Home / ಕಥೆ / ಕಾದಂಬರಿ / ವಾಗೇವಿ – ೧

ವಾಗೇವಿ – ೧

“ಅವಳ್ಯಾರು ವಾಗ್ದೇವಿಯೇ? ಆಹಾ! ಸಾಕ್ಷಾತ್‌ ಅಜನರಾಣಿಯೇ ಸರಿ.”

“ಪರಾಕೆ! ಅಜನರಾಣಿಗಾದರೂ ನಾಸಿಕನಾಸ್ತಿ. ವಾಗ್ದೇವಿಗೆ ಆ ಅಂಗವು ಸಂಪೂರ್ಣತೆಯುಳ್ಳದ್ದಾಗಿದೆ ಆದಕಾರಣ ಬೊಮ್ಮನ ಪತ್ನಿಗಿಂತ ವಾಗ್ದೇವಿಯೇ ಹೆಚ್ಚು ರೂಪವತಿಯೆಂದು ನನ್ನ ಅಭಿಪ್ರಾಯ.”

“ಪೂರ್ವಾಶ್ರಮದಲ್ಲಿ ನಮ್ಮ ಆಣ್ಣಗೆ ಇವಳು ನಾದಿನಿ. ನಾವು ಸನ್ಯಾಸ ಪಡಕೊಂಡ ತರುವಾಯ ಅವಳನ್ನು ಇದು ಮೊದಲು ನೋಡಲಿಲ್ಲವು. ಇವಳ ರೂಪಲಾವಣ್ಯವನ್ನು ಈಗ ನೋಡಿದರೆ, ಷಡ್ವೈರಿಗಳನ್ನು ನಿಗ್ರಹಮಾಡಿದ ಯತಿಯಾದರೂ ಸೋಥೋಗನೇ?”

“ಪರಾಕೆ! ಸೃಷ್ಟಿಸ್ಥಿಲಯಕ್ಕೆ ಕಾರಣಭೂತರಾದ ಅಜ ಹರಿ ರುದ್ರ– ಇವರೇ ಒಬೊಬ್ಬರನ್ನು ಕಟ್ಟಿಕೊಂಡ ಮೇಲೆ, ಮಾನನ ಜನ್ಮದಲ್ಲಿ ಹುಟ್ಟಿ ದವನ ಪಾಡೇನು?”

ಈ ಸಂಭಾಷಣೆಯು ಕುಮುದಪುರದಲ್ಲಿ ಕಾಳಿಕಾ ನದಿಯ ತೀರದಲ್ಲಿ ಸ್ವಾನವನ್ನು ಗೈದು, ಶುಚಿರ್ಭೂತರಾಗಿರುತ್ತಿದ್ದ ಚಂಚಲನೇತ್ರ ಶ್ರೀಪಾದಂ ಗಳಿಗೂ ಅವರ ಅಚ್ಚುಮೆಚ್ಚಿನ ಪಾರುಪತ್ಯಗಾರ ವೆಂಕಟಪತಿಯಾಚಾರ್ಯಗೂ ನಡೆಯುತ್ತಲಿತ್ತು. ಪರಿಚಾರಕನಾದ ಹಯಗ್ರೀವಮಾಣಿಯು ಒಂದು ಶಬ್ದ ವಾದರೂ ಕಿವಿಗೆ ಕೇಳದವನಂತೆ ಅತ್ತಿತ್ತ ನೋಡುತ್ತಾ ನಿಂತುಕೊಂಡಿದ್ದನು. ಅವನನ್ನು ನೋಡಿ ವೆಂಕಟಪತಿಯು ಶ್ರೀಪಾದಂಗಳೊಡನೆ, “ಪರಾಕೆ! ಹುಟ್ಟು ಕಿವುಡನಾದ ಈ ಮಾಣಿಯ ಅವಸ್ಥೆಯು ನಿಜವಾಗಿ ಕನಿಕರಪಡಲಿಕ್ಕೆ ಯೋಗ್ಯವಾದ್ದೇ. ನಾವು ಏನೇನು ಮಾತಾಡಿವೆನೆಂದು ಅವನಿಗೆ ಸ್ವಲ್ಪವಾದರೂ ಗೊತ್ತಾಯಿತೇ? ಶ್ರೀಹರಿ! ನಿನ್ನ ಮಹಿಮೆಯು ಅಪಾರವಾದದ್ದು. ಇಷ್ಟು ಒಳ್ಳೇ ಹುಡುಗನಿಗೆ ಕರ್ಣದೋಷವನ್ನು ನೀನು ಕೊಟ್ಟ ದೆಸೆಯಿಂದ ಅವನ ಜನ್ಮವೇ ವ್ಯರ್ಧವಾಯಿತು” ಎಂದನು. “ಇಂಧಾ ಕುಂದು ಈ ಯೌವನ ನಸ್ಥನಿಗೆ ಇದ್ದಿಲ್ಲವಾದರೆ ಈಗ ನಮ್ಮಿಬ್ಬರಿಗಾದ ಸಂಭಾಷಣೆಯನ್ನು ಅವನು ಊರಲ್ಲೆಲ್ಲಾ ಲವಮಾತ್ರದಲ್ಲಿ ಪ್ರಕಟಪಡಿಸಿ ನಾಚಿಗೆಗೇಡು ಮಾಡಿಬಿಡುತಿದ್ದ ನಲ್ಲವೇ? ಇವನಂತಿರುವ ಚಾಕರನು ದೇವರ ದಯದಿಂದಲೇ ನಮಗೆ ದೊರಕಿ ದನು” ಎಂದು ಚಂಚಲನೇತ್ರರು ಹೇಳಿದರು. ಆಗ ವೆಂಕಟಪತಿಯು “ಸತ್ಯ ಸತ್ಯ ತ್ರಿವಾಚಾ” ಎಂದು ಉದ್ದಂಡ ನಮಸ್ಕಾರ ಮಾಡಿದನು.
*****
ಮುಂದುವರೆಯುವುದು

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...