Home / ಕವನ / ಕವಿತೆ / ಮೈಸೂರು ಮಕ್ಕಳು

ಮೈಸೂರು ಮಕ್ಕಳು

ನಿಮ್ಮ ನಾಡಾವುದು ?
ಮೈಸೂರು.
ನಿಮ್ಮೂರದಾವುದು ?
ಮೈಸೂರು.
ಕನ್ನಡದ ಕಣ್ಣದು,
ಮೈಸೂರು.
ನಾಲುಮಡಿ ಕೃಷ್ಣನ
ಮೈಸೂರು.

ಅಲ್ಲೆಲ್ಲಿ ನೋಡಿದರು ಬಾನ ಕರೆಯಲಿ ಹದುಗಿ ಕಾರ ಮುಗಿಲಂತಿಹುವು ಬೆಟ್ಟ ಹಬ್ಬಿ ;
ತೆರೆ ಎದ್ದು ಬಿದ್ದು ಬಹ ಬಯಲಲ್ಲಿ ಹಳ್ಳಿಗಳು, ತಾವರೆಯಕೆರೆ, ತೋಟ ಹೊಲದ ಹಸುರು;
ಕಾಡಿನಲಿ ನುಸಿಯುತ್ತ, ಕಲ್ಲಿನಲ್ಲಿ ಮೊರೆಯುತ್ತ, ಮರಳಿನಲ್ಲಿ ಸುಳಿಸುಳಿದು, ಸರಿಯ ದುಮುಕಿ,
ಪಯಿರುಗಳ ಬದುಕಾಗಿ, ಹೊಳಲುಗಳ ಬೆಳಕಾಗಿ, ಕಣ್ಣುಗಳ ಬೆರಗಾಗಿ ಹರಿವ ಹೊನಲು.
ಅಲ್ಲಿ ಅಲೆಯಲೆಯಾಗಿ ಬಂದು, ನೆಲೆನೆಲೆಯಾಗಿ ನಿಂದು, ಹಲತೆರದಿಂದ ನುಡಿದು, ನಡೆದು,
ಕಡೆಗೆ ನಾಡೊಂದೆಂದು, ದೊರೆಯೊಬ್ಬ ನಮಗೆಂದು, ಬಾಳ ಬೆಲೆ ಹುದುವೆಂದು ಕಲಿತು, ಕಲೆತು,
ಜಾಣಿನಲಿ, ಚೆಲುವಿನಲಿ, ಸೊಗಸಿನಲಿ, ನಯದಲೌದಾರ್‍ಯದಲಿ, ಕಾರ್‍ಯದಲಿ ಕಳಶವೆನಿಸಿ,
ಮೆರೆಯುತಿಹ ಜನವ ನಾನೇನೆಂಬೆ, ಎಂತು ನಾ ಕನ್ನಡಿಗರೈಸಿರಿಯ ಬಣ್ಣಿಸುವೆನು.

ಚಿನ್ನದ ನಾಡದು,
ಮೈಸೂರು,
ಗಂಧದ ಗುಡಿಯದು,
ಮೈಸೂರು,
ವೀಣೆಯ ಬೆಡಗದು,
ಮೈಸೂರು,
ನಾಲುಮಡಿ ಕೃಷ್ಣನ
ಮೈಸೂರು,

ಅಲ್ಲೊಬ್ಬ ನಮಗಿಹನು ನಾಯಕನು ; ಭಕ್ತಿಯಲಿ ನಿಲುಸಿಲುಕಿ ಕುಣ್ತುಂಬ ನೋಡುತಿರಲು,
ಆನೆಯಂಬಾರಿಯಲಿ ನಸುನಗೆಯನಿಕ್ಕೆಲಕೆ ಬೀರಿ, ಜನರಕ್ಕರೆಯನುಕ್ಕಿಸುವನು.
ಧೀರನಾತನು ; ತುಂಬುಗಾಂಭೀರ್‍ಯದಲಿ ಸತ್ಯವನೆ ಎತ್ತಿ ನಿಲಿಸುವನು ಪ್ರಜೆಯ ತಂದೆ ;
ಮರೆತು ತನ್ನನು ರಾಜ್ಯ ಸೇವೆಯಲಿ, ಸಲಿಸುವನು ಧರ್‍ಮವನು ರಾಜರ್ಷಿ ಕರ್‍ಮಯೋಗಿ.
ಬನ್ನಿ ಕೆಳೆಯರ, ನಮ್ಮ ಬಾಳಿಕೆಯ ಕಾಣಿಕೆಯನೊಪ್ಪಿಸುವ, ಕೈಕೊಳುವ ದೊರೆಯ ಗುರಿಯ ;
ನೋಹಿಯಾತನದು-ತನ್ನರ ಮನೆಯ ಹಸಗೆಯ್ದು ಬೆಳಗಿದಂತೆಯೆ, ಬೆಳಗಿ ಊರ, ನಾಡ,
ಹಸಗೆಯ್ವೆ, ಹೊಸಗೆಯ್ವೆನೆಂಬೊಲುಮೆ ; ನಾವೆಲ್ಲರಾ ನಾಯಕನ ದಳದಿ ದೀಕ್ಷೆ ಪಡೆದು,
ಮೀರಿ ಬಳಸುವ ಬನ್ನಿ ಬುದ್ಧಿಯನು ಶ್ರದ್ಧೆಯನು ಕನ್ನಡಿಗರೈಸಿರಿಯ ಬೆಳೆಯ ಬೆಳಸಿ.

ಬೆಳೆಯುವ ನಾಡದು,
ಮೈಸೂರು.
ಇಳೆಯ ಮಾದರಿಯದು
ಮೈಸೂರು.
ಕನ್ನಡಿಗನುಸಿರದು,
ಮೈಸೂರು.
ನಾಲುಮಡಿ ಕೃಷ್ಣನ
ಮೈಸೂರು,
*****
೧೯೨೦

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...