ಶ್ರೀ ಜಯನ ಬೆಳಕು

ಕನ್ನಡದ ಬಾನಿನಲಿ ಮೂಡಿತದೊ ಬೆಳಕು,
ಪುಣ್ಯ ಕಣ್ದೆರೆದಂತೆ ಬೆಳಕು!
ಕನ್ನಡಿಗರೊಲುಮೆ ತೆರೆಹೊಮ್ಮಿಸುವ ಬೆಳಕು,
ಹೊನ್ನ ಕನಸನು ತರುವ ಹೊಸ ಕಳೆಯ ಬೆಳಕು,
ಮುನ್ನರಿಯದಚ್ಚರಿಯ ಮೆಚ್ಚು ಬೆಳಕು.
ಬೆಳ್ಳಿ ಬೆಳಗುವ ಬಾನ ಬೆಳ್ಳನೆಯ ಬೆಳಕು,
ಒಳ್ಳಿತೊಸರುವ ಹೆಸರ ದೊಡ್ಡ ಬೆಳಕು.
ಸೂರ್‍ಯ ಚಂದ್ರರು ಮುಳುಗಿ, ಸುತ್ತೆತ ಕಗ್ಗತ್ತಲೆಯ ಮೋಡ ಹೇರಿ.
ತೆರೆ ನರಳ್ವ ನಡುಗಡಲ ಹಡಗಿನೆಡೆ, ಮೂಡಗೆಂಪೇರಿ,
ಮತ್ತೊಮ್ಮೆ ಮೇಲ್ ನೆಗೆವ ದೇವರುರಿಗಣ್ಣಂತೆ ತೋರಿ,
ನೆಗೆಯುತ್ತಿದೆ ಮತ್ತೊಮ್ಮೆ ನಮಗದೋ ತುಂಬು ಬಾಳ್ ಬೀರಿ
ಹಿರಿಯ ಬೆಳಕೊಂದು ಸಿರಿ ಸಾರಿ.

ಆಡಿ, ಕುಣಿದಾಡಿ, ಜಲವೆಲ್ಲಾ!
ಪಾಡಿ, ಓ ಪಾಡಿ, ನೆಲವೆಲ್ಲಾ!
ಕೂಗಿ, ನಾಡೆಲ್ಲಾ, ಬೀಗಿ, ಬೀಡೆಲ್ಲಾ,
ಓಲಾಡಿ, ಊರೆಲ್ಲ, ಮೇಲಾಡಿ ಹಳ್ಳಿಗಾಡೆಲ್ಲಾ,
ಸೋಲು ನಮಗಿನ್ನಿಲ್ಲ, ಗೆಲವೆ ಇನ್ನೆಲ್ಲಾ!
ಭಯ ಚೆದರೆ, ಚಿಮ್ಮುತಿದೆ ಕಳಕಳಿಯ ಬೆಳಕು,
ದಯದ ತಣ್ಬೆಳಕು,
ಜಯದ ಕಣ್ಬೆಳಕು,
ನಯದ ನುಣ್ಬೆಳಕು!
ಬೆರಗೆನಿಸಿ, ಮುದ್ದೆನಿಸಿ, ಗೆಲುವೆನಿಸಿ, ಚೆಲುವೆನಿಸಿ,
ಅರಿವಾಗಿ, ಅರುಳಾಗಿ, ಅರಸಿಯ ತಿರುಳಾಗಿ,
ಬೆಳ್ಗೊಡೆಯ ನೆರಳಾಗಿ, ಭಕ್ತಿಯರಳಾಗಿ,
ತಂದೆ ತಾಯ್ಗೆಂದಿಲ್ಲದೊಲವ ಮಣಿಸಿ,
ಹಿರಿತಂದೆಗರಸಾಳ್ಕೆ ನೆಚ್ಚ ತಣಿಸಿ,
ತಂಗಿಯರ ಮೆರಸಿ ಕುಣಿಸಿ,
ಯದುಕುಲದ ಕಲ್ಪವೃಕ್ಷದ ಫಲದ ಸೊದೆಯೆನಿಸಿ ಮನೆಮನೆಯನುಣಿಸಿ,
ತುಂಬುತಿದೆ, ನೆರೆಯುತಿದೆ, ನೋಡಿ, ಆ ಬೆಳಕು !
ಆಳ ಬಾಳಲ್ಲಾ?
ನೋವು ನಲಿವಲ್ಲಾ ?
ಪಾವು ಚಂದ್ರಂಗಿಲ್ಲ ? ಕೋಳು ಸೂರ್‍ಯಂಗಿಲ್ಲ ?
ದೇವರ್ಗಮೆಡರುತೊಡರಿಲ್ಲಾ ?
ತಂದೆಯಿರ್‍ವರ ಸೆಳೆದು ತಂದನೇ ಅಳಲ ವಿಧಿ !
ನೊಂದನೇ ನಮ್ಮ ನಿಧಿ !
ನೊಂದು, ನೋವನು ನುಂಗಿ, ಮುಂಬರಿಯುತಿದೆ, ಅಚ್ಚ ಬೆಳಕು!
ಕೆಚ್ಚೆದೆಯ ಬೆಳಕು!
ಕಣ್ಣೀರ ತೊಡೆದು, ಮಿಡಿದು,
ತಣ್ಣನೆಯ ಹರಕೆಗಳ ಹೊನ್ನ ಮುಡಿ ಮುಡಿದು,
ತನ್ನ ಹೊಣೆಗಳ ಹೊರೆಗೆ ನಾಡವರ ನೆರವ ಕುರಿತಾಳ್ವ ನುಡಿ ನುಡಿದು,
ನಾಡವರ ಬಾಳಾದ ಬಾಳ ಬೆಳಕು,
ನರಸಿಂಹ ಕೃಷ್ಣರಿರ್‍ವರು ಕೂಡಿ ನೆರೆದರೆನೆ ತೇಜಸ್ವಿಯಾಗಿ,
ಎಳೆಯ ಹೆರೆಯೊಳೆ ತೊಳಗಿ ತುಂಬು ಹೆರೆಯಾಗಿ,
ಸಿರಿಯೊಡೆಯ ಜಯಚಾಮರಾಜೇಂದ್ರನೆಂಬೊಂದು ದಿವ್ಯಮಣಿ ಬೆಳಕು,
ಮೂಡಿ, ಕಳೆಗೂಡಿ,
ಕನ್ನಡದ ಚೆಲುವಿಗದೊ ಬೆಳಗುತಿದೆ, ನೋಡಿ,
ದೈವ ಕೃಪೆ ಕೂಡಿ,
ಬೆಳಗುತಿದೆ ನಮಗಾಗಿ ಆ ದೊಡ್ಡ ಬೆಳಕು,
ಶ್ರೀ ಜಯನ ಬೆಳಕು.
*****
೧೯೪೦

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರೀತಿ ನನಗೆ
Next post ಮಹಿಳೆ – ಭಾವನಾತ್ಮಕ ಕ್ರಿಯಾತ್ಮಕ ಸಂವೇದನೆಗಳು

ಸಣ್ಣ ಕತೆ

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

cheap jordans|wholesale air max|wholesale jordans|wholesale jewelry|wholesale jerseys