Home / ಲೇಖನ / ಇತರೆ / ಅರ್ಥ

ಅರ್ಥ

ಯಸ್ಯಾರ್ಧಾಸ್ಸ ಮಹಾಭಾಗೋ ಯಸ್ಯಾರ್ಥಾ ಮಹಾಗುಣಾಃ |
ಹರ್ಷಃ ಕಾಮಶ್ಚ ದರ್ಪಶ್ಚ ಧರ್‍ಮಃ ಕ್ರೊಧಶ್ಚಮೋ ದಮಃ ||
ಅರ್ಧಾದೇತಾನಿ ಸರ್ವಾಣಿ ಪ್ರವರ್ತಂತೇ ನರಾಧಿಪ ||

ಧರ್ಮ, ಅರ್ಥ, ಕಾಮ, ಮೋಕ್ಷ ಇವುಗಳು ಪುರುಷಾರ್ಥಗಳೆಂದು ಗಣಿಸಲ್ಪಟ್ಟಿರುವುವು. ಇವುಗಳೆಲ್ಲಲಾ ಅರ್ಥವು ಇಹಪರಸೌಖ್ಯಗಳಿಗೆ ಅತ್ಯಂತ ಸಾಧಕವಾದದ್ದು. ಧರ್ಮದಿಂದ ಯಾರು ಅರ್ಥವನ್ನು ಸಂಪಾದಿಸುವರೋ, ಹಾಗೆ ಸಂಪಾದಿಸಿದ ಅರ್ಥವನ್ನು ಯಾರು ಸರಿಯಾಗಿ ರಕ್ಷಿಸಿಕೊಳ್ಳುವರೋ, ಹಾಗೆ ರಕ್ಷಿಸಲ್ಪಟ್ಟ ಅರ್ಥವನ್ನು ಯಾರು ಧರ್ಮದಿಂದಲೂ, ವಿತರಣೆಯಿಂದಲೂ, ಮಿತವ್ಯಯಾಸಕ್ತಿಯಿಂದಲೂ ವ್ಯಯಮಾಡುವರೋ ಅವರು ಈ ಲೋಕದಲ್ಲಿ ಸುಖವಾಗಿರುವುದಲ್ಲದೆ, ಲೋಕಾಂತರದ ಸುಖವನ್ನು ಅಪ್ರಯತ್ನಪೂರ್ವಕವಾಗಿ ಹೊಂದುವರು. ಆದುದರಿಂದ ಧನವನ್ನು ಹೇಗೆ ಧರ್ಮದಿಂದ ಅರ್ಜಿಸಬೇಕೋ ಅದನ್ನು ತಿಳಿದುಕೊಳ್ಳುವುದು ಸರ್ವರಿಗೂ ಮುಖ್ಯ ಕರ್ತವ್ಯವು. ಧನವಂತನು ಕುಲೀನನೆಂಬುದಾಗಿಯೂ, ಚತುರನೆಂಬುದಾಗಿಯೂ, ಸಕಲ ಗುಣ ಸಂಪನ್ನನೆಂಬುದಾಗಿಯೂ, ವಿದ್ಯಾವಂತನೆಂಬುದಾಗಿಯೂ ಭಾವಿಸಲ್ಪಡುವನು. ದ್ರವ್ಯವಂತನನ್ನು ಸರ್ವರೂ ಆಶ್ರಯಿಸುವರು. ಧನಹೀನನಾದವನು ಸತ್ಕುಲಪ್ರಸೂತನಾಗಿದಾಗ್ಯೂ, ವಿದ್ಯಾವಂತನಾದಾಗ್ಯೂ, ಸದ್ಗುಣವುಳ್ಳವನಾದಾಗ್ಯೂ ಪೂಜ್ಯನಾಗುವುದು ಕಷ್ಟ. ತಂದೆತಾಯಿಗಳು, ಒದಹುಟ್ಟಿದವರು, ಹೆಂಡತಿ, ಮಕ್ಕಳು, ಬಂಧುಗಳು, ಸ್ನೇಹಿತರು ಇವರಲ್ಲಿ ಯಾರೂ ಧನಹೀನನನ್ನು ಲಕ್ಷ್ಯಮಾಡುವುದಿಲ್ಲ. ಅನ್ನ ವಸ್ತ್ರಗಳನ್ನು ಸಂಪಾದಿಸಿಕೊಂಡು ಪರಾಧೀನರಾಗದೆ ಕೂಡಿದಮಟ್ಟಿಗೆ ಸ್ವತಂತ್ರವಾಗಿ ಬದುಕುವ ಪ್ರಯತ್ನವನ್ನು ಮಾಡುವುದು ಸರ್‍ವರಿಗೂ ಮುಖ್ಯ ಕರ್ತವ್ಯವು. ಆದುದರಿಂದ ಧನಾರ್ಜನೆಯ ಉಪಾಯಗಳನ್ನು ತಿಳಿದುಕೊಂಡು ಅವುಗಳನ್ನು ಆಚರಣೆಗೆ ತಂದುಕೊಳ್ಳುವದು ಸರ್ವರಿಗೂ ಮುಖ್ಯ ಕರ್ತವ್ಯವು, ನಿರ್ಧನನಾದವನ ಮನೋರಥಗಳೆಲ್ಲವೂ ಬೇಸಿಗೆಕಾಲದ ತೊರೆಗಳಂತೆ ಶುಷ್ಕವಾಗುವುವು. ಸಮಸ್ತ ದುಃಖಗಳಿಗಿಂತಲೂ ದಾರಿದ್ರ್‍ಯವು ಅತ್ಯಂತ ದುಸ್ಸಹವಾದದ್ದು. ಆದುದರಿಂದಲೇ ಕುಂತಿಯು ತನ್ನ ಸೊಸೆಯಾದ ಸುಭದ್ರೆಗೆ ಆಶೀರ್ವಾದ ಮಾಡಿದಾಗ ಭಾಗ್ಯವಂತನನ್ನು ಹೆರು ಎಂದು ಹರಿಸಿದಳು. ಶೂರರಾಗಿಯೂ ಪಂಡಿತರಾಗಿಯೂ ಇದ್ದ ಮಕ್ಕಳನ್ನು ಪಡೆದಾಗ್ಯೂ ತನಗೂ ತನ್ನ ಮಕ್ಕಳಿಗೂ ವನವಾಸಾದಿ ಕಷ್ಟಗಳು ಪ್ರಾಸವಾದದ್ದನ್ನು ಸ್ಮರಿಸಿಕೊಂಡು ಕುಂತೀದೇವಿಯು ಈ ರೀತಿಯಲ್ಲಿ ಹರಸಿರಬಹುದು. ದ್ರವ್ಯವು ಸಂತೊಷಕ್ಕೂ, ಇಷ್ಟಾರ್ಥ ಪೂರ್ತಿಗೂ, ದರ್ಪಕ್ಕೂ, ಧರ್ಮಕ್ಕೂ, ಇಹಪರಸಾಧನೆಗಳಿಗೂ ಅತ್ಯಂತ ಸಾಧಕವಾಗುವುದು. ಈ ವಿಷಯಗಳನ್ನು ಪರ್ಯಾಲೋಚಿಸಿ ಎಲ್ಲಾ ವಿದ್ಯಾರ್ಥಿಗಳೂ ಧರ್ಮದಿಂದ ಧನವನ್ನು ಅರ್ಜಿಸುವುದನ್ನೂ ಆರ್ಜಿಸಿದ ದ್ರವ್ಯವನ್ನು ವ್ಯರ್ಥವಾಗಿ ಕಳಿಯದೆ ಇರುವುದನ್ನೂ ಅತ್ಯಾವಶ್ಯಕವಾದ ವ್ಯಯಗಳಿಗೆ ವಿನಿಯೋಗಿಸುವುದನ್ನೂ ತಿಳಿದುಕೊಳ್ಳುವುದು ಆವಶ್ಯಕ. ಈ ವಿಷಯಕ್ಕೆ ವಿದ್ಯಾರ್ಥಿಗಳ ಗಮನವು ಹೇಗೋ ಹಾಗೆ ಇತರರ ಗಮನವೂ ಕೊಡಲ್ಪಡುವುದೆಂದು ನಂಬಿದ್ದೇವೆ.
*****

Tagged:

Leave a Reply

Your email address will not be published. Required fields are marked *

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...