ವಸಂತನ ಮರೆ

ಸಂತಸದ ಸಾಗರದಿ ಶರಶೂರೆ ಸರಸಾಟ
ನೆಲಕಿಷ್ಟು ಸಿರಿಯು ವಾಸಂತದಲ್ಲಿ
ಅಂತವಿಲ್ಲದ ಇಂಥ ಶುಭದ ಸಂತೆಯು ಕೂಡ
ಹರಿಯುವದು ಕೊನೆಗೆ ಮಳೆಗಾಲದಲ್ಲಿ

ದೊರೆಯ ಭಯ ಅಲ್ಲಿಲ್ಲ ಹಿರಿಯರಂಜಿಕೆಯಿಲ್ಲ
ಋತುರಾಜ ವಾಸಂತ ಕಾಲದಲ್ಲಿ
ಕೊರತೆಯಿಲ್ಲದ ಸುಖವ ಬಡವಬಲ್ಲಿದರೆಲ್ಲ
ಸುರಿಯುವರು ಆ ಸೊಗದ ಸುಗ್ಗಿಯಲ್ಲಿ

ಸುರಿದ ಸೊಬಗಿನ ಸೊಂಪು ಮರಬಳ್ಳಿಗಳ ತಂಪು
ಪೂಗಂಪು ಸರಸ ಸುಳಿಗಾಳಿಯಲ್ಲಿ.
ಸ್ವರಬಿಚ್ಚಿ ಹಾಡುತಿಹ ಕೋಗಿಲೆಯ ದನಿ ಇಂಪು
ನಂದನದ ಸೌಂದರ್ಯಸಾರದಲ್ಲಿ

ಕಾರಹುಣ್ಣಿಮೆ ಬರಲು ಕಾರ್ಮೋಡ ಪಡೆ ಕವಿದು
ಬಿರುಗಾಳಿ ಭರಭರನೆ ಬೀಸಿಬೀಸಿ
ಸೂರೆಗೊಂಡವು ಬನದ ಸಿರಿಯಸಿಂಗಾರವನ್ನು
ಗುಡುಗು ಸಿಡಿಲುಗಳಾಗ ರಾಶಿರಾಶಿ

ಹೊಸಹೊಸದು ಹೊಂಬಣ್ಣ ಕೆಂಬಣ್ಣ ಹೂವುಗಳು
ಮರೆಯಾದವೆಂದು ನಾವರಚಲೇಕೆ?
ಕಸುಕಾಗಿ ಹಣ್ಣಾಗಿ ವಾಸಂತ ಕುವರನಿಗೆ
ಮೊಲೆಗೊಡಲು ಬರುತಿರಲು ಚಿಂತೆಯೇಕೆ?

ಮರೆಯಾದನೆನಬೇಡ ಹುರಿಯಾಗಿ ಬರುತಿಹನು
ತಿರುತಿರುಗಿ ವರುವರುಷದಾದಿಯಲ್ಲಿ
ತೆರೆಯಮರೆ ಸೇರಿದರು ಚಿರಜೀವಿ ತಾನಾಗಿ
ಮಗುಮಗುಳಿ ಮೆರೆಯುವನು ಲೋಕದಲ್ಲಿ

ಹುಟ್ಟಿದ್ದು ಸಾಯುವದು ಸತ್ತದ್ದೆ ಹುಟ್ಟುವದು
ಬ್ರಹ್ಮಾಂಡ ಚಕ್ರವಿದು ತಿರುಗಿ ತಿರುಗಿ
ಸೃಷ್ಟಿಯಲಿ ಸಕಲವೂ ಮೂಡುವದು ಮಸುಳುವದು
ನೂರೆಂಟು ಸಲ ಹೀಗೆ ಕರಗಿ ಕರಗಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಗೋಚರ
Next post ಇಮಾಂಬಾರಾ

ಸಣ್ಣ ಕತೆ

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

cheap jordans|wholesale air max|wholesale jordans|wholesale jewelry|wholesale jerseys