ಹಾರೈಕೆ

ಮದರಾಸು ನಗರದಲ್ಲಿ ಸೇರಿದ ೨೯ನೆಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಳಿಸಿದ ಹಾರೈಕೆ.

ದ್ರಾವಿಡಗಣ-ತ್ರಿಪದಿ, ಕುರಳು ಧಾಟಿ

೧. ಕನ್ನಡನುಡಿಪಯಿರ್ ಮುನ್ನಡೆ ತೆನೆತುಂಬಿ,
ಪೊನ್ನಡಕಿಲ್ಗಂ ಪೊನ್ನ ಕ್ಕೆ.

೨. ಬೀಡುಂ ಬಯಲ್ ಮಲೆ ಕುಡಿವಾಳ್ಕೆ ಕರ್‍ಬು ಜೇನ್
ಪಾಡುಂ ಪಿಳಿಗೆ ಮೇಣ್ ಬಿಡಿನುಡಿಯುಂ.

೩. ಬರೆವರ ಬಾಯೊಳೊಲವಿರ್‍ಕೆ, ಚೆಲುವಿರ್‍ಕೆ.
ನಲವಿರ್‍ಕೆ, ನಾಡ ಗೆಲವಿರ್‍ಕೆ.

೪. ಧರ್‍ಮದ ತಿರುಳಿರ್‍ಕೆ, ಕರ್ಮದ ಕೆಚ್ಚಿರ್‍ಕೆ,
ಪೆರ್‍ಮೆ, ಬಿಗಿ, ನಗೆ, ಸೊಗಸು.

೫. ಅರುಳಿರ್‍ಕೆ, ವೀಡುಂ, ಅರಂ, ಪುರುಳಿಂಪುಂ,
ಅರಿವಾಟಂ, ಪಾಟಂ ಪೊಸನೋಟಂ,

೬. ಒರ್‍ನಾಡು ಕೂಡುಗೆ ತಾನೇ ಒರ್ ಪೆರ್‌ಲೋಕಂ-
ಕಾರ್‍ನಾಡು ಕಂಡು ಕಾಣ್ಕೆಗಳನ್.

೭. ಕನ್ನಡ ಕಣ್ಮಣಿಗಳ್‌ ಪೆಣ್ಮಣಿಗಳ ಕಟ್ಟಾಳ್ಗಳ್‌
ಚೆನ್ನನೆಯ ಬಾಳ್ಗೆ ಬೆಳಕಕ್ಕೆ.

೮. ಕನ್ನಡ ತಾಯ್ ವಾಳ್ಗೆ, ವಾಳ್ಗೆ ಚೆಂದಮಿಳುಂ,
ಕೂಡಿದೀ ಚೆನ್ನೈಮಾನಾಡು.

೯. ಪಳವಾನೇ! ಪೊಸಎಲರೇ! ತಳಿಮಳೆಯೇ! ಚೆಲ್ವು ಬೆಳೆಯೆ!
ಒಳಗಣ್ಣ ಪಾರ್‍ವೆಯೆ! ನೆನೆಯಿರೆ ನಮ್ಮ ಪೊಲನುಂ.

೧೦. ಶ್ರೀಯೆಂಬೊನೊರ್‍ವನ್ ಅಡಿಯೆನೆನ್ ಕಾಯೆಂದು
ಬೇಳ್ಪನ್ ಪರಮಾತ್ಮನನ್.
*****
೧೯೪೫

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಪರಿಮಿತ ತಾರೆಗಳು
Next post ಇತಿಹಾಸ

ಸಣ್ಣ ಕತೆ

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

cheap jordans|wholesale air max|wholesale jordans|wholesale jewelry|wholesale jerseys