ಹಿಂದೂಮುಸಲ್ಮಾನರ ಐಕ್ಯ – ೪

ಹಿಂದೂಮುಸಲ್ಮಾನರ ಐಕ್ಯ – ೪

ಎಷ್ಟೋ ವರ್ಷಗಳು ಕಳೆದವು. ಶಿವದಾಸನು ಮೃತ್ಯು ಶಯ್ಯೆಯಲ್ಲಿ ಪವಡಿಸಿದ್ದನು. ಅವಸಾನ ಕಾಲಕ್ಕೆ ಅವನು ಗುಲಾಮ ಆಲಿಯನ್ನು ಕರೆಸಿಕೊಂಡು ಮಾಯೆಯ ಕೈಯನ್ನು ಅವನ ಕೈಯಲ್ಲಿತ್ತು, ಗದ್ಗದ ಕಂಠದಿಂದ ಏನೋ ಹೇಳಬೇಕೆಂದನು; ಆದರೆ ಅಷ್ಟರಲ್ಲಿ ಅವನ ವಾಣಿಯೇ ಕುಂಠಿತವಾಗಲು, ಸಾಶನಯನದಿಂದ ಅವರೀರ್ವವರ ಕಡೆಗೆ ನೋಡಹತ್ತಿದನು.

ಸಹೃದಯನಾದ ಗುಲಾಮ ಆಲಿಗೆ ಭ್ರಾತೃಸಮಾನನಾದ ಶಿವದಾಸನ ಆಂತರ್ಭಾವ ತಿಳಿದು ಬಂದಿತು. ಆಗ ಅವನು :- “ಬ್ರಾಹ್ಮಣಶ್ರೇಷ್ಠಾ, ಮಾಯೆಯ ಮಾಯೆಯನ್ನು ಪರಿತ್ಯಜಿಸಿ, ಇಷ್ಟದೇವತೆಯನ್ನು ಸ್ಮರಿಸುವವನಾಗು. ಮಾಯೆಯು ಈಗ ಮನುಷ್ಯಳಾಗಿ ಉಳಿದಿರುವದಿಲ್ಲ. ಅವಳು ನನ್ನ ಪರಮ ದೇವತೆಯಾಗಿರುತ್ತಾಳೆ. ನಾನು ಅವಳನ್ನು ರಕ್ಷಣೆಮಾಡುವೆನೆನ್ನುವದಕ್ಕಿಂತ, ಅವಳೇ ನನ್ನಂಥ ಸಾವಿರಾರು ಗುಲಾಮರನ್ನು ರಕ್ಷಿಸಲು ಸಮರ್ಥಳಾಗಿರುತ್ತಾಳೆ.”

ಮುಸಲ್ಮಾನನ ಈ ವಚನಗಳನ್ನು ಕೇಳಿ, ಶಿವದಾಸನ ಅಂತರಂಗ ದೊಳಗಿನ ಮಾಯೆಯ ವಿಷಯದ ವಾಯುಯು ಕಡಿಯಲು, ಅವನ ಕಣ್ಣೊಳಗಿಂದ ಮಾಯಾಮುಕ್ತಿ ಪ್ರದವಾದ ಆನಂದಬಾಷ್ಪಗಳು ಸುರಿದವು. ಪರ ಕ್ಷಣದಲ್ಲಿಯೇ ಶಿವದಾಸನ ಇಹ ಪರ್ಯವಸಾನವಾಯಿತು. ಶಿವದಾಸನು ಉಲ್ಲಸಿತ ಮೊಗದಿಂದ ಪ್ರಾವಣ ಮಾಡುವಾಗ ಗುಲಾಮ ಆಲಿಯು ಗದ್ದದ ಕಂಠದಿಂದ:- “ಬಾಹ್ಮಣಶ್ರೇಷ್ಠರೇ, ನಡೆಯಿರಿ – ನಡೆಯುರಿನ್ನು ಸ್ವರ್ಗಕ್ಕೆ, ಪರಕ್ಷಣದಲ್ಲಿ ಸ್ವರ್ಗಸುಖಗಳಲ್ಲಿ ನಿರತರಾಗುವ ನೀವು, ನಿಮ್ಮೀ ಗುಲಾಮನನ್ನು ಶೀಘ್ರವಾಗಿ ನಿಮ್ಮೆಡೆಗೆ ಬರಮಾಡಿಕೊಳ್ಳಲಿಕ್ಕೆ ಮರಯಬೇಡಿರಿ” ಎಂದು ಪ್ರಾರ್ಥಿಸಿದನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಲ್ಲಿ ಹುಡುಕಲಿ
Next post ತಳಮಳ

ಸಣ್ಣ ಕತೆ

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…