Home / ಲೇಖನ / ವಿಜ್ಞಾನ / ಸಿಡಿಲಿನ ಶಕ್ತಿ!!

ಸಿಡಿಲಿನ ಶಕ್ತಿ!!

‘ಸಿಡಿಲು’ ಎಂದಾಕ್ಷಣ ಯಾರಿಗೆ ತಾನೆ ಹೆದರಿಕೆ ಇಲ್ಲ. ಇದರ ಅಬ್ಬರ, ಶಬ್ದ ಬೆಂಕಿಯ ವೇಗಗಳನ್ನು ಕಂಡರೆ ಪ್ರಾಣಭಯ ಪಡುವವರೇ ಹೆಚ್ಚು. ಈಗಾಗಲೇ ಸಹಸ್ರಾರು ಜನ ಸತ್ತಿರುವ, ನೂರಾರು ಕಟ್ಟಡಗಳು ನೆಲಕ್ಕುರುಳಿರುವ, ಅಸಂಖ್ಯಾತ ಮರಗಳು ಸೀಳಿಕೊಂಡಿರುವ ಉದಾಹರಣೆಗಳಿವೆ, ಮಳೆಗಾಲ ಬಂತೆಂದರೆ ಸಿಡಿಲು-ಮಿಂಚುಗಳ ಅರ್ಭಟ ಹೆಚ್ಚಾಗುತ್ತದೆ.

ವಿದ್ಯುತ್ ಕಣಗಳ ಸಮೂಹವು ವೇಗದಿಂದ ಅಪ್ಪಳಿಸುವುದಕ್ಕೆ ನಾವು ‘ಸಿಡಿಲು’ ಎನ್ನುತ್ತೇವೆ. ಈ ಸಿಡಿಲಿನಿಂದ ಉತ್ಪತ್ತಿಯಾಗುವ ಶಕ್ತಿ ಸು.೧೦೦ ಕೋಟಿ ವೊಲ್ಟೇಜ್ ನಷ್ಟಿರುತ್ತದೆ ಎಂದರೆ ನಂಬಲಿಕ್ಕಾಗುವುದೇ ಇಲ್ಲ. ಸಿಡಿಲಿನಿಂದ ಉದ್ಭವಿಸುವ ಮಿಂಚುಗಳು ೩೦೦ ಅಡಿಗಳಿಂದ ನಾಲ್ಕು ಮೈಲಿ ದೂರದವರೆಗೂ ಪ್ರವಹಿಸುತ್ತವೆ. ಇವುಗಳ ಉಷ್ಣತೆ ೩೦,೦೦೦ ಡಿಗ್ರಿ ಸೆಂಟಿಗ್ರೇಡ್ ವರೆಗೂ ಇರುತ್ತದೆ. ಇದು ಸೂರ್ಯಕಿರಣಗಳ ಉಷ್ಣತೆಗಿಂತಲೂ ೫ ಪಟ್ಟು ಅಧಿಕವಾಗಿರುತ್ತದೆ. ಭೂಮಿಯ ಮೇಲೆ ನಿರಂತರವಾಗಿ ಎಲ್ಲೋ ಒಂದು ಕಡೆ ಸಿಡಿಲು ಬೀಳುತ್ತಲೇ ಇರುತ್ತದೆ. ಸೆಕೆಂಡಿಗೆ ೫೦ ರವರೆಗೂ ಬೀಳುವುದು ಸಾಮಾನ್ಯ. ಇವುಗಳಿಂದ ಭವನಗಳು ಕುಸಿಯದಿರಲು ಮಿಂಚು ಸಂವಾಹಕಗಳನ್ನು ಬಳಸುತ್ತಾರೆ. ಇವುಗಳ ಮೂಲಕ ಸಿಡಿಲು ಪ್ರವಹಿಸಿ ಅಪಾಯವಿಲ್ಲದೇ ಭೂಮಿಯೊಳಗೆ ಸಿಡಿಲು ನುಸುಳುತ್ತದೆ. ರೇಡಿಯೋಗಳು, ಟ್ಟಾನ್ಸಿಸ್ಟರ್‌ಗಳು, ಆಂಟೇನಾಗಳು ಈ ಸಿಡಿಲುಗಳನ್ನು ಆಕರ್ಷಿಸುತ್ತವೆ. ಪ್ರಪಂಚದಲ್ಲಿಯೇ ಹೆಚ್ಚಾಗಿ ದಕ್ಷಿಣ ಆಫ್ರಿಕಾದಲ್ಲಿಯೇ ಸಿಡಿಲಿನ ಅಬ್ಬರ ಹೆಚ್ಚಾಗಿರುತ್ತದೆಂದು ಸಿಡಿಲಿನ ಬಗೆಗೆ ಸಂಶೋಧನೆ ನಡಿಸಿದ ವಿಜ್ಞಾನಿಗಳು ಹೇಳುತ್ತಾರೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...