Home / ಕವನ / ಕವಿತೆ / ಶಿಲಪ್ಪದಿಗಾರಂ

ಶಿಲಪ್ಪದಿಗಾರಂ

ಶ್ರೀಯವರು ತಮಿಳು ಸಾಹಿತ್ಯದ ಸಾರವನ್ನು ಕನ್ನಡಿಗರಿಗೆ ಒದಗಿಸಿಕೊಡಬಯಸಿ ಒಂದೆರಡು ಮಹಾಗ್ರಂಥಗಳನ್ನು ಕನ್ನಡಕ್ಕೆ ಇಳಿಸಿದ್ದರು. ನಮ್ಮ ದುರ್ದೈವದಿಂದ ಎಲ್ಲವೂ ಗೆದ್ದಲಪಾಲಾಗಿ ಒಂದೆರಡು ತುಣುಕುಗಳು ಮಾತ್ರ ಉಳಿದಿವೆ. “ಶಿಲಪ್ಪದಿಗಾರಂ” ಎಂಬ ಪ್ರಸಿದ್ದ ತಮಿಳು ಕಾವ್ಯದ ಕನ್ನಡ ಭಾಷಾಂತರಕ್ಕೆ ಮುನ್ನುಡಿಯಾಗಿ ಬರೆದುವು ಈ ಹದಿನೇಳು ಸಾಲುಗಳು.

ಮುನ್ನುಡಿ

ಕೂರ ಕಲೆಮಗಳ್ ಅರಸು ತೊರೆದಿರ್‍ದ
ಚೇರಲ್ ಇಳಂಗೋವಡಿಗಳ್ ಅರುಳ,
ಮುತ್ತ ಮಿಳ್ ಪಾಟ್ಟೆನ ತಮಿಳ್‌ಮಗಳ್‌ ಪೆತ್ತ
ನುಣ್‌ ತಣ್‌ಬೆಳಗಿನ ಮುತ್ತಿನಮಣಿಯನ್
ಆರಾ ಅವರ್ದೆನ ತೀರಾ ತಣವಿನ್,
ಇನ್ನುಂ ತನ್ ಪೋಲ್ ಕನ್ನಡ ಮಕ್ಕಳ್‌
ಅರುಂಪೆರಲ್ ಕಾದಲ್ ಪೆಣ್ಣಣಿ ಕಲ್ಪಿನ್
ತಿರುಮಾಪತ್ತಿನಿ ಕಣ್ಣಕಿ ತೊಳುತು
ಅರಿವೆನ ಅರನೇ, ಅರನೆನ ಅರುಳೇ
ಎಂದರಿನಾಲ್ವಾಳ್ ಬಲ್ವಿಡಿವಿಡಿಗೆನ,
ಕಂಡ ಕಂಡ ಮಲರ್ ಚೆಲ್ವನೆ ಕೊಂಡು
ಬಂಡುಣಿ ತನತೇ ಜೇನೀನ್ಬಂತು,
ಕಂಡೆಡೆ, ಕಂಡೆಡೆ ಚೆಲ್ವಗಳಾಯ್ದು
ತೆರಳ್ಚಿ ಮನೆಕಡೆ ತರ್‍ಪೋನ್, ತಂದನ್
ತಾಯ ಕಯ್ಯೋಳಿಡೆ ಶ್ರೀಯೆಂಬೊರ್‍ವನ್‌-
ಬೇಡುವನೊಂದನ್ ನಲವಿಂದೀಯೆ,
ಒಲ್ವ ಮಕ್ಕಳೊಳ್ ಚೆಲ್ಪನಿಡು ತಾಯೆ!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...