ಧರ್ಮಯುದ್ದ

(ಮಯಿ ಸಂನ್ಯಸ್ಯ ಯುದ್ಧ್ಯಸ್ವ)

ಮಂಗಳಂಗಳನಿಳೆಯ ಸರ್‍ವ ಜ
ನಂಗಳಿಗೆ ನಲಿದೀವ ನಿತ್ಯನೆ,
ಮಂಗಳಾತ್ಮನೆ, ಕೃಪೆಯ, ಮುಕ್ತರ ಬೀಡೆ, ಕಾಪಾಡು.
ಕಂಗೆಡುವ ಮದದುಬ್ಬಿನಲಿ ರಣ
ದಂಗಣದ ಕಾಳ್ಗಿಚ್ಚನೆಬ್ಬಿಸಿ
ಭಂಗಪಡುವ ದುರಾಸೆಯಡಗಿಸಿ ನಡಸು ಮಕ್ಕಳನು.

ಹಿಂದೆ ಅಸುರರು ಕೊಬ್ಬಿ, ಸುರನರ
ರಂದಬಾಳನು ಮೆಟ್ಟಿ, ಹಿಂಸಾ
ನಂದ ಯೋಗಿಗಳಾಗಿ ಭೂಮಿಗೆ ಭಾರವೆನಿಸಿರಲು,
ತಂದೆ, ನೀ ಮಾಧವನುಮಾಧವ
ನೆಂದು ಪರಿಪರಿ ಪೊಗಳೆ, ಕರಗಿದೆ,
ನೊಂದೆ, ಬಿಡಿಸಿದೆ ಲೋಕಕಂಟಕರಿಂದ ಭಕ್ತರನು.

ಯುದ್ಧವೆಂಬ ಪಿಶಾಚ ಯಜ್ಞಕೆ
ಬದ್ಧರಹ ರಾಕ್ಷಸರ ಸಾಹಸ
ಬುದ್ದಿ ಕೌಶಲವೇಕೆ? ಐಸಿರಿಯೇಕೆ? ಬಿಸುಡು, ಸುಡು!
ಯುದ್ಧವೇ ತಂದೊಡ್ಡೆ, ಯುದ್ಧವ
ಯುದ್ಧದಿಂದಲೆ ಯಜ್ಞಮಾಡುವ
ಸಿದ್ದಿಯನು ನೀ, ದೇವ, ಬೆಸಸಿದೆ ಜಗವನುದ್ಧರಿಸೆ.

ಬೇಡುವೆವು, ಬಾ, ಸುಜನಪಾಲಕ.
ಹೂಡು ಧರ್‍ಮವ, ಧರ್‍ಮರಕ್ಷಕ,
ನಾಡ ಕಾವಲ ದಳಕೆ ಕೂಡಲಿ ನಾಡ ಬಲವೆಲ್ಲಾ.
ಓಡಿಹೋಗಲಿ ಭಯದ ನುಡಿಗಳು,
ಮೂಡಿ ತೂಗಲಿ ನಗುತ ಬೆಳೆಗಳು,
ನೀಡು ದಯವನು ದಣಿಗೆ, ನೆಮ್ಮದಿ ಬದುಕ ಬಡವನಿಗೆ.

ಕೆಣಕಿದರೆ ಬಿಡದೆತ್ತಿಕೊಂಡೆವು-
ಮಣಿವೆವೇ ನಾವಿನ್ನು ? ಕಾಳಗ
ದಣಿಗೆ ಮುಡಿಪಾಗಿಟ್ಟು ತನುಮನಧನವ ತೇಯುವೆವು!
ಋಣವಿದಲ್ಲವೆ ಭರತಮಾತೆಯ?
ಋಣವಿದಲ್ಲವೆ ದೇವಪಿತೃ‌ಋಷಿ
ಗಣದ ? ಮಡಿದಾ ಸತ್ಯಧರ್ಮ ಸ್ವತಂತ್ರ ಸಾಧಕರ ?

ಗೆದ್ದು ಬಿಟ್ಟೆವು! ಹುಬ್ಬ ಹಾರಿಸಿ-
ಮದ್ದು ಗುಂಡನು ಸುರಿಸಿ, ಹೊಸ ಹುಸಿ
ಸುದ್ದಿಗಳ ತೂರಾಡಿ, ನಂಬಿಸಿ, ಕೆಂಡಮಳೆಗರೆದು,
ಬಿದ್ದು ಹೆಣ್ಗಳ ಮೇಲೆ, ಹಸುಳೆಯ
ಗುದ್ದಿ, ದಾಸ್ಯವ ಹೊರಿಸಿ-ನಲಿವಿರ
ಗೆದ್ದು ಬಿಟ್ಟೆವು! ಎನುತ?-ಗೆಲುವಿರ ನೀವು ದೇವರನು!

ಗೆಲವು ನಮ್ಮದು, ಮಾಯಕಾರರೆ!
ಗೆಲವು ನಮ್ಮದು, ದ್ರೋಹಿಗಳೆ! ಕಡೆ
ಗೆಲವು ನಮ್ಮದು, ನಮ್ಮ ದಿವ್ಯ ಜ್ಯೋತಿ ನಮಗಿಹನು;
ಗೆಲವು ಶ್ರೀ ಜಯಚಾಮರಾಜಗೆ!
ಗೆಲವು ಬಿಡುತೆಗೆ, ಸಾಧು ಜನತೆಗೆ,
ಗೆಲವು ಶಾಂತಿಯ ಸರ್ವಸಮತೆಯ ಸುಖದ ಜೀವನಕೆ!

ಮಂಗಳಂಗಳನಿಳೆಯ ಸರ್‍ವ ಜ
ನಂಗಳಿಗೆ ನಲಿದೀವ ನಿತ್ಯನೆ,
ಮಂಗಳಾತ್ಮನೆ, ಒಲವೆ, ಮುಕ್ತರ ನಲಿವೆ, ಕಾಪಾಡು.
ಕಂಗೆಡುವ ಮದದುಬ್ಬಿನಲಿ ರಣ
ದಂಗಣದ ಕಾಳ್ಕಿಚ್ಚನೆಬ್ಬಿಸಿ
ಭಂಗಪಡುವ ದುರಾಸೆಯನ್ನು ಮುರಿ, ಗೆಲಿಸು ಶಾಂತಿಯನು.

ಓಂ ಶಾಂತಿಶ್ಶಾಂತಿ ಶಾಂತಿಃ
*****
೧೯೪೩

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆರುಣಿಯ ನೋಡಿದಿರಾ
Next post ಬಂಡಾಯ : ಯಾಕೆ ಜೀವಂತ?

ಸಣ್ಣ ಕತೆ

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

cheap jordans|wholesale air max|wholesale jordans|wholesale jewelry|wholesale jerseys