Home / ಕಥೆ / ನೀಳ್ಗತೆ / ಹಿಂದೂಮುಸಲ್ಮಾನರ ಐಕ್ಯ – ೪

ಹಿಂದೂಮುಸಲ್ಮಾನರ ಐಕ್ಯ – ೪

ಎಷ್ಟೋ ವರ್ಷಗಳು ಕಳೆದವು. ಶಿವದಾಸನು ಮೃತ್ಯು ಶಯ್ಯೆಯಲ್ಲಿ ಪವಡಿಸಿದ್ದನು. ಅವಸಾನ ಕಾಲಕ್ಕೆ ಅವನು ಗುಲಾಮ ಆಲಿಯನ್ನು ಕರೆಸಿಕೊಂಡು ಮಾಯೆಯ ಕೈಯನ್ನು ಅವನ ಕೈಯಲ್ಲಿತ್ತು, ಗದ್ಗದ ಕಂಠದಿಂದ ಏನೋ ಹೇಳಬೇಕೆಂದನು; ಆದರೆ ಅಷ್ಟರಲ್ಲಿ ಅವನ ವಾಣಿಯೇ ಕುಂಠಿತವಾಗಲು, ಸಾಶನಯನದಿಂದ ಅವರೀರ್ವವರ ಕಡೆಗೆ ನೋಡಹತ್ತಿದನು.

ಸಹೃದಯನಾದ ಗುಲಾಮ ಆಲಿಗೆ ಭ್ರಾತೃಸಮಾನನಾದ ಶಿವದಾಸನ ಆಂತರ್ಭಾವ ತಿಳಿದು ಬಂದಿತು. ಆಗ ಅವನು :- “ಬ್ರಾಹ್ಮಣಶ್ರೇಷ್ಠಾ, ಮಾಯೆಯ ಮಾಯೆಯನ್ನು ಪರಿತ್ಯಜಿಸಿ, ಇಷ್ಟದೇವತೆಯನ್ನು ಸ್ಮರಿಸುವವನಾಗು. ಮಾಯೆಯು ಈಗ ಮನುಷ್ಯಳಾಗಿ ಉಳಿದಿರುವದಿಲ್ಲ. ಅವಳು ನನ್ನ ಪರಮ ದೇವತೆಯಾಗಿರುತ್ತಾಳೆ. ನಾನು ಅವಳನ್ನು ರಕ್ಷಣೆಮಾಡುವೆನೆನ್ನುವದಕ್ಕಿಂತ, ಅವಳೇ ನನ್ನಂಥ ಸಾವಿರಾರು ಗುಲಾಮರನ್ನು ರಕ್ಷಿಸಲು ಸಮರ್ಥಳಾಗಿರುತ್ತಾಳೆ.”

ಮುಸಲ್ಮಾನನ ಈ ವಚನಗಳನ್ನು ಕೇಳಿ, ಶಿವದಾಸನ ಅಂತರಂಗ ದೊಳಗಿನ ಮಾಯೆಯ ವಿಷಯದ ವಾಯುಯು ಕಡಿಯಲು, ಅವನ ಕಣ್ಣೊಳಗಿಂದ ಮಾಯಾಮುಕ್ತಿ ಪ್ರದವಾದ ಆನಂದಬಾಷ್ಪಗಳು ಸುರಿದವು. ಪರ ಕ್ಷಣದಲ್ಲಿಯೇ ಶಿವದಾಸನ ಇಹ ಪರ್ಯವಸಾನವಾಯಿತು. ಶಿವದಾಸನು ಉಲ್ಲಸಿತ ಮೊಗದಿಂದ ಪ್ರಾವಣ ಮಾಡುವಾಗ ಗುಲಾಮ ಆಲಿಯು ಗದ್ದದ ಕಂಠದಿಂದ:- “ಬಾಹ್ಮಣಶ್ರೇಷ್ಠರೇ, ನಡೆಯಿರಿ – ನಡೆಯುರಿನ್ನು ಸ್ವರ್ಗಕ್ಕೆ, ಪರಕ್ಷಣದಲ್ಲಿ ಸ್ವರ್ಗಸುಖಗಳಲ್ಲಿ ನಿರತರಾಗುವ ನೀವು, ನಿಮ್ಮೀ ಗುಲಾಮನನ್ನು ಶೀಘ್ರವಾಗಿ ನಿಮ್ಮೆಡೆಗೆ ಬರಮಾಡಿಕೊಳ್ಳಲಿಕ್ಕೆ ಮರಯಬೇಡಿರಿ” ಎಂದು ಪ್ರಾರ್ಥಿಸಿದನು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...