Home / ಕಥೆ / ಕಾದಂಬರಿ / ವಾಗೇವಿ – ೧

ವಾಗೇವಿ – ೧

“ಅವಳ್ಯಾರು ವಾಗ್ದೇವಿಯೇ? ಆಹಾ! ಸಾಕ್ಷಾತ್‌ ಅಜನರಾಣಿಯೇ ಸರಿ.”

“ಪರಾಕೆ! ಅಜನರಾಣಿಗಾದರೂ ನಾಸಿಕನಾಸ್ತಿ. ವಾಗ್ದೇವಿಗೆ ಆ ಅಂಗವು ಸಂಪೂರ್ಣತೆಯುಳ್ಳದ್ದಾಗಿದೆ ಆದಕಾರಣ ಬೊಮ್ಮನ ಪತ್ನಿಗಿಂತ ವಾಗ್ದೇವಿಯೇ ಹೆಚ್ಚು ರೂಪವತಿಯೆಂದು ನನ್ನ ಅಭಿಪ್ರಾಯ.”

“ಪೂರ್ವಾಶ್ರಮದಲ್ಲಿ ನಮ್ಮ ಆಣ್ಣಗೆ ಇವಳು ನಾದಿನಿ. ನಾವು ಸನ್ಯಾಸ ಪಡಕೊಂಡ ತರುವಾಯ ಅವಳನ್ನು ಇದು ಮೊದಲು ನೋಡಲಿಲ್ಲವು. ಇವಳ ರೂಪಲಾವಣ್ಯವನ್ನು ಈಗ ನೋಡಿದರೆ, ಷಡ್ವೈರಿಗಳನ್ನು ನಿಗ್ರಹಮಾಡಿದ ಯತಿಯಾದರೂ ಸೋಥೋಗನೇ?”

“ಪರಾಕೆ! ಸೃಷ್ಟಿಸ್ಥಿಲಯಕ್ಕೆ ಕಾರಣಭೂತರಾದ ಅಜ ಹರಿ ರುದ್ರ– ಇವರೇ ಒಬೊಬ್ಬರನ್ನು ಕಟ್ಟಿಕೊಂಡ ಮೇಲೆ, ಮಾನನ ಜನ್ಮದಲ್ಲಿ ಹುಟ್ಟಿ ದವನ ಪಾಡೇನು?”

ಈ ಸಂಭಾಷಣೆಯು ಕುಮುದಪುರದಲ್ಲಿ ಕಾಳಿಕಾ ನದಿಯ ತೀರದಲ್ಲಿ ಸ್ವಾನವನ್ನು ಗೈದು, ಶುಚಿರ್ಭೂತರಾಗಿರುತ್ತಿದ್ದ ಚಂಚಲನೇತ್ರ ಶ್ರೀಪಾದಂ ಗಳಿಗೂ ಅವರ ಅಚ್ಚುಮೆಚ್ಚಿನ ಪಾರುಪತ್ಯಗಾರ ವೆಂಕಟಪತಿಯಾಚಾರ್ಯಗೂ ನಡೆಯುತ್ತಲಿತ್ತು. ಪರಿಚಾರಕನಾದ ಹಯಗ್ರೀವಮಾಣಿಯು ಒಂದು ಶಬ್ದ ವಾದರೂ ಕಿವಿಗೆ ಕೇಳದವನಂತೆ ಅತ್ತಿತ್ತ ನೋಡುತ್ತಾ ನಿಂತುಕೊಂಡಿದ್ದನು. ಅವನನ್ನು ನೋಡಿ ವೆಂಕಟಪತಿಯು ಶ್ರೀಪಾದಂಗಳೊಡನೆ, “ಪರಾಕೆ! ಹುಟ್ಟು ಕಿವುಡನಾದ ಈ ಮಾಣಿಯ ಅವಸ್ಥೆಯು ನಿಜವಾಗಿ ಕನಿಕರಪಡಲಿಕ್ಕೆ ಯೋಗ್ಯವಾದ್ದೇ. ನಾವು ಏನೇನು ಮಾತಾಡಿವೆನೆಂದು ಅವನಿಗೆ ಸ್ವಲ್ಪವಾದರೂ ಗೊತ್ತಾಯಿತೇ? ಶ್ರೀಹರಿ! ನಿನ್ನ ಮಹಿಮೆಯು ಅಪಾರವಾದದ್ದು. ಇಷ್ಟು ಒಳ್ಳೇ ಹುಡುಗನಿಗೆ ಕರ್ಣದೋಷವನ್ನು ನೀನು ಕೊಟ್ಟ ದೆಸೆಯಿಂದ ಅವನ ಜನ್ಮವೇ ವ್ಯರ್ಧವಾಯಿತು” ಎಂದನು. “ಇಂಧಾ ಕುಂದು ಈ ಯೌವನ ನಸ್ಥನಿಗೆ ಇದ್ದಿಲ್ಲವಾದರೆ ಈಗ ನಮ್ಮಿಬ್ಬರಿಗಾದ ಸಂಭಾಷಣೆಯನ್ನು ಅವನು ಊರಲ್ಲೆಲ್ಲಾ ಲವಮಾತ್ರದಲ್ಲಿ ಪ್ರಕಟಪಡಿಸಿ ನಾಚಿಗೆಗೇಡು ಮಾಡಿಬಿಡುತಿದ್ದ ನಲ್ಲವೇ? ಇವನಂತಿರುವ ಚಾಕರನು ದೇವರ ದಯದಿಂದಲೇ ನಮಗೆ ದೊರಕಿ ದನು” ಎಂದು ಚಂಚಲನೇತ್ರರು ಹೇಳಿದರು. ಆಗ ವೆಂಕಟಪತಿಯು “ಸತ್ಯ ಸತ್ಯ ತ್ರಿವಾಚಾ” ಎಂದು ಉದ್ದಂಡ ನಮಸ್ಕಾರ ಮಾಡಿದನು.
*****
ಮುಂದುವರೆಯುವುದು

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...