ಸಾಧುಗಳಿಗಿದೆ ಸಾಧನವೋ ಸುಜ್ಞಾನವೋ

ಸಾಧುಗಳಿಗಿದೆ ಸಾಧನವೋ ಸುಜ್ಞಾನವೋ         ||ಪ||

ಪದುಮ ದಳದ ಮದವು ಬೆಳೆದು
ಸದಮಲಾತ್ಮಯೋಗ ತುದಿಯ-
ಲದನುಯೇರಿ ಮೆರೀದು ಬೆರಿದು
ಕದಲದಂತೆ ಕರುಣ ರಸದ                           ||೧||

ಚಂದ್ರ ಸೂರ್ಯರೊಂದುಗೂಡಿದಾ ಅಲ್ಲೆ ಮೂಡಿದಾ
ರಂಧ್ರದೂಳಗೆ ಹೊಳೆವ ಮಿಂಚು
ಒಂದೇ ದೃಷ್ಟಿಯಿಂದ ನೋಡಿ
ಸಿಂಧುಶುಚಿನಾಥ ತಿಳಿದು ಬಿಂದುವಸ್ತು ಸವಿದು ಪರಮ  ||೨||

ಭೂತ ಪಂಚಕವನಳಿದು ತೋರುವಾ
ಸಂಪ್ರೀತಿಯಿಂದ ಮಾತು ಮಾತಿಗೆ ಮೋಜುಗಾಣುವಾ
ಧಾತ ಪರಬ್ರಹ್ಮನೇ ಈತನೆಂದು
ಅರಿತು ಪವನಜಾಗದೊಳಗೆ ಜನ್ಮರೀತಿ
ಕೌತುಕದಿ ಕುಳಿತು ಮೆರೆವ                                ||೩||

ತಾಗುಬಾಗುವೆಲ್ಲ ಕಳಿದನು ಅಲ್ಲಿಳಿದನು
ಯೋಗ ಸಾಧನವನ್ನು ಮಾಡಿ
ಭೋಗ ವಿಷಯ ಕೂಗೆದೂಡಿ
ರಾಗದಿಂದ ರಜದ ಕೊನೆಯ
ಮೇಲೆ ನಿಂತು ಚಂದ್ರ ಜ್ಯೋತಿ                           ||೪||

ಚಾಗು ಸದಾನಂದಜಲದೊಳು ಬೋಧಾ
ಅಗಲತೆಯನೇಕ ಮಂತ್ರ ಮೂಲಕಲೆಗಳಾ
ಏಕನಾಥ ಶಿಶುನಾಳಧೀಶನಲ್ಲಿ ತಾಕಿ ತಾಕಿ
ಜೋಕಿಯಿಂದ ಜನನ ಮರಣ ನೂಕಿ ನಿಲುವಂಥ         ||೫||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಿವಲೋಕದಿಂದ ಒಬ್ಬ ಸಾಧು ಬಂದಾನು
Next post ಸಾಧುಗಳೆಲ್ಲಾ ಚನ್ನಾಗಿ ಕೇಳಿರಣ್ಣಾ

ಸಣ್ಣ ಕತೆ

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…