ರೇಷ್ಮಸೀರೆ ಅಂಗಡಿಯೊಂದರ ಮುಂದೆ ದೊಡ್ಡ ಕ್ಯೂ ಹನುಮಂತನ ಬಾಲದಂತೆ ಬೆಳೆದಿತ್ತು. ಅದೂ ಬರೀ ಹೆಂಗಸರೇ ತುಂಬಿದ್ದರು. ಗಂಡಸೊಬ್ಬನು ದಾಪುಗಾಲು ಹಾಕುತ್ತ ಕ್ಯೂ ಬ್ರೇಕ್ ಮಾಡಿ ಮುಂದೆ ಹೋಗಲು ಪ್ರಯತ್ನಿಸುತ್ತಿದ್ದ. ಎಲ್ಲಿ ತೂರಿಕೊಳ್ಳಲು ಪ್ರಯತ್ನಿಸಿದರೂ ಯಾವ ಹೆಂಗಸೂ ಹಾದಿ ಮಾಡಿಕೊಡಲಿಲ್ಲ. ಅವನಿಗೂ ತಾಳ್ಮೆ ಕೈ ಕೊಟ್ಟಿತು. “ನೀವು ಹೀಗೆ ಅಡ್ಡಿ ಮಾಡುತ್ತ ಹೋದರೆ ನಾನು ಹೋಗಿ ಅಂಗಡಿ ಬಾಗಿಲು ತೆರೆಯುವುದಾದರೂ ಹೇಗೆ? ನನ್ನ ಅಂಗಡಿಯ ಬಾಗಿಲಿಗೆ ಬೀಗ ಹಾಕಿರುವುದನ್ನು ಕಂಡು ಹಿಂದಿರುಗುತ್ತೀರಿ ಅಷ್ಟೆ!”
***
Related Post
ಸಣ್ಣ ಕತೆ
-
ಯಾರು ಹೊಣೆ?
"ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…
-
ಟೋಪಿ ಮಾರುತಿ
"ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…
-
ಇರುವುದೆಲ್ಲವ ಬಿಟ್ಟು
ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…
-
ಸಾವು
ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…
-
ಕರಿಗಾಲಿನ ಗಿರಿರಾಯರು
ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…