ಪಾಳಯಗಾರರು

ಪಾಳಯಗಾರರು

೧.೧ ೧ನೇ ಉಪನ್ಯಾಸ

ಮೈಸೂರು ಡಿಸ್ಟ್ರಿಕ್ಟಿನಲ್ಲಿ ತಲಕಾಡೆಂಬ ಒಂದು ಪುಣ್ಯಸ್ಥಳವಿದೆ. ಅದು ಕಾವೇರಿತೀರವಾಗಿದೆ. ತಿರಮಕೂಡಲಲ್ಲಿ ಕಪಿಲಾ ಕಾವೇರಿ ಸಂಗಮವಾಗಿ ಅಖಂಡ ಕಾವೇರಿಯು ತಲಕಾಡಿಗೆ ಹರಿದುಹೋಗುವುದು. ಈ ನದೀತೀರದಲ್ಲಿ ನೀರಿನ ಅಲೆಯಿಂದ ಮರಳು ಬಂದುಬಿದ್ದು ಅದು ಗಾಳಿಯಿಂದ ತೂರಿಕೊಂಡುಬಂದು ಹಲವು ಮೈಲಿಗಳವರೆಗೂ ಮರಳೇ ಮುಚ್ಚಿಕೊಂಡುಹೋಗಿದೆ. ಒಂದೊಂದು ಕಡೆ ಆ ಮರಳು ದೊಡ್ಡ ಬೆಟ್ಟದ ಹಾಗೆ ರಾಸಿಯಾಗಿ ಅಲ್ಲಲ್ಲಿ ಬಿದ್ದಿದೆ. ಇದೆಲ್ಲಾ ಗಜಾರಣ್ಯಕ್ಷೇತ್ರವೆಂದು ಹೆಸರುಗೊಂಡಿರುವುದಾಗಿ ಸ್ಥಳ ಪುರಾಣವಿದೆ. ಈ ಪ್ರದೇಶ ದಲ್ಲಿ ಅನೇಕ ದೇವಸ್ಥಾನಗಳಿದ್ದವಂತೆ. ಅದೆಲ್ಲಾ ಮರಳಿನಲ್ಲಿ ಮುಚ್ಚಿ ಹೋಗಿರುವುದಾಗಿ ತಿಳಿಯಬರುವುದು. ಕೆಲವು ಮಾಸ ತಿಥಿ ವಾರ ನಕ್ಷತ್ರ ಮೊದಲಾದ ಸಂಯೋಗ ಸಂಭವಿಸಿದಾಗ ಅಲ್ಲಿರುವ ಪ್ರಸಿದ್ದ ವಾದ ವೈದ್ಧೇಶ್ವರ, ಮರಳೇಶ್ವರ, ಪಾತಾಳೇಶ್ವರ, ಗೋಕರ್ಣೇಶ್ವರ, ಮಲ್ಲಿಕಾರ್ಜುನೇಶ್ವರ ಎಂಬ ಐದು ಲಿಂಗಗಳನ್ನು ದರ್ಶನಮಾಡಿದರೆ ಬಹಳ ಪುಣ್ಯ ಉಂಟೆಂದು ಹೇಳುತ್ತಾರೆ. ಇಂಥಾ ಸಂಯೋಗವು ೩ ವರುಷಕ್ಕೆ, ೫ ವರುಷಕ್ಕೆ, ೧೨ ವರುಷಕ್ಕೆ ಒಂದೊಂದು ಸಾರಿ ಹೀಗೆ ಬಿಟ್ಟು ಬಿಟ್ಟು ಬರುವುದು. ಜನರು ಅಪಾರವಾಗಿ ಜಾತ್ರೆಗೆ ನೆರೆಯುವರು. ಮುವತ್ತು ನಲವತ್ತು ಸಾವಿರ ಜನದವರೆಗೂ ಸೇರುವುದು. ಈ ದೊಡ್ಡ ಜಾತ್ರೆಗೆ ಪಂಚಲಿಂಗದರ್ಶನವೆಂದು ಹೇಳುವರು. ಈ ಪುಣ್ಯಕ್ಷೇತ್ರದಲ್ಲಿ ಒಂದು ಐತಿಹ್ಯ ಉಂಟು. ಇಲ್ಲಿ ಅನೇಕ ಶಿವ ದೇವಾಲಯಗಳು ಇದ್ದು ಅವುಗಳೆಲ್ಲಾ ಮರಳು ಮುಚ್ಚಿ ಹೋಗಿವೆಯೆಂದು ಹೇಳುತ್ತಾರೆ. ಪೂರ್‍ವದಲ್ಲಿ ಒಬ್ಬ ವ್ಯಾಪಾರಿಯು ಒಂದು ಸೇರು ಕಡಲೆಯನ್ನು ತಂದು ಆ ಪ್ರದೇಶದಲ್ಲಿ ಶಿವದೇವಾಲಯಗಳ ದೇವರ ಮುಂದೆ ಒಂದು ದೇವರಿಗೆ ಒಂದು ಕಡಲೆಯಂತೆ ಇಟ್ಟು ನಿವೇದನ ಮಾಡುತ್ತಾ ಹೋದನಂತೆ. ಕೊನೆಯಲ್ಲಿ ಮಲ್ಲಿಕಾರ್ಜುನೇಶ್ವರನ ಗುಡಿಯ ಬಳಿಗೆ ಬರುವಾಗ ಒಂದು ಕಡಲೆ ಸಾಲದೆಹೋಯಿತಂತೆ, ಆ ದೇವರು ಮುನಿಸಿಕೊಂಡು ನದಿಯ ಆಚೆಹೋಗಿ ವಿಜಾಪುರವೆಂಬ ಊರಲ್ಲಿ ಕೂತುಕೊ೦ಡಿತಂತೆ. ಆ ಹೇರಿನಲ್ಲಿ ಎಷ್ಟು ಕಡಲೇಕಾಳು ಇತ್ತೊ ಅಷ್ಟು ಲಿಂಗಗಳು ಅಲ್ಲಿ ಪ್ರತಿಷ್ಟೆಯಾಗಿದ್ದು ಈಗ ಅದೆಲ್ಲಾ ಮರಳಲ್ಲಿ ಮುಚ್ಚಿಹೋಗಿದೆ ಎಂದು ಹೇಳುತ್ತಾರೆ.

ಈ ಸ್ಥಳೀಯವಾದ ಒಂದು ಐತಿಹ್ಯವನ್ನು ಈ ನಮ್ಮ ಭರತಖಂಡವೆಂಬ ಮಹಾರಾಜ್ಯಕ್ಕೆ ಹೋಲಿಸಿ ಚರಿತ್ರೆ ಎಂಬ ದುರ್ಬನ್ ಅಥವಾ ನಾಳಕಾಯಂತ್ರದಿಂದ ಶೋಧಿಸಿ ನೋಡಿದರೆ, ಇಲ್ಲಿ ಆಳಿದ ದೊರೆಗಳಿಗೆ ಹೆಸರಿಗೊಂದು ಕಡಲೇಕಾಳನ್ನು ನಜರಾಗಿ ಹಾಕುತ್ತಾ ಬಂದಾಗ್ಯೂ ಅಂಥಾ ಕಡಲೆ ಹೇರು ಅನೇಕವಾಗಬಹುದು. ಅಷ್ಟೊಂದು ಜನ ರಾಜರು ಇಲ್ಲಿ ಆಳಿದರು. ಈ ರಾಜರುಗಳಲ್ಲಿ ಕೆಲವರು ದೊಡ್ಡದಾಗಿ ಸೀಮೆಯನ್ನು ಕಟ್ಟಿ ಚಕ್ರಾಧೀಶ್ವರರೆನ್ನಿಸಿಕೊಂಡರು. ಇನ್ನು ಕೆಲವರು ಚಿಕ್ಕ ಚಿಕ್ಕ ರಾಜ್ಯಗಳನ್ನು ಆಳುತಾ ಸ್ವತಂತ್ರರಾಗಿದ್ದರು. ಮತ್ತು ಅವರು ಒಂದೊಂದು ವೇಳೆ ಅಲ್ಲಲ್ಲಿ ಚಕ್ರಾಧೀಶ್ವರರೆನ್ನಿಸಿಕೊಂಡಿದ್ದವರಿಗೆ ವಶವರ್ತಿಗಳಾಗಿ ಆಳಿಕೊಂಡಿದ್ದರು. ಇಂಥಾ ಚಿಕ್ಕ ರಾಜಾಧಿಪತಿಗಳಲ್ಲಿ ಹಲವರಿಗೆ ಈಚೆಗೆ ಪಾಳಯಗಾರರೆಂದು ಹೆಸರು ಬಂದಿದೆ. ಇಂಥಾ ಪಾಳಯಗಾರರ ಸಂಸ್ಥೆಯನ್ನು ಕುರಿತು ಕನ್ನಡಭಾಷೆಯಲ್ಲಿ ಉಪನ್ಯಾಸ ಮಾಡಬೇಕೆಂದು ಮೈಸೂರು ಯೂನಿವರ್ಸಿಟಿ ಎಂಬ ವಿದ್ಯಾ ನಿಲಯದವರು ನನ್ನನ್ನು ನೇಮಕಮಾಡಿದ ಕಾರಣ, ಈ ವಿಷಯದಲ್ಲಿ ನನಗೆ ತಿಳಿದ ಕೆಲವು ಸಂಗತಿಯನ್ನು ತಮಗೆ ಅರಿಕೆ ಮಾಡಿಕೊಳ್ಳುತ್ತೇನೆ, ಸಾವಾಧಾನಚಿತ್ತದಿಂದ ಲಾಲಿಸಬೇಕು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಂಬಿಕೆ ಹುಸಿಯಾಗದಿರಲಿ
Next post ಜಯತು ವಿಶ್ವರೂಪಿಣಿ

ಸಣ್ಣ ಕತೆ

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ದೇವರ ನಾಡಿನಲಿ

    ೧೯೯೮ ಜೂನ್ ತಿಂಗಳ ಮೊದಲ ವಾರದಲ್ಲಿ ನಾ ದೇವರನಾಡಿನಲಿ, ವಿಭಾಗೀಯ ಸಾರಿಗೆ ಅಧಿಕಾರಿ ಎಂದು, ವಿಭಾಗೀಯ ಕಛೇರಿ ಮಂಗಳೂರು ವಿಭಾಗ ಅಂದರೆ.... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ... ಹರ್ಷದಿ,… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…