ಪಂಪನ ಒರತೆ

(ಸಾವಿರ ವರ್ಷದ ಹಬ್ಬದಲ್ಲಿ)

ಪದಿನೂರು ನೆರೆಯೆ, ಪಿರಿದೊಸಗೆ ಮೆರೆಯೆ,
ಪುಲಿಗೆರೆಯ ತಿರುಳ ಕನ್ನಡದ ಪುರುಳ
ರಸರಸದ ಬಾವಿ ಮನೆಮನೆಗೆ ತೀವಿ
ತನ್ನೆರಡು ಪಾಟ್ಟು ಮೆಸೆಯೆ, ನೆಲನೊಸೆಯೆ,
ತನ್ನ ಸೆರಪೇ ಸೆರಪು,
ತನ್ನ ತೇಜಮೆ ತೇಜಮ್
ಎನೆ ಬೆಳಪ ಪಂಪನ್
ಎಮ್ಮ ತಾಯ್ನುಡಿಗೀಗೆ ಪೊಸಪೊಸತು ಪೊಂಪನ್ !

ಓ ಪಂಪ, ಗುರುಪಂಪ, ಏನ್ ನೋನ್ತ ನೋನ್ಪಿಯೋ,
ಏನ್ ಪಾರ್‍ತ ಪಾರ್‍ಪೋ,
ಕಡೆದಿಟ್ಟೆ ಕಬ್ಬದೊಳ್ ಸಂಸಾರಸಾರಮನ್,
ಮಾನಮನ್, ದಾನಮನ್, ಧೀರ ಗಾಂಭೀರ್‍ಯಮನ್,
ಧರ್‍ಮಮನ್, ಕರ್‍ಮಮನ್, ಶಿವಪದದ ಮರ್‍ಮಮನ್,
ಸರ್‍ವಸ್ವಮನ್ !
ನಿನ್ನು ನಿರ್‌ ತುಂಬಿ,
ನಂಬುವುದೆ ನಂಬಿ,

ರನ್ನನುಂ, ಚಾವುಂಡರಾಯನುಂ ಕಂಡರ್
ಬೆಳ್ಗೊಳದ ಕಗ್ಗಲ್ಲ ಕೋಡಿನೊಳ್ ದೇವರಾ ಬಿಂಬಮನ್,
ಕಂಡು ಕಡೆದಿಟ್ಟರ್
ಪಾರುವಾ ಪಾರ್‍ಪೊಂದನಿಳೆಗೆ ತಡೆದಿಟ್ಟರ್-
ಕಲೆಯ ಸೌಂದರ್‍ಯಂ, ಜೀವದೌನ್ನತ್ಯಂ,
ತಪದೊಂದು ಭಾಗ್ಯಂ, ಕ್ರಾಂತಿಯೊಳ್‌ ಶಾಂತಿ,
ಪಸುಳೆವೋಲ್ ನಿಲ್ವಾಳ ನಿಲವು !
ಏನ್ ಚೆಲ್ವು ಚೆಲ್ವು !

ಓ ಪಂಪ, ನೀನ್ ತುಂಬಿ ತೊರೆದೋರೆತೆ ಪರಿವುದಿನ್ನು೦.
ಸಾವಿರಂ ಸಂದುಮದು ಪರಿವುದಿನ್ನುಂ
ಅದನೆ ಬಸವಣ್ಣನ್,
ಅದನೆ ಕುವರವ್ಯಾಸನ್
ಇನ್ನೊಮ್ಮೆ ಸಾರಿದ‌ರ್‌ ತಮ್ಮ ಕಣ್ಣಿನ್ ಕಂಡು
ಪೊಸಪೊಸತು ಪರಿಯಿನ್,
ಆಳ ಬಾಳನ್ ಕಡೆವ ಶಿವಕಲೆಯ ಕೃಪೆಯಿನ್ :
ಅದು ಶಿವಂ, ಸತ್ಯಮದು, ಸುಂದರಂ.
ಗುರು ಪಂಪ, ಓ ತಂದೆ ಪಂಪಾ,
ತೆಂಕನಾಡನ್ ಮರೆಯಲಾರದೆಲೆ ಜೀವಾ,

ಮರೆಯದಿರು, ಪರಸು, ಪರಸೆಮ್ಮನ್,
ಪಳೆಯ ಕರ್ನಾಟಕಂ ಮತ್ತೊರ್‍ಮೆ ಕಟ್ಟುಗೆ !
ಎಳೆಯ ಕರ್ನಾಟಕಂ ಪೊಸಪುಟ್ಟು ಪುಟ್ಟುಗೆ !
ಪಿರಿಯತನಮನ್ ಮರೆತ ಕಿರುಮಕ್ಕಳನ್ ಪರಸು,
ಪರಸು ನೀನೆಮ್ಮನ್.
*****
೧೯೪೧

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆಡಿಸು ನನ್ನ ಜಾಡಿಸು ನನ್ನ
Next post ‘ಆನುದೇವಾ ಹೊರಗಣವನು…’ ಒಂದು ಪ್ರತಿಕ್ರಿಯೆ

ಸಣ್ಣ ಕತೆ

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

cheap jordans|wholesale air max|wholesale jordans|wholesale jewelry|wholesale jerseys