Home / ಕವನ / ಕವಿತೆ / ಶುಕ್ರಗೀತೆ

ಶುಕ್ರಗೀತೆ

[ಮೈಸೂರು ವಿಶ್ವವಿದ್ಯಾನಿಲಯದ ಬೆಳ್ಳಿಯ ಹಬ್ಬದ ಕವಿಸಮ್ಮೇಳನದಲ್ಲಿ ಓದಿದ್ದು]

ಓಂ, ಸಹ ನಾವವತು ; ಸಹ ನೌ ಭುನಕ್ತು;
ಸಹ ವೀರ್‍ಯಂ ಕರವಾವಹೈ ;
ತೇಜಸ್ವಿನಾವಧೀತಮಸ್ತು ;
ಮಾ ವಿದ್ವಿಷಾವಹೈ.
ಓಂ ಶಾಂತಿಃ ಶಾಂತಿಃ ಶಾಂತಿಃ

ಮೊತ್ತಮೊದಲೇ, ಬೆಳಕಾಗಲೆಂದಾಗ, ಬೆಳಕಾಯ್ತು ; ಬೆಳಕು ಚೆಲುವಾಯ್ತು;
ಕಿಡಿ ಸಿಡಿದು ಮಿನುಗಿದುವು ಜ್ಯೋತಿಗಳ್‌ ; ಮೂಡಿದರು ಸೂರ್ಯ ಚಂದಿರರು
ಲೋಕಚಕ್ಷುಗಳೆನಿಸಿ, ಸತ್ಯ ಧರ್ಮಗಳಂತೆ, ಕ್ಷಮೆ ದಯೆಗಳಂತೆ.
ಹಸುರ ಸೊಬಗಂ ತೊಟ್ಟು, ಹಾಡುತ್ತ, ಬಾನ್‌ಬಯಲೊಳಾಟವಾಡುತ್ತ,
ಸೌಂದರ್‍ಯದಿಂ ತೀವಿ, ಭೂದೇವಿ ಬೆಳಗಿದಳು, ಜೀವ ಪರಮಾತ್ಮರಿಂ ತೊಳಗಿ.

ಆ ದಿವ್ಯ ದರ್ಶನಂ ಕಣ್ಮುಂದೆ ನೋಡಿದರ್
ದಿವಿಜರುಂ, ಋಷಿಗಳುಂ ; ನಲಿದು ಕುಣಿದಾಡಿದ‌ರ್‌ ;
ಪಾಟಮಂ ಪಾಡಿದರ್-
ಓಂ, ತತ್ಸವಿತುರ್ ವರೇಣಿಯಂ
ಭರ್ಗೋ ದೇವಸ್ಯ ಧೀಮಹಿ,
ಧಿಯೋ ಯೋ ನಃ ಪ್ರಚೋದಯಾತ್.
ಮತ್ತಮವರಿಂತೆಂದು ಬೇಡಿದರ್‌-
ಹಿರಣ್ಮಯೇನ ಪಾತ್ರೇಣ
ಸತ್ಯಸ್ಯಾಪಿಹಿತಂ ಮುಖಂ ;
ತತ್ ತ್ವಂ ಪೂಷನ್ ಅಪಾವೃಣು
ಸತ್ಯಧರ್ಮಾಯ ದೃಷ್ಟಯೇ.

ಇನ್ನು ಮೊಂದಂ ಬಯಸಿ ಪೂಟಮಂ ಪೂಡಿದರ್-
ಅಸತೋ ಮಾ ಸದ್ಗಮಯ,
ತಮಸೋ ಮಾ ಜ್ಯೋತಿರ್‌ಗಮಯ,
ಮೃತ್ಯೋರ್ ಮಾ ಅಮೃತಂ ಗಮಯ,

ಇಂದಿಂಗಮೆಮಗದುವೆ ದರ್ಶನಂ, ಬಯಸಿದುದೆ ಆ ಅಮೃತಪುತ್ರರ್.
ಬ್ರಹ್ಮ ಮೀ ವಿಶ್ವಂ ; ಬ್ರಹ್ಮಮುಂ ಪೂರ್‍ಣಮೆನೆ ಏನ್ ಚೆಲುವೊ ನಮ್ಮ ಬಾಳ್ ಚೆಲುವು,
ಏನ್ ನಲಿವೊ ನಮ್ಮ ನಲಿವಾತ್ಮನಾನಂದಂ!

ಆನಂದನರಿಯದರ್‌,
ಆತ್ಮವನೆ ಒಲ್ಲದರ್,
ಬಾನ ಗಡಿಯಲಿ ಗಿಡಿದ ಕತ್ತಲೆಯ ಗುಹೆಯೊಳಡಗಿರ್‍ದರಾ ಅಸುರರ್
ಕೇಳ್ದರಾ ಪಾಟಮಂ ಪಲ್ಮೊರೆದು, ಕಣ್ಣಿರಿಯೆ ಕಂಡರಾ ಬಿಡುಗಣ್ಣ ಬೆಳಕನ್,
ಪೊಳೆದು ಪೊಳೆಯಿಸುತಿರ್ಪ ಬಿಳಿಯ ಬಾನ್‌ಬೆಳಕನ್.
ಮೆಲ್ಲಮೆಲ್ಲನೆ ನುಸುಳಿ ದೇವರಾವರಣದಲಿ, ಆಳ ತೋಟದಲಿ,
ತೆಕ್ಕೆ ತೆಕ್ಕೆಯೊಳೆದ್ದು ಹೊರಬಿದ್ದು, ಕಾರಿರುಳ ಮೊತ್ತಂಗಳಾಗಿ,
ಪೊಗೆಯಾಗಿ, ನೊಣೆವ ಪಡಿನೆಳಲಾಗಿ, ನಂಜಾಗಿ, ಕಣ್ಣ ಮಂಜಾಗಿ,
ಮುತ್ತಿ ಮರುಳ್ಗೊಳಿಸಿದ‌ರ್‌ ಸಂಶಯಂಗಳನೊತ್ತಿ, ಪಾಪಮಂ ಬಿತ್ತಿ,
ಅಲ್ಲದುದನಹುದೆಂದು, ಅಹುದನಲ್ಲೆಂದು,
ಇಲ್ಲದುದನಿಹುದೆಂದು, ಇಹುದನಿಲ್ಲೆಂದು,
ನಲ್ಲದಂ ಪೊಲೆಯೆಂದು, ಪೊಲೆ ನಲ್ಲದೆಂದು,
ತಿರಿಸಿದರ್ ಮಾಯಾವಿಗಳ್ ಬಾಳ್ವ ಮಕ್ಕಳಂ ಸಾವ ಸಂಸಾರ ಸುತ್ತಿ.
ಪಲ ಪೆಸರ್, ಪುರುಳೊಂದು,
ಪಲ ತೆರನ್, ನೆರೆನೊಂದು-
ಅಹಿ, ವೃತ್ರ, ಮಾರ, ಕಲಿ, ಅಹ್ರಿಮನ್, ಸೈತಾನ್!

ಅಂದು ಮೊದಲಾದುದೇ ದೇವಾಸುರಂ!
ಎಂದು ಕೊನೆಗಾಣ್ಬುದೋ ದೇವಾಸುರಂ!
ಪಸುಳೆವೋಲ್ ನಿಲ್ವಾಳ ನಿಲವು!
ಏನ್ ಚೆಲ್ಲು ಚೆಲ್ವು!

ಓ ಪಂಪ, ನೀನ್ ತುಂಬಿ ತೊರೆದೊಱತೆ ಪರಿವುದಿನ್ನುಂ.
ಸಾವಿರಂ ಸಂದುವುದು ಪರಿವುದಿನ್ನುಂ.
ಅದನೆ ಬಸವಣ್ಣನ್,
ಅದನೆ ಕುವರವ್ಯಾಸನ್
ಇನ್ನೊಮ್ಮೆ ಸಾರಿದರ್ ತಮ್ಮ ಕಣ್ಣಿನ್ ಕಂಡು
ಪೊಸಪೊಸತು ಪರಿಯಿನ್,
ಆಳ ಬಾಳನ್ ಕಡೆವ ಶಿವಕಲೆಯ ಕೃಪೆಯಿನ್ :
ಅದು ಶಿವಂ, ಸತ್ಯಮದು, ಸುಂದರಂ.
ಗುರು ಪಂಪ, ಓ ತಂದೆ ಪಂಪಾ,
ತೆಂಕನಾಡನ್ ಮರೆಯಲಾರದೆಲೆ ಜೀವಾ,
ಮರೆಯದಿರು, ಪರಸು, ಪರಸೆಮ್ಮನ್.
ಪಳೆಯ ಕರ್ನಾಟಕಂ ಮತ್ತೊರ್‍ಮೆ ಕಟ್ಟುಗೆ!
ಎಳೆಯ ಕರ್ನಾಟಕಂ ಪೊಸಪುಟ್ಟು ಪುಟ್ಟುಗೆ!
ಪಿರಿಯತನಮನ್ ಮರೆತ ಕಿರುಮಕ್ಕಳನ್ ಪರಸು,
ಪರಸು ನೀನೆಮ್ಮನ್.
*****
೧೯೪೧

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...