Home / ಕವನ / ಕವಿತೆ / ಪಂಪನ ಒರತೆ

ಪಂಪನ ಒರತೆ

(ಸಾವಿರ ವರ್ಷದ ಹಬ್ಬದಲ್ಲಿ)

ಪದಿನೂರು ನೆರೆಯೆ, ಪಿರಿದೊಸಗೆ ಮೆರೆಯೆ,
ಪುಲಿಗೆರೆಯ ತಿರುಳ ಕನ್ನಡದ ಪುರುಳ
ರಸರಸದ ಬಾವಿ ಮನೆಮನೆಗೆ ತೀವಿ
ತನ್ನೆರಡು ಪಾಟ್ಟು ಮೆಸೆಯೆ, ನೆಲನೊಸೆಯೆ,
ತನ್ನ ಸೆರಪೇ ಸೆರಪು,
ತನ್ನ ತೇಜಮೆ ತೇಜಮ್
ಎನೆ ಬೆಳಪ ಪಂಪನ್
ಎಮ್ಮ ತಾಯ್ನುಡಿಗೀಗೆ ಪೊಸಪೊಸತು ಪೊಂಪನ್ !

ಓ ಪಂಪ, ಗುರುಪಂಪ, ಏನ್ ನೋನ್ತ ನೋನ್ಪಿಯೋ,
ಏನ್ ಪಾರ್‍ತ ಪಾರ್‍ಪೋ,
ಕಡೆದಿಟ್ಟೆ ಕಬ್ಬದೊಳ್ ಸಂಸಾರಸಾರಮನ್,
ಮಾನಮನ್, ದಾನಮನ್, ಧೀರ ಗಾಂಭೀರ್‍ಯಮನ್,
ಧರ್‍ಮಮನ್, ಕರ್‍ಮಮನ್, ಶಿವಪದದ ಮರ್‍ಮಮನ್,
ಸರ್‍ವಸ್ವಮನ್ !
ನಿನ್ನು ನಿರ್‌ ತುಂಬಿ,
ನಂಬುವುದೆ ನಂಬಿ,

ರನ್ನನುಂ, ಚಾವುಂಡರಾಯನುಂ ಕಂಡರ್
ಬೆಳ್ಗೊಳದ ಕಗ್ಗಲ್ಲ ಕೋಡಿನೊಳ್ ದೇವರಾ ಬಿಂಬಮನ್,
ಕಂಡು ಕಡೆದಿಟ್ಟರ್
ಪಾರುವಾ ಪಾರ್‍ಪೊಂದನಿಳೆಗೆ ತಡೆದಿಟ್ಟರ್-
ಕಲೆಯ ಸೌಂದರ್‍ಯಂ, ಜೀವದೌನ್ನತ್ಯಂ,
ತಪದೊಂದು ಭಾಗ್ಯಂ, ಕ್ರಾಂತಿಯೊಳ್‌ ಶಾಂತಿ,
ಪಸುಳೆವೋಲ್ ನಿಲ್ವಾಳ ನಿಲವು !
ಏನ್ ಚೆಲ್ವು ಚೆಲ್ವು !

ಓ ಪಂಪ, ನೀನ್ ತುಂಬಿ ತೊರೆದೋರೆತೆ ಪರಿವುದಿನ್ನು೦.
ಸಾವಿರಂ ಸಂದುಮದು ಪರಿವುದಿನ್ನುಂ
ಅದನೆ ಬಸವಣ್ಣನ್,
ಅದನೆ ಕುವರವ್ಯಾಸನ್
ಇನ್ನೊಮ್ಮೆ ಸಾರಿದ‌ರ್‌ ತಮ್ಮ ಕಣ್ಣಿನ್ ಕಂಡು
ಪೊಸಪೊಸತು ಪರಿಯಿನ್,
ಆಳ ಬಾಳನ್ ಕಡೆವ ಶಿವಕಲೆಯ ಕೃಪೆಯಿನ್ :
ಅದು ಶಿವಂ, ಸತ್ಯಮದು, ಸುಂದರಂ.
ಗುರು ಪಂಪ, ಓ ತಂದೆ ಪಂಪಾ,
ತೆಂಕನಾಡನ್ ಮರೆಯಲಾರದೆಲೆ ಜೀವಾ,

ಮರೆಯದಿರು, ಪರಸು, ಪರಸೆಮ್ಮನ್,
ಪಳೆಯ ಕರ್ನಾಟಕಂ ಮತ್ತೊರ್‍ಮೆ ಕಟ್ಟುಗೆ !
ಎಳೆಯ ಕರ್ನಾಟಕಂ ಪೊಸಪುಟ್ಟು ಪುಟ್ಟುಗೆ !
ಪಿರಿಯತನಮನ್ ಮರೆತ ಕಿರುಮಕ್ಕಳನ್ ಪರಸು,
ಪರಸು ನೀನೆಮ್ಮನ್.
*****
೧೯೪೧

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...