿ ಅಪಾಯವಿಲ್ಲದೇ ಭೂಮಿಯೊಳಗೆ ಸಿಡಿಲು ನುಸುಳುತ್ತದೆ. ರೇಡಿಯೋಗಳು, ಟ್ಟಾನ್ಸಿಸ್ಟರ್‌ಗಳು, ಆಂಟೇನಾಗಳು ಈ ಸಿಡಿಲುಗಳನ್ನು ಆಕರ್ಷಿಸುತ್ತವೆ. ಪ್ರಪಂಚದಲ್ಲಿಯೇ ಹೆಚ್ಚಾಗಿ ದಕ್ಷಿಣ ಆಫ್ರಿಕಾದಲ್ಲಿಯೇ ಸಿಡಿಲಿನ ಅಬ್ಬರ ಹೆಚ್ಚಾಗಿರುತ್ತದೆಂದು ಸಿಡಿಲಿನ ಬಗೆಗೆ ಸಂಶೋಧನೆ ನಡಿಸಿದ ವಿಜ್ಞಾನಿಗಳು ಹೇಳುತ್ತಾರೆ.
*****

Tagged:

Leave a Reply

Your email address will not be published. Required fields are marked *

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...