Home / ಕವನ / ಕವಿತೆ / ಧರ್ಮಯುದ್ದ

ಧರ್ಮಯುದ್ದ

(ಮಯಿ ಸಂನ್ಯಸ್ಯ ಯುದ್ಧ್ಯಸ್ವ)

ಮಂಗಳಂಗಳನಿಳೆಯ ಸರ್‍ವ ಜ
ನಂಗಳಿಗೆ ನಲಿದೀವ ನಿತ್ಯನೆ,
ಮಂಗಳಾತ್ಮನೆ, ಕೃಪೆಯ, ಮುಕ್ತರ ಬೀಡೆ, ಕಾಪಾಡು.
ಕಂಗೆಡುವ ಮದದುಬ್ಬಿನಲಿ ರಣ
ದಂಗಣದ ಕಾಳ್ಗಿಚ್ಚನೆಬ್ಬಿಸಿ
ಭಂಗಪಡುವ ದುರಾಸೆಯಡಗಿಸಿ ನಡಸು ಮಕ್ಕಳನು.

ಹಿಂದೆ ಅಸುರರು ಕೊಬ್ಬಿ, ಸುರನರ
ರಂದಬಾಳನು ಮೆಟ್ಟಿ, ಹಿಂಸಾ
ನಂದ ಯೋಗಿಗಳಾಗಿ ಭೂಮಿಗೆ ಭಾರವೆನಿಸಿರಲು,
ತಂದೆ, ನೀ ಮಾಧವನುಮಾಧವ
ನೆಂದು ಪರಿಪರಿ ಪೊಗಳೆ, ಕರಗಿದೆ,
ನೊಂದೆ, ಬಿಡಿಸಿದೆ ಲೋಕಕಂಟಕರಿಂದ ಭಕ್ತರನು.

ಯುದ್ಧವೆಂಬ ಪಿಶಾಚ ಯಜ್ಞಕೆ
ಬದ್ಧರಹ ರಾಕ್ಷಸರ ಸಾಹಸ
ಬುದ್ದಿ ಕೌಶಲವೇಕೆ? ಐಸಿರಿಯೇಕೆ? ಬಿಸುಡು, ಸುಡು!
ಯುದ್ಧವೇ ತಂದೊಡ್ಡೆ, ಯುದ್ಧವ
ಯುದ್ಧದಿಂದಲೆ ಯಜ್ಞಮಾಡುವ
ಸಿದ್ದಿಯನು ನೀ, ದೇವ, ಬೆಸಸಿದೆ ಜಗವನುದ್ಧರಿಸೆ.

ಬೇಡುವೆವು, ಬಾ, ಸುಜನಪಾಲಕ.
ಹೂಡು ಧರ್‍ಮವ, ಧರ್‍ಮರಕ್ಷಕ,
ನಾಡ ಕಾವಲ ದಳಕೆ ಕೂಡಲಿ ನಾಡ ಬಲವೆಲ್ಲಾ.
ಓಡಿಹೋಗಲಿ ಭಯದ ನುಡಿಗಳು,
ಮೂಡಿ ತೂಗಲಿ ನಗುತ ಬೆಳೆಗಳು,
ನೀಡು ದಯವನು ದಣಿಗೆ, ನೆಮ್ಮದಿ ಬದುಕ ಬಡವನಿಗೆ.

ಕೆಣಕಿದರೆ ಬಿಡದೆತ್ತಿಕೊಂಡೆವು-
ಮಣಿವೆವೇ ನಾವಿನ್ನು ? ಕಾಳಗ
ದಣಿಗೆ ಮುಡಿಪಾಗಿಟ್ಟು ತನುಮನಧನವ ತೇಯುವೆವು!
ಋಣವಿದಲ್ಲವೆ ಭರತಮಾತೆಯ?
ಋಣವಿದಲ್ಲವೆ ದೇವಪಿತೃ‌ಋಷಿ
ಗಣದ ? ಮಡಿದಾ ಸತ್ಯಧರ್ಮ ಸ್ವತಂತ್ರ ಸಾಧಕರ ?

ಗೆದ್ದು ಬಿಟ್ಟೆವು! ಹುಬ್ಬ ಹಾರಿಸಿ-
ಮದ್ದು ಗುಂಡನು ಸುರಿಸಿ, ಹೊಸ ಹುಸಿ
ಸುದ್ದಿಗಳ ತೂರಾಡಿ, ನಂಬಿಸಿ, ಕೆಂಡಮಳೆಗರೆದು,
ಬಿದ್ದು ಹೆಣ್ಗಳ ಮೇಲೆ, ಹಸುಳೆಯ
ಗುದ್ದಿ, ದಾಸ್ಯವ ಹೊರಿಸಿ-ನಲಿವಿರ
ಗೆದ್ದು ಬಿಟ್ಟೆವು! ಎನುತ?-ಗೆಲುವಿರ ನೀವು ದೇವರನು!

ಗೆಲವು ನಮ್ಮದು, ಮಾಯಕಾರರೆ!
ಗೆಲವು ನಮ್ಮದು, ದ್ರೋಹಿಗಳೆ! ಕಡೆ
ಗೆಲವು ನಮ್ಮದು, ನಮ್ಮ ದಿವ್ಯ ಜ್ಯೋತಿ ನಮಗಿಹನು;
ಗೆಲವು ಶ್ರೀ ಜಯಚಾಮರಾಜಗೆ!
ಗೆಲವು ಬಿಡುತೆಗೆ, ಸಾಧು ಜನತೆಗೆ,
ಗೆಲವು ಶಾಂತಿಯ ಸರ್ವಸಮತೆಯ ಸುಖದ ಜೀವನಕೆ!

ಮಂಗಳಂಗಳನಿಳೆಯ ಸರ್‍ವ ಜ
ನಂಗಳಿಗೆ ನಲಿದೀವ ನಿತ್ಯನೆ,
ಮಂಗಳಾತ್ಮನೆ, ಒಲವೆ, ಮುಕ್ತರ ನಲಿವೆ, ಕಾಪಾಡು.
ಕಂಗೆಡುವ ಮದದುಬ್ಬಿನಲಿ ರಣ
ದಂಗಣದ ಕಾಳ್ಕಿಚ್ಚನೆಬ್ಬಿಸಿ
ಭಂಗಪಡುವ ದುರಾಸೆಯನ್ನು ಮುರಿ, ಗೆಲಿಸು ಶಾಂತಿಯನು.

ಓಂ ಶಾಂತಿಶ್ಶಾಂತಿ ಶಾಂತಿಃ
*****
೧೯೪೩

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...