Home / ಕವನ / ಕವಿತೆ / ಪಥಿಕ

ಪಥಿಕ

ನಡೆದಿಹೆನು ನಡೆದಿಹೆನು ಅಡವಿಯ ಅರಣ್ಯದಲಿ
ಮುಂಜಾನದಲ್ಲಿ ನಿನಗೆ ಕಾಣದೇನು?
ಕಡುಕತ್ತಲೆಯ ಸುತ್ತು ಬಿತ್ತರಿಸಿ ಮುತ್ತುತಿಹ
ಮೊದಲೆ ಬೆಳಕು ಕೊಡಲುಬಾರದೇನು?

ಕಂಟಿಕಲ್ಲಗಳೆಡವುತೆಡವುತ್ತ ಮುಗ್ಗರಿಸು –
ತಿರೆ ಎತ್ತಿ ನೀ ಹಿಡಿಯಬಾರದೇನು?
ಕುಂಠಿಸಿತು ಅಸುಶಕ್ತಿ ಸೋತು ಸಣ್ಣಾಗಿರಲು
ಕೈ ನೀಡಿ ನೀ ಕರೆಯಬಾರದೇನು?

ನಿರ್ವಾಣ ಸವಿಸುಖದ ಗೀರ್ವಾಣವಾಣಿಯನು
ಕೇಳ ಬಯಸುವೆ ಹೇಳಬಾರದೇನು?
ಸರ್ವ ಸಂಜೀವನದ ಸುಧೆಯ ಬಿಂದುವನೊಂದ
ಸುರಿದಮರನನು ಮಾಡಬಾರದೇನು?

ವಿಶ್ವಯಾತ್ರೆಗೆ ಹೊರಟ ದಾರಿಗನು ನಿನ್ನಲ್ಲಿ
ಶ್ರದ್ದೆಯಿಟ್ಟರೆ ತಿಳಿಯಬಾರದೇನು?
ವಿಶ್ವಮೂರ್ತಿಯೆ ಸಕಲ ನಾನೆಂದು ಹೊರಟಿರುವೆ
ಸರ್ವ ನೀನಾಗಿ ಬರಬಾರದೇನು?

ಬೆಳಕುಕತ್ತಲೆಗಳಾ ಗುರುತು ಹತ್ತದು ಇಲ್ಲಿ
ನೆಲೆಗೆಟ್ಟು ನನ್ನನ್ನೆ ಮರೆತೆ ನಾನು
ಸುಳಿವು ದೋರದೆ ನೀನು ನನ್ನಲ್ಲೆ ಅವಿತಿದ್ದು
ನನ್ನ ಮರೆವುದು ನಿನಗೆ ಉಚಿತವೇನು?

ಮರಬಳ್ಳಿ ಬಳಕುವವು ತುಳುಕುವವು ತೂಗುವವು
ನೀ ಕಣ್ಣು ತೆರೆದಿರಲು ಮಕರಂದವು
ಸ್ವರಸಂಪು ಇಂಪು ಇಂಚರ ಹಕ್ಕಿಗಳ ಹಾಡು
ಎಲ್ಲೆಲ್ಲಿ ಹೊಮ್ಮುವದು ಆನಂದವು.

ನಡೆನಡೆದು ದುಡಿದುಡಿದು ನಿನ್ನಿಂದ ಪಡೆಪಡೆದು
ನಿರ್ಮಿಸುವ ಉಪವನವ ನೋಡು ನೀನು
ಸಡಗರದ ನಂದನದ ಬನಸಿರಿಯ ಸೌರಭವ
ಸವಿಸವಿದು ಹರಕೆ ಕೊಡಬಾರದೇನು?

ಅಲೆದಲೆದು ಅರಸಿದರು ಲಭಿಸಲಾರದ ಕುಸುಮ
ನೀನಾಯ್ದು ನನಗೆ ಕೊಡಬಾರದೇನು?
ನಲಿನಲಿದು ಆ ಹೂವ ಹಾರ ಮಾಡುವೆ ನಿನಗೆ
ನಿನ್ನ ಹೂ ನೀ ಮುಡಿಯಬಾರದೇನು?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...