Home / ಕವನ / ಕವಿತೆ / ಮೈಸೂರು ಮಕ್ಕಳು

ಮೈಸೂರು ಮಕ್ಕಳು

ನಿಮ್ಮ ನಾಡಾವುದು ?
ಮೈಸೂರು.
ನಿಮ್ಮೂರದಾವುದು ?
ಮೈಸೂರು.
ಕನ್ನಡದ ಕಣ್ಣದು,
ಮೈಸೂರು.
ನಾಲುಮಡಿ ಕೃಷ್ಣನ
ಮೈಸೂರು.

ಅಲ್ಲೆಲ್ಲಿ ನೋಡಿದರು ಬಾನ ಕರೆಯಲಿ ಹದುಗಿ ಕಾರ ಮುಗಿಲಂತಿಹುವು ಬೆಟ್ಟ ಹಬ್ಬಿ ;
ತೆರೆ ಎದ್ದು ಬಿದ್ದು ಬಹ ಬಯಲಲ್ಲಿ ಹಳ್ಳಿಗಳು, ತಾವರೆಯಕೆರೆ, ತೋಟ ಹೊಲದ ಹಸುರು;
ಕಾಡಿನಲಿ ನುಸಿಯುತ್ತ, ಕಲ್ಲಿನಲ್ಲಿ ಮೊರೆಯುತ್ತ, ಮರಳಿನಲ್ಲಿ ಸುಳಿಸುಳಿದು, ಸರಿಯ ದುಮುಕಿ,
ಪಯಿರುಗಳ ಬದುಕಾಗಿ, ಹೊಳಲುಗಳ ಬೆಳಕಾಗಿ, ಕಣ್ಣುಗಳ ಬೆರಗಾಗಿ ಹರಿವ ಹೊನಲು.
ಅಲ್ಲಿ ಅಲೆಯಲೆಯಾಗಿ ಬಂದು, ನೆಲೆನೆಲೆಯಾಗಿ ನಿಂದು, ಹಲತೆರದಿಂದ ನುಡಿದು, ನಡೆದು,
ಕಡೆಗೆ ನಾಡೊಂದೆಂದು, ದೊರೆಯೊಬ್ಬ ನಮಗೆಂದು, ಬಾಳ ಬೆಲೆ ಹುದುವೆಂದು ಕಲಿತು, ಕಲೆತು,
ಜಾಣಿನಲಿ, ಚೆಲುವಿನಲಿ, ಸೊಗಸಿನಲಿ, ನಯದಲೌದಾರ್‍ಯದಲಿ, ಕಾರ್‍ಯದಲಿ ಕಳಶವೆನಿಸಿ,
ಮೆರೆಯುತಿಹ ಜನವ ನಾನೇನೆಂಬೆ, ಎಂತು ನಾ ಕನ್ನಡಿಗರೈಸಿರಿಯ ಬಣ್ಣಿಸುವೆನು.

ಚಿನ್ನದ ನಾಡದು,
ಮೈಸೂರು,
ಗಂಧದ ಗುಡಿಯದು,
ಮೈಸೂರು,
ವೀಣೆಯ ಬೆಡಗದು,
ಮೈಸೂರು,
ನಾಲುಮಡಿ ಕೃಷ್ಣನ
ಮೈಸೂರು,

ಅಲ್ಲೊಬ್ಬ ನಮಗಿಹನು ನಾಯಕನು ; ಭಕ್ತಿಯಲಿ ನಿಲುಸಿಲುಕಿ ಕುಣ್ತುಂಬ ನೋಡುತಿರಲು,
ಆನೆಯಂಬಾರಿಯಲಿ ನಸುನಗೆಯನಿಕ್ಕೆಲಕೆ ಬೀರಿ, ಜನರಕ್ಕರೆಯನುಕ್ಕಿಸುವನು.
ಧೀರನಾತನು ; ತುಂಬುಗಾಂಭೀರ್‍ಯದಲಿ ಸತ್ಯವನೆ ಎತ್ತಿ ನಿಲಿಸುವನು ಪ್ರಜೆಯ ತಂದೆ ;
ಮರೆತು ತನ್ನನು ರಾಜ್ಯ ಸೇವೆಯಲಿ, ಸಲಿಸುವನು ಧರ್‍ಮವನು ರಾಜರ್ಷಿ ಕರ್‍ಮಯೋಗಿ.
ಬನ್ನಿ ಕೆಳೆಯರ, ನಮ್ಮ ಬಾಳಿಕೆಯ ಕಾಣಿಕೆಯನೊಪ್ಪಿಸುವ, ಕೈಕೊಳುವ ದೊರೆಯ ಗುರಿಯ ;
ನೋಹಿಯಾತನದು-ತನ್ನರ ಮನೆಯ ಹಸಗೆಯ್ದು ಬೆಳಗಿದಂತೆಯೆ, ಬೆಳಗಿ ಊರ, ನಾಡ,
ಹಸಗೆಯ್ವೆ, ಹೊಸಗೆಯ್ವೆನೆಂಬೊಲುಮೆ ; ನಾವೆಲ್ಲರಾ ನಾಯಕನ ದಳದಿ ದೀಕ್ಷೆ ಪಡೆದು,
ಮೀರಿ ಬಳಸುವ ಬನ್ನಿ ಬುದ್ಧಿಯನು ಶ್ರದ್ಧೆಯನು ಕನ್ನಡಿಗರೈಸಿರಿಯ ಬೆಳೆಯ ಬೆಳಸಿ.

ಬೆಳೆಯುವ ನಾಡದು,
ಮೈಸೂರು.
ಇಳೆಯ ಮಾದರಿಯದು
ಮೈಸೂರು.
ಕನ್ನಡಿಗನುಸಿರದು,
ಮೈಸೂರು.
ನಾಲುಮಡಿ ಕೃಷ್ಣನ
ಮೈಸೂರು,
*****
೧೯೨೦

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...