ಮೈಸೂರು ಮಕ್ಕಳು

ನಿಮ್ಮ ನಾಡಾವುದು ?
ಮೈಸೂರು.
ನಿಮ್ಮೂರದಾವುದು ?
ಮೈಸೂರು.
ಕನ್ನಡದ ಕಣ್ಣದು,
ಮೈಸೂರು.
ನಾಲುಮಡಿ ಕೃಷ್ಣನ
ಮೈಸೂರು.

ಅಲ್ಲೆಲ್ಲಿ ನೋಡಿದರು ಬಾನ ಕರೆಯಲಿ ಹದುಗಿ ಕಾರ ಮುಗಿಲಂತಿಹುವು ಬೆಟ್ಟ ಹಬ್ಬಿ ;
ತೆರೆ ಎದ್ದು ಬಿದ್ದು ಬಹ ಬಯಲಲ್ಲಿ ಹಳ್ಳಿಗಳು, ತಾವರೆಯಕೆರೆ, ತೋಟ ಹೊಲದ ಹಸುರು;
ಕಾಡಿನಲಿ ನುಸಿಯುತ್ತ, ಕಲ್ಲಿನಲ್ಲಿ ಮೊರೆಯುತ್ತ, ಮರಳಿನಲ್ಲಿ ಸುಳಿಸುಳಿದು, ಸರಿಯ ದುಮುಕಿ,
ಪಯಿರುಗಳ ಬದುಕಾಗಿ, ಹೊಳಲುಗಳ ಬೆಳಕಾಗಿ, ಕಣ್ಣುಗಳ ಬೆರಗಾಗಿ ಹರಿವ ಹೊನಲು.
ಅಲ್ಲಿ ಅಲೆಯಲೆಯಾಗಿ ಬಂದು, ನೆಲೆನೆಲೆಯಾಗಿ ನಿಂದು, ಹಲತೆರದಿಂದ ನುಡಿದು, ನಡೆದು,
ಕಡೆಗೆ ನಾಡೊಂದೆಂದು, ದೊರೆಯೊಬ್ಬ ನಮಗೆಂದು, ಬಾಳ ಬೆಲೆ ಹುದುವೆಂದು ಕಲಿತು, ಕಲೆತು,
ಜಾಣಿನಲಿ, ಚೆಲುವಿನಲಿ, ಸೊಗಸಿನಲಿ, ನಯದಲೌದಾರ್‍ಯದಲಿ, ಕಾರ್‍ಯದಲಿ ಕಳಶವೆನಿಸಿ,
ಮೆರೆಯುತಿಹ ಜನವ ನಾನೇನೆಂಬೆ, ಎಂತು ನಾ ಕನ್ನಡಿಗರೈಸಿರಿಯ ಬಣ್ಣಿಸುವೆನು.

ಚಿನ್ನದ ನಾಡದು,
ಮೈಸೂರು,
ಗಂಧದ ಗುಡಿಯದು,
ಮೈಸೂರು,
ವೀಣೆಯ ಬೆಡಗದು,
ಮೈಸೂರು,
ನಾಲುಮಡಿ ಕೃಷ್ಣನ
ಮೈಸೂರು,

ಅಲ್ಲೊಬ್ಬ ನಮಗಿಹನು ನಾಯಕನು ; ಭಕ್ತಿಯಲಿ ನಿಲುಸಿಲುಕಿ ಕುಣ್ತುಂಬ ನೋಡುತಿರಲು,
ಆನೆಯಂಬಾರಿಯಲಿ ನಸುನಗೆಯನಿಕ್ಕೆಲಕೆ ಬೀರಿ, ಜನರಕ್ಕರೆಯನುಕ್ಕಿಸುವನು.
ಧೀರನಾತನು ; ತುಂಬುಗಾಂಭೀರ್‍ಯದಲಿ ಸತ್ಯವನೆ ಎತ್ತಿ ನಿಲಿಸುವನು ಪ್ರಜೆಯ ತಂದೆ ;
ಮರೆತು ತನ್ನನು ರಾಜ್ಯ ಸೇವೆಯಲಿ, ಸಲಿಸುವನು ಧರ್‍ಮವನು ರಾಜರ್ಷಿ ಕರ್‍ಮಯೋಗಿ.
ಬನ್ನಿ ಕೆಳೆಯರ, ನಮ್ಮ ಬಾಳಿಕೆಯ ಕಾಣಿಕೆಯನೊಪ್ಪಿಸುವ, ಕೈಕೊಳುವ ದೊರೆಯ ಗುರಿಯ ;
ನೋಹಿಯಾತನದು-ತನ್ನರ ಮನೆಯ ಹಸಗೆಯ್ದು ಬೆಳಗಿದಂತೆಯೆ, ಬೆಳಗಿ ಊರ, ನಾಡ,
ಹಸಗೆಯ್ವೆ, ಹೊಸಗೆಯ್ವೆನೆಂಬೊಲುಮೆ ; ನಾವೆಲ್ಲರಾ ನಾಯಕನ ದಳದಿ ದೀಕ್ಷೆ ಪಡೆದು,
ಮೀರಿ ಬಳಸುವ ಬನ್ನಿ ಬುದ್ಧಿಯನು ಶ್ರದ್ಧೆಯನು ಕನ್ನಡಿಗರೈಸಿರಿಯ ಬೆಳೆಯ ಬೆಳಸಿ.

ಬೆಳೆಯುವ ನಾಡದು,
ಮೈಸೂರು.
ಇಳೆಯ ಮಾದರಿಯದು
ಮೈಸೂರು.
ಕನ್ನಡಿಗನುಸಿರದು,
ಮೈಸೂರು.
ನಾಲುಮಡಿ ಕೃಷ್ಣನ
ಮೈಸೂರು,
*****
೧೯೨೦

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿನ್ನ ಹೆಸರು
Next post ದಾವಣಗೆರೆ ಜಿಲ್ಲೆಯ ಕಥಾಸಾಹಿತ್ಯ

ಸಣ್ಣ ಕತೆ

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…