ಬೇರೊಂದು ಬಾಯಾರಿಕೆ

ಬಾವಿಕೆರೆ ಹೊಳೆಹಳ್ಳ ಕುಂಟೆಕಾಲುವೆ ನೀರ
ಕುಡಿಕುಡಿದು ಸಾಕುಸಾಕಾಯಿತೆನಗೆ
ಯಾವ ಹೊಂಡದೊಳಿಳಿದು ಎಷ್ಟು ಈಂಟಿದರು ಸಹ
ತೀರಲಾರದ ತೃಷೆಯು ಒಳಗೆ ಒಳಗೆ

ಒಮ್ಮೆ ಕುಡಿದರೆ ಸಾಕು ತಿರುಗಿ ತೃಷೆ ತಾನೆಂದು
ಸುಳಿಯಬಾರದು ಜೀವಶುಕದ ಮುಂದೆ
ಒಮ್ಮೆಯಾದರು ಇಂಥ ಅಮರಗಂಗೆಯ ಜಲವ
ಸವಿಯಬೇಕೆಂದು ಕಂಗೆಟ್ಟು ಬಂದೆ.

ಬಾಯಾರಿ ತೊಳಲಿಬಳಲುವೆ ನೀರು ನೀರೆಂದು
ಒಂದು ಹನಿಯೂ ಕೂಡ ಕಾಣಲಿಲ್ಲ.
ವಾಯುವೇಗದಿ ಬಂದೆ ಸಪ್ತಸಾಗರಸುತ್ತಿ
ಬತ್ತಿಹವು ಚೆಲುವಾದ ಸೆಲೆಗಳೆಲ್ಲ.

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಂಟು
Next post ಜೂಲಿಯಾನ

ಸಣ್ಣ ಕತೆ

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

cheap jordans|wholesale air max|wholesale jordans|wholesale jewelry|wholesale jerseys