Home / ಕವನ / ಕವಿತೆ / ಪಥಿಕ

ಪಥಿಕ

ನಡೆದಿಹೆನು ನಡೆದಿಹೆನು ಅಡವಿಯ ಅರಣ್ಯದಲಿ
ಮುಂಜಾನದಲ್ಲಿ ನಿನಗೆ ಕಾಣದೇನು?
ಕಡುಕತ್ತಲೆಯ ಸುತ್ತು ಬಿತ್ತರಿಸಿ ಮುತ್ತುತಿಹ
ಮೊದಲೆ ಬೆಳಕು ಕೊಡಲುಬಾರದೇನು?

ಕಂಟಿಕಲ್ಲಗಳೆಡವುತೆಡವುತ್ತ ಮುಗ್ಗರಿಸು –
ತಿರೆ ಎತ್ತಿ ನೀ ಹಿಡಿಯಬಾರದೇನು?
ಕುಂಠಿಸಿತು ಅಸುಶಕ್ತಿ ಸೋತು ಸಣ್ಣಾಗಿರಲು
ಕೈ ನೀಡಿ ನೀ ಕರೆಯಬಾರದೇನು?

ನಿರ್ವಾಣ ಸವಿಸುಖದ ಗೀರ್ವಾಣವಾಣಿಯನು
ಕೇಳ ಬಯಸುವೆ ಹೇಳಬಾರದೇನು?
ಸರ್ವ ಸಂಜೀವನದ ಸುಧೆಯ ಬಿಂದುವನೊಂದ
ಸುರಿದಮರನನು ಮಾಡಬಾರದೇನು?

ವಿಶ್ವಯಾತ್ರೆಗೆ ಹೊರಟ ದಾರಿಗನು ನಿನ್ನಲ್ಲಿ
ಶ್ರದ್ದೆಯಿಟ್ಟರೆ ತಿಳಿಯಬಾರದೇನು?
ವಿಶ್ವಮೂರ್ತಿಯೆ ಸಕಲ ನಾನೆಂದು ಹೊರಟಿರುವೆ
ಸರ್ವ ನೀನಾಗಿ ಬರಬಾರದೇನು?

ಬೆಳಕುಕತ್ತಲೆಗಳಾ ಗುರುತು ಹತ್ತದು ಇಲ್ಲಿ
ನೆಲೆಗೆಟ್ಟು ನನ್ನನ್ನೆ ಮರೆತೆ ನಾನು
ಸುಳಿವು ದೋರದೆ ನೀನು ನನ್ನಲ್ಲೆ ಅವಿತಿದ್ದು
ನನ್ನ ಮರೆವುದು ನಿನಗೆ ಉಚಿತವೇನು?

ಮರಬಳ್ಳಿ ಬಳಕುವವು ತುಳುಕುವವು ತೂಗುವವು
ನೀ ಕಣ್ಣು ತೆರೆದಿರಲು ಮಕರಂದವು
ಸ್ವರಸಂಪು ಇಂಪು ಇಂಚರ ಹಕ್ಕಿಗಳ ಹಾಡು
ಎಲ್ಲೆಲ್ಲಿ ಹೊಮ್ಮುವದು ಆನಂದವು.

ನಡೆನಡೆದು ದುಡಿದುಡಿದು ನಿನ್ನಿಂದ ಪಡೆಪಡೆದು
ನಿರ್ಮಿಸುವ ಉಪವನವ ನೋಡು ನೀನು
ಸಡಗರದ ನಂದನದ ಬನಸಿರಿಯ ಸೌರಭವ
ಸವಿಸವಿದು ಹರಕೆ ಕೊಡಬಾರದೇನು?

ಅಲೆದಲೆದು ಅರಸಿದರು ಲಭಿಸಲಾರದ ಕುಸುಮ
ನೀನಾಯ್ದು ನನಗೆ ಕೊಡಬಾರದೇನು?
ನಲಿನಲಿದು ಆ ಹೂವ ಹಾರ ಮಾಡುವೆ ನಿನಗೆ
ನಿನ್ನ ಹೂ ನೀ ಮುಡಿಯಬಾರದೇನು?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...