Home / ಕವನ / ಕವಿತೆ / ಶ್ರೀ ಜಯನ ಬೆಳಕು

ಶ್ರೀ ಜಯನ ಬೆಳಕು

ಕನ್ನಡದ ಬಾನಿನಲಿ ಮೂಡಿತದೊ ಬೆಳಕು,
ಪುಣ್ಯ ಕಣ್ದೆರೆದಂತೆ ಬೆಳಕು!
ಕನ್ನಡಿಗರೊಲುಮೆ ತೆರೆಹೊಮ್ಮಿಸುವ ಬೆಳಕು,
ಹೊನ್ನ ಕನಸನು ತರುವ ಹೊಸ ಕಳೆಯ ಬೆಳಕು,
ಮುನ್ನರಿಯದಚ್ಚರಿಯ ಮೆಚ್ಚು ಬೆಳಕು.
ಬೆಳ್ಳಿ ಬೆಳಗುವ ಬಾನ ಬೆಳ್ಳನೆಯ ಬೆಳಕು,
ಒಳ್ಳಿತೊಸರುವ ಹೆಸರ ದೊಡ್ಡ ಬೆಳಕು.
ಸೂರ್‍ಯ ಚಂದ್ರರು ಮುಳುಗಿ, ಸುತ್ತೆತ ಕಗ್ಗತ್ತಲೆಯ ಮೋಡ ಹೇರಿ.
ತೆರೆ ನರಳ್ವ ನಡುಗಡಲ ಹಡಗಿನೆಡೆ, ಮೂಡಗೆಂಪೇರಿ,
ಮತ್ತೊಮ್ಮೆ ಮೇಲ್ ನೆಗೆವ ದೇವರುರಿಗಣ್ಣಂತೆ ತೋರಿ,
ನೆಗೆಯುತ್ತಿದೆ ಮತ್ತೊಮ್ಮೆ ನಮಗದೋ ತುಂಬು ಬಾಳ್ ಬೀರಿ
ಹಿರಿಯ ಬೆಳಕೊಂದು ಸಿರಿ ಸಾರಿ.

ಆಡಿ, ಕುಣಿದಾಡಿ, ಜಲವೆಲ್ಲಾ!
ಪಾಡಿ, ಓ ಪಾಡಿ, ನೆಲವೆಲ್ಲಾ!
ಕೂಗಿ, ನಾಡೆಲ್ಲಾ, ಬೀಗಿ, ಬೀಡೆಲ್ಲಾ,
ಓಲಾಡಿ, ಊರೆಲ್ಲ, ಮೇಲಾಡಿ ಹಳ್ಳಿಗಾಡೆಲ್ಲಾ,
ಸೋಲು ನಮಗಿನ್ನಿಲ್ಲ, ಗೆಲವೆ ಇನ್ನೆಲ್ಲಾ!
ಭಯ ಚೆದರೆ, ಚಿಮ್ಮುತಿದೆ ಕಳಕಳಿಯ ಬೆಳಕು,
ದಯದ ತಣ್ಬೆಳಕು,
ಜಯದ ಕಣ್ಬೆಳಕು,
ನಯದ ನುಣ್ಬೆಳಕು!
ಬೆರಗೆನಿಸಿ, ಮುದ್ದೆನಿಸಿ, ಗೆಲುವೆನಿಸಿ, ಚೆಲುವೆನಿಸಿ,
ಅರಿವಾಗಿ, ಅರುಳಾಗಿ, ಅರಸಿಯ ತಿರುಳಾಗಿ,
ಬೆಳ್ಗೊಡೆಯ ನೆರಳಾಗಿ, ಭಕ್ತಿಯರಳಾಗಿ,
ತಂದೆ ತಾಯ್ಗೆಂದಿಲ್ಲದೊಲವ ಮಣಿಸಿ,
ಹಿರಿತಂದೆಗರಸಾಳ್ಕೆ ನೆಚ್ಚ ತಣಿಸಿ,
ತಂಗಿಯರ ಮೆರಸಿ ಕುಣಿಸಿ,
ಯದುಕುಲದ ಕಲ್ಪವೃಕ್ಷದ ಫಲದ ಸೊದೆಯೆನಿಸಿ ಮನೆಮನೆಯನುಣಿಸಿ,
ತುಂಬುತಿದೆ, ನೆರೆಯುತಿದೆ, ನೋಡಿ, ಆ ಬೆಳಕು !
ಆಳ ಬಾಳಲ್ಲಾ?
ನೋವು ನಲಿವಲ್ಲಾ ?
ಪಾವು ಚಂದ್ರಂಗಿಲ್ಲ ? ಕೋಳು ಸೂರ್‍ಯಂಗಿಲ್ಲ ?
ದೇವರ್ಗಮೆಡರುತೊಡರಿಲ್ಲಾ ?
ತಂದೆಯಿರ್‍ವರ ಸೆಳೆದು ತಂದನೇ ಅಳಲ ವಿಧಿ !
ನೊಂದನೇ ನಮ್ಮ ನಿಧಿ !
ನೊಂದು, ನೋವನು ನುಂಗಿ, ಮುಂಬರಿಯುತಿದೆ, ಅಚ್ಚ ಬೆಳಕು!
ಕೆಚ್ಚೆದೆಯ ಬೆಳಕು!
ಕಣ್ಣೀರ ತೊಡೆದು, ಮಿಡಿದು,
ತಣ್ಣನೆಯ ಹರಕೆಗಳ ಹೊನ್ನ ಮುಡಿ ಮುಡಿದು,
ತನ್ನ ಹೊಣೆಗಳ ಹೊರೆಗೆ ನಾಡವರ ನೆರವ ಕುರಿತಾಳ್ವ ನುಡಿ ನುಡಿದು,
ನಾಡವರ ಬಾಳಾದ ಬಾಳ ಬೆಳಕು,
ನರಸಿಂಹ ಕೃಷ್ಣರಿರ್‍ವರು ಕೂಡಿ ನೆರೆದರೆನೆ ತೇಜಸ್ವಿಯಾಗಿ,
ಎಳೆಯ ಹೆರೆಯೊಳೆ ತೊಳಗಿ ತುಂಬು ಹೆರೆಯಾಗಿ,
ಸಿರಿಯೊಡೆಯ ಜಯಚಾಮರಾಜೇಂದ್ರನೆಂಬೊಂದು ದಿವ್ಯಮಣಿ ಬೆಳಕು,
ಮೂಡಿ, ಕಳೆಗೂಡಿ,
ಕನ್ನಡದ ಚೆಲುವಿಗದೊ ಬೆಳಗುತಿದೆ, ನೋಡಿ,
ದೈವ ಕೃಪೆ ಕೂಡಿ,
ಬೆಳಗುತಿದೆ ನಮಗಾಗಿ ಆ ದೊಡ್ಡ ಬೆಳಕು,
ಶ್ರೀ ಜಯನ ಬೆಳಕು.
*****
೧೯೪೦

Tagged:

Leave a Reply

Your email address will not be published. Required fields are marked *

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...