ಸಿಡಿಲಿನ ಶಕ್ತಿ!!

ಸಿಡಿಲಿನ ಶಕ್ತಿ!!

‘ಸಿಡಿಲು’ ಎಂದಾಕ್ಷಣ ಯಾರಿಗೆ ತಾನೆ ಹೆದರಿಕೆ ಇಲ್ಲ. ಇದರ ಅಬ್ಬರ, ಶಬ್ದ ಬೆಂಕಿಯ ವೇಗಗಳನ್ನು ಕಂಡರೆ ಪ್ರಾಣಭಯ ಪಡುವವರೇ ಹೆಚ್ಚು. ಈಗಾಗಲೇ ಸಹಸ್ರಾರು ಜನ ಸತ್ತಿರುವ, ನೂರಾರು ಕಟ್ಟಡಗಳು ನೆಲಕ್ಕುರುಳಿರುವ, ಅಸಂಖ್ಯಾತ ಮರಗಳು ಸೀಳಿಕೊಂಡಿರುವ ಉದಾಹರಣೆಗಳಿವೆ, ಮಳೆಗಾಲ ಬಂತೆಂದರೆ ಸಿಡಿಲು-ಮಿಂಚುಗಳ ಅರ್ಭಟ ಹೆಚ್ಚಾಗುತ್ತದೆ.

ವಿದ್ಯುತ್ ಕಣಗಳ ಸಮೂಹವು ವೇಗದಿಂದ ಅಪ್ಪಳಿಸುವುದಕ್ಕೆ ನಾವು ‘ಸಿಡಿಲು’ ಎನ್ನುತ್ತೇವೆ. ಈ ಸಿಡಿಲಿನಿಂದ ಉತ್ಪತ್ತಿಯಾಗುವ ಶಕ್ತಿ ಸು.೧೦೦ ಕೋಟಿ ವೊಲ್ಟೇಜ್ ನಷ್ಟಿರುತ್ತದೆ ಎಂದರೆ ನಂಬಲಿಕ್ಕಾಗುವುದೇ ಇಲ್ಲ. ಸಿಡಿಲಿನಿಂದ ಉದ್ಭವಿಸುವ ಮಿಂಚುಗಳು ೩೦೦ ಅಡಿಗಳಿಂದ ನಾಲ್ಕು ಮೈಲಿ ದೂರದವರೆಗೂ ಪ್ರವಹಿಸುತ್ತವೆ. ಇವುಗಳ ಉಷ್ಣತೆ ೩೦,೦೦೦ ಡಿಗ್ರಿ ಸೆಂಟಿಗ್ರೇಡ್ ವರೆಗೂ ಇರುತ್ತದೆ. ಇದು ಸೂರ್ಯಕಿರಣಗಳ ಉಷ್ಣತೆಗಿಂತಲೂ ೫ ಪಟ್ಟು ಅಧಿಕವಾಗಿರುತ್ತದೆ. ಭೂಮಿಯ ಮೇಲೆ ನಿರಂತರವಾಗಿ ಎಲ್ಲೋ ಒಂದು ಕಡೆ ಸಿಡಿಲು ಬೀಳುತ್ತಲೇ ಇರುತ್ತದೆ. ಸೆಕೆಂಡಿಗೆ ೫೦ ರವರೆಗೂ ಬೀಳುವುದು ಸಾಮಾನ್ಯ. ಇವುಗಳಿಂದ ಭವನಗಳು ಕುಸಿಯದಿರಲು ಮಿಂಚು ಸಂವಾಹಕಗಳನ್ನು ಬಳಸುತ್ತಾರೆ. ಇವುಗಳ ಮೂಲಕ ಸಿಡಿಲು ಪ್ರವಹಿಸಿ ಅಪಾಯವಿಲ್ಲದೇ ಭೂಮಿಯೊಳಗೆ ಸಿಡಿಲು ನುಸುಳುತ್ತದೆ. ರೇಡಿಯೋಗಳು, ಟ್ಟಾನ್ಸಿಸ್ಟರ್‌ಗಳು, ಆಂಟೇನಾಗಳು ಈ ಸಿಡಿಲುಗಳನ್ನು ಆಕರ್ಷಿಸುತ್ತವೆ. ಪ್ರಪಂಚದಲ್ಲಿಯೇ ಹೆಚ್ಚಾಗಿ ದಕ್ಷಿಣ ಆಫ್ರಿಕಾದಲ್ಲಿಯೇ ಸಿಡಿಲಿನ ಅಬ್ಬರ ಹೆಚ್ಚಾಗಿರುತ್ತದೆಂದು ಸಿಡಿಲಿನ ಬಗೆಗೆ ಸಂಶೋಧನೆ ನಡಿಸಿದ ವಿಜ್ಞಾನಿಗಳು ಹೇಳುತ್ತಾರೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯೋಗ
Next post ಬಾಲ್ತಸ್ಹಾರ್ ಬಾಲ್ತಸ್ಹಾರ್

ಸಣ್ಣ ಕತೆ

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…