ಮೈಸೂರು ಮಕ್ಕಳು

ನಿಮ್ಮ ನಾಡಾವುದು ?
ಮೈಸೂರು.
ನಿಮ್ಮೂರದಾವುದು ?
ಮೈಸೂರು.
ಕನ್ನಡದ ಕಣ್ಣದು,
ಮೈಸೂರು.
ನಾಲುಮಡಿ ಕೃಷ್ಣನ
ಮೈಸೂರು.

ಅಲ್ಲೆಲ್ಲಿ ನೋಡಿದರು ಬಾನ ಕರೆಯಲಿ ಹದುಗಿ ಕಾರ ಮುಗಿಲಂತಿಹುವು ಬೆಟ್ಟ ಹಬ್ಬಿ ;
ತೆರೆ ಎದ್ದು ಬಿದ್ದು ಬಹ ಬಯಲಲ್ಲಿ ಹಳ್ಳಿಗಳು, ತಾವರೆಯಕೆರೆ, ತೋಟ ಹೊಲದ ಹಸುರು;
ಕಾಡಿನಲಿ ನುಸಿಯುತ್ತ, ಕಲ್ಲಿನಲ್ಲಿ ಮೊರೆಯುತ್ತ, ಮರಳಿನಲ್ಲಿ ಸುಳಿಸುಳಿದು, ಸರಿಯ ದುಮುಕಿ,
ಪಯಿರುಗಳ ಬದುಕಾಗಿ, ಹೊಳಲುಗಳ ಬೆಳಕಾಗಿ, ಕಣ್ಣುಗಳ ಬೆರಗಾಗಿ ಹರಿವ ಹೊನಲು.
ಅಲ್ಲಿ ಅಲೆಯಲೆಯಾಗಿ ಬಂದು, ನೆಲೆನೆಲೆಯಾಗಿ ನಿಂದು, ಹಲತೆರದಿಂದ ನುಡಿದು, ನಡೆದು,
ಕಡೆಗೆ ನಾಡೊಂದೆಂದು, ದೊರೆಯೊಬ್ಬ ನಮಗೆಂದು, ಬಾಳ ಬೆಲೆ ಹುದುವೆಂದು ಕಲಿತು, ಕಲೆತು,
ಜಾಣಿನಲಿ, ಚೆಲುವಿನಲಿ, ಸೊಗಸಿನಲಿ, ನಯದಲೌದಾರ್‍ಯದಲಿ, ಕಾರ್‍ಯದಲಿ ಕಳಶವೆನಿಸಿ,
ಮೆರೆಯುತಿಹ ಜನವ ನಾನೇನೆಂಬೆ, ಎಂತು ನಾ ಕನ್ನಡಿಗರೈಸಿರಿಯ ಬಣ್ಣಿಸುವೆನು.

ಚಿನ್ನದ ನಾಡದು,
ಮೈಸೂರು,
ಗಂಧದ ಗುಡಿಯದು,
ಮೈಸೂರು,
ವೀಣೆಯ ಬೆಡಗದು,
ಮೈಸೂರು,
ನಾಲುಮಡಿ ಕೃಷ್ಣನ
ಮೈಸೂರು,

ಅಲ್ಲೊಬ್ಬ ನಮಗಿಹನು ನಾಯಕನು ; ಭಕ್ತಿಯಲಿ ನಿಲುಸಿಲುಕಿ ಕುಣ್ತುಂಬ ನೋಡುತಿರಲು,
ಆನೆಯಂಬಾರಿಯಲಿ ನಸುನಗೆಯನಿಕ್ಕೆಲಕೆ ಬೀರಿ, ಜನರಕ್ಕರೆಯನುಕ್ಕಿಸುವನು.
ಧೀರನಾತನು ; ತುಂಬುಗಾಂಭೀರ್‍ಯದಲಿ ಸತ್ಯವನೆ ಎತ್ತಿ ನಿಲಿಸುವನು ಪ್ರಜೆಯ ತಂದೆ ;
ಮರೆತು ತನ್ನನು ರಾಜ್ಯ ಸೇವೆಯಲಿ, ಸಲಿಸುವನು ಧರ್‍ಮವನು ರಾಜರ್ಷಿ ಕರ್‍ಮಯೋಗಿ.
ಬನ್ನಿ ಕೆಳೆಯರ, ನಮ್ಮ ಬಾಳಿಕೆಯ ಕಾಣಿಕೆಯನೊಪ್ಪಿಸುವ, ಕೈಕೊಳುವ ದೊರೆಯ ಗುರಿಯ ;
ನೋಹಿಯಾತನದು-ತನ್ನರ ಮನೆಯ ಹಸಗೆಯ್ದು ಬೆಳಗಿದಂತೆಯೆ, ಬೆಳಗಿ ಊರ, ನಾಡ,
ಹಸಗೆಯ್ವೆ, ಹೊಸಗೆಯ್ವೆನೆಂಬೊಲುಮೆ ; ನಾವೆಲ್ಲರಾ ನಾಯಕನ ದಳದಿ ದೀಕ್ಷೆ ಪಡೆದು,
ಮೀರಿ ಬಳಸುವ ಬನ್ನಿ ಬುದ್ಧಿಯನು ಶ್ರದ್ಧೆಯನು ಕನ್ನಡಿಗರೈಸಿರಿಯ ಬೆಳೆಯ ಬೆಳಸಿ.

ಬೆಳೆಯುವ ನಾಡದು,
ಮೈಸೂರು.
ಇಳೆಯ ಮಾದರಿಯದು
ಮೈಸೂರು.
ಕನ್ನಡಿಗನುಸಿರದು,
ಮೈಸೂರು.
ನಾಲುಮಡಿ ಕೃಷ್ಣನ
ಮೈಸೂರು,
*****
೧೯೨೦

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿನ್ನ ಹೆಸರು
Next post ದಾವಣಗೆರೆ ಜಿಲ್ಲೆಯ ಕಥಾಸಾಹಿತ್ಯ

ಸಣ್ಣ ಕತೆ

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

cheap jordans|wholesale air max|wholesale jordans|wholesale jewelry|wholesale jerseys