Home / ಕವನ / ಕವಿತೆ / ಮೈಸೂರು ಮಕ್ಕಳು

ಮೈಸೂರು ಮಕ್ಕಳು

ನಿಮ್ಮ ನಾಡಾವುದು ?
ಮೈಸೂರು.
ನಿಮ್ಮೂರದಾವುದು ?
ಮೈಸೂರು.
ಕನ್ನಡದ ಕಣ್ಣದು,
ಮೈಸೂರು.
ನಾಲುಮಡಿ ಕೃಷ್ಣನ
ಮೈಸೂರು.

ಅಲ್ಲೆಲ್ಲಿ ನೋಡಿದರು ಬಾನ ಕರೆಯಲಿ ಹದುಗಿ ಕಾರ ಮುಗಿಲಂತಿಹುವು ಬೆಟ್ಟ ಹಬ್ಬಿ ;
ತೆರೆ ಎದ್ದು ಬಿದ್ದು ಬಹ ಬಯಲಲ್ಲಿ ಹಳ್ಳಿಗಳು, ತಾವರೆಯಕೆರೆ, ತೋಟ ಹೊಲದ ಹಸುರು;
ಕಾಡಿನಲಿ ನುಸಿಯುತ್ತ, ಕಲ್ಲಿನಲ್ಲಿ ಮೊರೆಯುತ್ತ, ಮರಳಿನಲ್ಲಿ ಸುಳಿಸುಳಿದು, ಸರಿಯ ದುಮುಕಿ,
ಪಯಿರುಗಳ ಬದುಕಾಗಿ, ಹೊಳಲುಗಳ ಬೆಳಕಾಗಿ, ಕಣ್ಣುಗಳ ಬೆರಗಾಗಿ ಹರಿವ ಹೊನಲು.
ಅಲ್ಲಿ ಅಲೆಯಲೆಯಾಗಿ ಬಂದು, ನೆಲೆನೆಲೆಯಾಗಿ ನಿಂದು, ಹಲತೆರದಿಂದ ನುಡಿದು, ನಡೆದು,
ಕಡೆಗೆ ನಾಡೊಂದೆಂದು, ದೊರೆಯೊಬ್ಬ ನಮಗೆಂದು, ಬಾಳ ಬೆಲೆ ಹುದುವೆಂದು ಕಲಿತು, ಕಲೆತು,
ಜಾಣಿನಲಿ, ಚೆಲುವಿನಲಿ, ಸೊಗಸಿನಲಿ, ನಯದಲೌದಾರ್‍ಯದಲಿ, ಕಾರ್‍ಯದಲಿ ಕಳಶವೆನಿಸಿ,
ಮೆರೆಯುತಿಹ ಜನವ ನಾನೇನೆಂಬೆ, ಎಂತು ನಾ ಕನ್ನಡಿಗರೈಸಿರಿಯ ಬಣ್ಣಿಸುವೆನು.

ಚಿನ್ನದ ನಾಡದು,
ಮೈಸೂರು,
ಗಂಧದ ಗುಡಿಯದು,
ಮೈಸೂರು,
ವೀಣೆಯ ಬೆಡಗದು,
ಮೈಸೂರು,
ನಾಲುಮಡಿ ಕೃಷ್ಣನ
ಮೈಸೂರು,

ಅಲ್ಲೊಬ್ಬ ನಮಗಿಹನು ನಾಯಕನು ; ಭಕ್ತಿಯಲಿ ನಿಲುಸಿಲುಕಿ ಕುಣ್ತುಂಬ ನೋಡುತಿರಲು,
ಆನೆಯಂಬಾರಿಯಲಿ ನಸುನಗೆಯನಿಕ್ಕೆಲಕೆ ಬೀರಿ, ಜನರಕ್ಕರೆಯನುಕ್ಕಿಸುವನು.
ಧೀರನಾತನು ; ತುಂಬುಗಾಂಭೀರ್‍ಯದಲಿ ಸತ್ಯವನೆ ಎತ್ತಿ ನಿಲಿಸುವನು ಪ್ರಜೆಯ ತಂದೆ ;
ಮರೆತು ತನ್ನನು ರಾಜ್ಯ ಸೇವೆಯಲಿ, ಸಲಿಸುವನು ಧರ್‍ಮವನು ರಾಜರ್ಷಿ ಕರ್‍ಮಯೋಗಿ.
ಬನ್ನಿ ಕೆಳೆಯರ, ನಮ್ಮ ಬಾಳಿಕೆಯ ಕಾಣಿಕೆಯನೊಪ್ಪಿಸುವ, ಕೈಕೊಳುವ ದೊರೆಯ ಗುರಿಯ ;
ನೋಹಿಯಾತನದು-ತನ್ನರ ಮನೆಯ ಹಸಗೆಯ್ದು ಬೆಳಗಿದಂತೆಯೆ, ಬೆಳಗಿ ಊರ, ನಾಡ,
ಹಸಗೆಯ್ವೆ, ಹೊಸಗೆಯ್ವೆನೆಂಬೊಲುಮೆ ; ನಾವೆಲ್ಲರಾ ನಾಯಕನ ದಳದಿ ದೀಕ್ಷೆ ಪಡೆದು,
ಮೀರಿ ಬಳಸುವ ಬನ್ನಿ ಬುದ್ಧಿಯನು ಶ್ರದ್ಧೆಯನು ಕನ್ನಡಿಗರೈಸಿರಿಯ ಬೆಳೆಯ ಬೆಳಸಿ.

ಬೆಳೆಯುವ ನಾಡದು,
ಮೈಸೂರು.
ಇಳೆಯ ಮಾದರಿಯದು
ಮೈಸೂರು.
ಕನ್ನಡಿಗನುಸಿರದು,
ಮೈಸೂರು.
ನಾಲುಮಡಿ ಕೃಷ್ಣನ
ಮೈಸೂರು,
*****
೧೯೨೦

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...