Home / ಕಥೆ / ನೀಳ್ಗತೆ / ಹಿಂದೂಮುಸಲ್ಮಾನರ ಐಕ್ಯ – ೪

ಹಿಂದೂಮುಸಲ್ಮಾನರ ಐಕ್ಯ – ೪

ಎಷ್ಟೋ ವರ್ಷಗಳು ಕಳೆದವು. ಶಿವದಾಸನು ಮೃತ್ಯು ಶಯ್ಯೆಯಲ್ಲಿ ಪವಡಿಸಿದ್ದನು. ಅವಸಾನ ಕಾಲಕ್ಕೆ ಅವನು ಗುಲಾಮ ಆಲಿಯನ್ನು ಕರೆಸಿಕೊಂಡು ಮಾಯೆಯ ಕೈಯನ್ನು ಅವನ ಕೈಯಲ್ಲಿತ್ತು, ಗದ್ಗದ ಕಂಠದಿಂದ ಏನೋ ಹೇಳಬೇಕೆಂದನು; ಆದರೆ ಅಷ್ಟರಲ್ಲಿ ಅವನ ವಾಣಿಯೇ ಕುಂಠಿತವಾಗಲು, ಸಾಶನಯನದಿಂದ ಅವರೀರ್ವವರ ಕಡೆಗೆ ನೋಡಹತ್ತಿದನು.

ಸಹೃದಯನಾದ ಗುಲಾಮ ಆಲಿಗೆ ಭ್ರಾತೃಸಮಾನನಾದ ಶಿವದಾಸನ ಆಂತರ್ಭಾವ ತಿಳಿದು ಬಂದಿತು. ಆಗ ಅವನು :- “ಬ್ರಾಹ್ಮಣಶ್ರೇಷ್ಠಾ, ಮಾಯೆಯ ಮಾಯೆಯನ್ನು ಪರಿತ್ಯಜಿಸಿ, ಇಷ್ಟದೇವತೆಯನ್ನು ಸ್ಮರಿಸುವವನಾಗು. ಮಾಯೆಯು ಈಗ ಮನುಷ್ಯಳಾಗಿ ಉಳಿದಿರುವದಿಲ್ಲ. ಅವಳು ನನ್ನ ಪರಮ ದೇವತೆಯಾಗಿರುತ್ತಾಳೆ. ನಾನು ಅವಳನ್ನು ರಕ್ಷಣೆಮಾಡುವೆನೆನ್ನುವದಕ್ಕಿಂತ, ಅವಳೇ ನನ್ನಂಥ ಸಾವಿರಾರು ಗುಲಾಮರನ್ನು ರಕ್ಷಿಸಲು ಸಮರ್ಥಳಾಗಿರುತ್ತಾಳೆ.”

ಮುಸಲ್ಮಾನನ ಈ ವಚನಗಳನ್ನು ಕೇಳಿ, ಶಿವದಾಸನ ಅಂತರಂಗ ದೊಳಗಿನ ಮಾಯೆಯ ವಿಷಯದ ವಾಯುಯು ಕಡಿಯಲು, ಅವನ ಕಣ್ಣೊಳಗಿಂದ ಮಾಯಾಮುಕ್ತಿ ಪ್ರದವಾದ ಆನಂದಬಾಷ್ಪಗಳು ಸುರಿದವು. ಪರ ಕ್ಷಣದಲ್ಲಿಯೇ ಶಿವದಾಸನ ಇಹ ಪರ್ಯವಸಾನವಾಯಿತು. ಶಿವದಾಸನು ಉಲ್ಲಸಿತ ಮೊಗದಿಂದ ಪ್ರಾವಣ ಮಾಡುವಾಗ ಗುಲಾಮ ಆಲಿಯು ಗದ್ದದ ಕಂಠದಿಂದ:- “ಬಾಹ್ಮಣಶ್ರೇಷ್ಠರೇ, ನಡೆಯಿರಿ – ನಡೆಯುರಿನ್ನು ಸ್ವರ್ಗಕ್ಕೆ, ಪರಕ್ಷಣದಲ್ಲಿ ಸ್ವರ್ಗಸುಖಗಳಲ್ಲಿ ನಿರತರಾಗುವ ನೀವು, ನಿಮ್ಮೀ ಗುಲಾಮನನ್ನು ಶೀಘ್ರವಾಗಿ ನಿಮ್ಮೆಡೆಗೆ ಬರಮಾಡಿಕೊಳ್ಳಲಿಕ್ಕೆ ಮರಯಬೇಡಿರಿ” ಎಂದು ಪ್ರಾರ್ಥಿಸಿದನು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...