Home / ಕಥೆ / ಕಾದಂಬರಿ / ವಾಗೇವಿ – ೧

ವಾಗೇವಿ – ೧

“ಅವಳ್ಯಾರು ವಾಗ್ದೇವಿಯೇ? ಆಹಾ! ಸಾಕ್ಷಾತ್‌ ಅಜನರಾಣಿಯೇ ಸರಿ.”

“ಪರಾಕೆ! ಅಜನರಾಣಿಗಾದರೂ ನಾಸಿಕನಾಸ್ತಿ. ವಾಗ್ದೇವಿಗೆ ಆ ಅಂಗವು ಸಂಪೂರ್ಣತೆಯುಳ್ಳದ್ದಾಗಿದೆ ಆದಕಾರಣ ಬೊಮ್ಮನ ಪತ್ನಿಗಿಂತ ವಾಗ್ದೇವಿಯೇ ಹೆಚ್ಚು ರೂಪವತಿಯೆಂದು ನನ್ನ ಅಭಿಪ್ರಾಯ.”

“ಪೂರ್ವಾಶ್ರಮದಲ್ಲಿ ನಮ್ಮ ಆಣ್ಣಗೆ ಇವಳು ನಾದಿನಿ. ನಾವು ಸನ್ಯಾಸ ಪಡಕೊಂಡ ತರುವಾಯ ಅವಳನ್ನು ಇದು ಮೊದಲು ನೋಡಲಿಲ್ಲವು. ಇವಳ ರೂಪಲಾವಣ್ಯವನ್ನು ಈಗ ನೋಡಿದರೆ, ಷಡ್ವೈರಿಗಳನ್ನು ನಿಗ್ರಹಮಾಡಿದ ಯತಿಯಾದರೂ ಸೋಥೋಗನೇ?”

“ಪರಾಕೆ! ಸೃಷ್ಟಿಸ್ಥಿಲಯಕ್ಕೆ ಕಾರಣಭೂತರಾದ ಅಜ ಹರಿ ರುದ್ರ– ಇವರೇ ಒಬೊಬ್ಬರನ್ನು ಕಟ್ಟಿಕೊಂಡ ಮೇಲೆ, ಮಾನನ ಜನ್ಮದಲ್ಲಿ ಹುಟ್ಟಿ ದವನ ಪಾಡೇನು?”

ಈ ಸಂಭಾಷಣೆಯು ಕುಮುದಪುರದಲ್ಲಿ ಕಾಳಿಕಾ ನದಿಯ ತೀರದಲ್ಲಿ ಸ್ವಾನವನ್ನು ಗೈದು, ಶುಚಿರ್ಭೂತರಾಗಿರುತ್ತಿದ್ದ ಚಂಚಲನೇತ್ರ ಶ್ರೀಪಾದಂ ಗಳಿಗೂ ಅವರ ಅಚ್ಚುಮೆಚ್ಚಿನ ಪಾರುಪತ್ಯಗಾರ ವೆಂಕಟಪತಿಯಾಚಾರ್ಯಗೂ ನಡೆಯುತ್ತಲಿತ್ತು. ಪರಿಚಾರಕನಾದ ಹಯಗ್ರೀವಮಾಣಿಯು ಒಂದು ಶಬ್ದ ವಾದರೂ ಕಿವಿಗೆ ಕೇಳದವನಂತೆ ಅತ್ತಿತ್ತ ನೋಡುತ್ತಾ ನಿಂತುಕೊಂಡಿದ್ದನು. ಅವನನ್ನು ನೋಡಿ ವೆಂಕಟಪತಿಯು ಶ್ರೀಪಾದಂಗಳೊಡನೆ, “ಪರಾಕೆ! ಹುಟ್ಟು ಕಿವುಡನಾದ ಈ ಮಾಣಿಯ ಅವಸ್ಥೆಯು ನಿಜವಾಗಿ ಕನಿಕರಪಡಲಿಕ್ಕೆ ಯೋಗ್ಯವಾದ್ದೇ. ನಾವು ಏನೇನು ಮಾತಾಡಿವೆನೆಂದು ಅವನಿಗೆ ಸ್ವಲ್ಪವಾದರೂ ಗೊತ್ತಾಯಿತೇ? ಶ್ರೀಹರಿ! ನಿನ್ನ ಮಹಿಮೆಯು ಅಪಾರವಾದದ್ದು. ಇಷ್ಟು ಒಳ್ಳೇ ಹುಡುಗನಿಗೆ ಕರ್ಣದೋಷವನ್ನು ನೀನು ಕೊಟ್ಟ ದೆಸೆಯಿಂದ ಅವನ ಜನ್ಮವೇ ವ್ಯರ್ಧವಾಯಿತು” ಎಂದನು. “ಇಂಧಾ ಕುಂದು ಈ ಯೌವನ ನಸ್ಥನಿಗೆ ಇದ್ದಿಲ್ಲವಾದರೆ ಈಗ ನಮ್ಮಿಬ್ಬರಿಗಾದ ಸಂಭಾಷಣೆಯನ್ನು ಅವನು ಊರಲ್ಲೆಲ್ಲಾ ಲವಮಾತ್ರದಲ್ಲಿ ಪ್ರಕಟಪಡಿಸಿ ನಾಚಿಗೆಗೇಡು ಮಾಡಿಬಿಡುತಿದ್ದ ನಲ್ಲವೇ? ಇವನಂತಿರುವ ಚಾಕರನು ದೇವರ ದಯದಿಂದಲೇ ನಮಗೆ ದೊರಕಿ ದನು” ಎಂದು ಚಂಚಲನೇತ್ರರು ಹೇಳಿದರು. ಆಗ ವೆಂಕಟಪತಿಯು “ಸತ್ಯ ಸತ್ಯ ತ್ರಿವಾಚಾ” ಎಂದು ಉದ್ದಂಡ ನಮಸ್ಕಾರ ಮಾಡಿದನು.
*****
ಮುಂದುವರೆಯುವುದು

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...