Home / ಕವನ / ಕವಿತೆ / ಪಂಪನ ಒರತೆ

ಪಂಪನ ಒರತೆ

(ಸಾವಿರ ವರ್ಷದ ಹಬ್ಬದಲ್ಲಿ)

ಪದಿನೂರು ನೆರೆಯೆ, ಪಿರಿದೊಸಗೆ ಮೆರೆಯೆ,
ಪುಲಿಗೆರೆಯ ತಿರುಳ ಕನ್ನಡದ ಪುರುಳ
ರಸರಸದ ಬಾವಿ ಮನೆಮನೆಗೆ ತೀವಿ
ತನ್ನೆರಡು ಪಾಟ್ಟು ಮೆಸೆಯೆ, ನೆಲನೊಸೆಯೆ,
ತನ್ನ ಸೆರಪೇ ಸೆರಪು,
ತನ್ನ ತೇಜಮೆ ತೇಜಮ್
ಎನೆ ಬೆಳಪ ಪಂಪನ್
ಎಮ್ಮ ತಾಯ್ನುಡಿಗೀಗೆ ಪೊಸಪೊಸತು ಪೊಂಪನ್ !

ಓ ಪಂಪ, ಗುರುಪಂಪ, ಏನ್ ನೋನ್ತ ನೋನ್ಪಿಯೋ,
ಏನ್ ಪಾರ್‍ತ ಪಾರ್‍ಪೋ,
ಕಡೆದಿಟ್ಟೆ ಕಬ್ಬದೊಳ್ ಸಂಸಾರಸಾರಮನ್,
ಮಾನಮನ್, ದಾನಮನ್, ಧೀರ ಗಾಂಭೀರ್‍ಯಮನ್,
ಧರ್‍ಮಮನ್, ಕರ್‍ಮಮನ್, ಶಿವಪದದ ಮರ್‍ಮಮನ್,
ಸರ್‍ವಸ್ವಮನ್ !
ನಿನ್ನು ನಿರ್‌ ತುಂಬಿ,
ನಂಬುವುದೆ ನಂಬಿ,

ರನ್ನನುಂ, ಚಾವುಂಡರಾಯನುಂ ಕಂಡರ್
ಬೆಳ್ಗೊಳದ ಕಗ್ಗಲ್ಲ ಕೋಡಿನೊಳ್ ದೇವರಾ ಬಿಂಬಮನ್,
ಕಂಡು ಕಡೆದಿಟ್ಟರ್
ಪಾರುವಾ ಪಾರ್‍ಪೊಂದನಿಳೆಗೆ ತಡೆದಿಟ್ಟರ್-
ಕಲೆಯ ಸೌಂದರ್‍ಯಂ, ಜೀವದೌನ್ನತ್ಯಂ,
ತಪದೊಂದು ಭಾಗ್ಯಂ, ಕ್ರಾಂತಿಯೊಳ್‌ ಶಾಂತಿ,
ಪಸುಳೆವೋಲ್ ನಿಲ್ವಾಳ ನಿಲವು !
ಏನ್ ಚೆಲ್ವು ಚೆಲ್ವು !

ಓ ಪಂಪ, ನೀನ್ ತುಂಬಿ ತೊರೆದೋರೆತೆ ಪರಿವುದಿನ್ನು೦.
ಸಾವಿರಂ ಸಂದುಮದು ಪರಿವುದಿನ್ನುಂ
ಅದನೆ ಬಸವಣ್ಣನ್,
ಅದನೆ ಕುವರವ್ಯಾಸನ್
ಇನ್ನೊಮ್ಮೆ ಸಾರಿದ‌ರ್‌ ತಮ್ಮ ಕಣ್ಣಿನ್ ಕಂಡು
ಪೊಸಪೊಸತು ಪರಿಯಿನ್,
ಆಳ ಬಾಳನ್ ಕಡೆವ ಶಿವಕಲೆಯ ಕೃಪೆಯಿನ್ :
ಅದು ಶಿವಂ, ಸತ್ಯಮದು, ಸುಂದರಂ.
ಗುರು ಪಂಪ, ಓ ತಂದೆ ಪಂಪಾ,
ತೆಂಕನಾಡನ್ ಮರೆಯಲಾರದೆಲೆ ಜೀವಾ,

ಮರೆಯದಿರು, ಪರಸು, ಪರಸೆಮ್ಮನ್,
ಪಳೆಯ ಕರ್ನಾಟಕಂ ಮತ್ತೊರ್‍ಮೆ ಕಟ್ಟುಗೆ !
ಎಳೆಯ ಕರ್ನಾಟಕಂ ಪೊಸಪುಟ್ಟು ಪುಟ್ಟುಗೆ !
ಪಿರಿಯತನಮನ್ ಮರೆತ ಕಿರುಮಕ್ಕಳನ್ ಪರಸು,
ಪರಸು ನೀನೆಮ್ಮನ್.
*****
೧೯೪೧

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...