ಸಾಧುಗಳೆಲ್ಲಾ ಚನ್ನಾಗಿ ಕೇಳಿರಣ್ಣಾ

ಇನ್ನಾರಿಗೆ ಹೇಳಲೆಣ್ಣಾ ಸಾಧುಗಳೆಲ್ಲಾ
ಚನ್ನಾಗಿ ಕೇಳಿರಣ್ಣಾ ||ಪ||

ನೆನ್ನೆ ಮೊನ್ನೆಯೆಂದು
ತನ್ನೊಳಗೆ ತಾ ತಿಳಿದು
ತನ್ನೇಸ್ಹುಣ್ಣಿವಿ ದಿನಾ
ಕನ್ನೆಯಮಾಸಿ ಕೂಡಿ ಬಂದು ||ಅ.ಪ.||

ಹಾವು ಇಲ್ಲದ ಹುತ್ತಾ ಕಚ್ಚಲು ಸರ್ಪಾ
ಜೀವ ಹೋದಿತು ಸತ್ತಾ
ಮೋಹ ಮದಗಳು ತಾನು
ತಾಯಿಗಂಡನ ಕೂಡಿಕೊಂಡು
ದೇವರ ಮನಿಯಾಗ ಹಾಸಿಗೆ ಮಾಡಿ
ಕ್ಯಾವಿ ಹಚ್ಚಡ ಹೊಚ್ಚಿದ ಮೇಲೆ ||೧||

ಆಕಾಶ ನೆಲೆಯಾಗಿ ನಿಂತಲ್ಲೆ ನಿಂತು
ಭೂಕಾಂತೆ ತಲೆದೂಗಿ
ಮೂಕನೊಬ್ಬನ ಕೂಡ
ಹಾಕ್ಯಾಡಿ ತರ್ಕಮಾಡಿ
ಪಾಕದ ಗಡಿಗಿ ವಡಿದು ಜಡಿದು
ಕಾಕೀಗಿಡವ ಕಡಿದ ಮೇಲೆ ||೨||

ಮುತ್ತಲಮರವನೇರಿದೆ ಅದರೊತ್ತಲಿರುವ
ಗೊತ್ತಿನ ಭೂತವ ತಡದೆ
ಅತ್ತ ಇತ್ತ ನೋಡಲಾಗಿ
ಸುತ್ತಲೂ ಭಯವಾಗಿ
ನೆತ್ತಿ ಬಿರಿದು ಬತ್ತಲಾಗಿ
ಸತ್ಯ ಶಿಶುನಾಳಧೀಶನ ಕಂಡೆ ||೩||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಾಧುಗಳಿಗಿದೆ ಸಾಧನವೋ ಸುಜ್ಞಾನವೋ
Next post ಹಾಯ್ಕುಗಳು

ಸಣ್ಣ ಕತೆ

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…