ಸಾಧುಗಳೆಲ್ಲಾ ಚನ್ನಾಗಿ ಕೇಳಿರಣ್ಣಾ

ಇನ್ನಾರಿಗೆ ಹೇಳಲೆಣ್ಣಾ ಸಾಧುಗಳೆಲ್ಲಾ
ಚನ್ನಾಗಿ ಕೇಳಿರಣ್ಣಾ ||ಪ||

ನೆನ್ನೆ ಮೊನ್ನೆಯೆಂದು
ತನ್ನೊಳಗೆ ತಾ ತಿಳಿದು
ತನ್ನೇಸ್ಹುಣ್ಣಿವಿ ದಿನಾ
ಕನ್ನೆಯಮಾಸಿ ಕೂಡಿ ಬಂದು ||ಅ.ಪ.||

ಹಾವು ಇಲ್ಲದ ಹುತ್ತಾ ಕಚ್ಚಲು ಸರ್ಪಾ
ಜೀವ ಹೋದಿತು ಸತ್ತಾ
ಮೋಹ ಮದಗಳು ತಾನು
ತಾಯಿಗಂಡನ ಕೂಡಿಕೊಂಡು
ದೇವರ ಮನಿಯಾಗ ಹಾಸಿಗೆ ಮಾಡಿ
ಕ್ಯಾವಿ ಹಚ್ಚಡ ಹೊಚ್ಚಿದ ಮೇಲೆ ||೧||

ಆಕಾಶ ನೆಲೆಯಾಗಿ ನಿಂತಲ್ಲೆ ನಿಂತು
ಭೂಕಾಂತೆ ತಲೆದೂಗಿ
ಮೂಕನೊಬ್ಬನ ಕೂಡ
ಹಾಕ್ಯಾಡಿ ತರ್ಕಮಾಡಿ
ಪಾಕದ ಗಡಿಗಿ ವಡಿದು ಜಡಿದು
ಕಾಕೀಗಿಡವ ಕಡಿದ ಮೇಲೆ ||೨||

ಮುತ್ತಲಮರವನೇರಿದೆ ಅದರೊತ್ತಲಿರುವ
ಗೊತ್ತಿನ ಭೂತವ ತಡದೆ
ಅತ್ತ ಇತ್ತ ನೋಡಲಾಗಿ
ಸುತ್ತಲೂ ಭಯವಾಗಿ
ನೆತ್ತಿ ಬಿರಿದು ಬತ್ತಲಾಗಿ
ಸತ್ಯ ಶಿಶುನಾಳಧೀಶನ ಕಂಡೆ ||೩||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಾಧುಗಳಿಗಿದೆ ಸಾಧನವೋ ಸುಜ್ಞಾನವೋ
Next post ಹಾಯ್ಕುಗಳು

ಸಣ್ಣ ಕತೆ

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…