Home / ಬಾಲ ಚಿಲುಮೆ / ಕವಿತೆ / `ನಾನು’ ಹೋದರೆ…

`ನಾನು’ ಹೋದರೆ…

ವ್ಯಾಸಮಠದ ಶ್ರೀವ್ಯಾಸರಾಯರು
ಹಲವು ಶಿಷ್ಯರನು ಹೊಂದಿದ್ದವರು
ದಾಸಕೂಟದ ಕನಕ ಪುರಂದರ
ದಾಸರ ಹೆಚ್ಚಿಗೆ ಮೆಚ್ಚಿದ್ದವರು
ಶಿಷ್ಯ ಸಮೂಹದ ಗೊಷ್ಠಿಯಲೊಮ್ಮೆ
ಪ್ರಶ್ನೆ ಕೇಳಿದರು ನಗೆ ಚೆಲ್ಲಿ-
’ಮೋಕ್ಷ ಹೊಂದಿ ವೈಕುಂಠಕೆ ಹೋಗುವ
ವ್ಯಕ್ತಿ ಯಾರಿಹರು ನಮ್ಮಲ್ಲಿ?’

ಸಭೆಯಲಿ ಹೆಚ್ಚಿನ ಬ್ರಾಹ್ಮಣರಿದ್ದರು
ಬೆರಳೆಣಿಕೆಯ ಜನ ಶೂದ್ರರಿದ್ದರು
ಪಂಡಿತರಿದ್ದರು ಪಾಮರರಿದ್ದರು
ಯಾರೂ ಉತ್ತರ ಕೊಡಲಿಲ್ಲ
ಗುರುಗಳ ಎದುರಲಿ
ನುಡಿಯುವ ಧೈರ್ಯವು
ತುಂಬಿದ ಸಭೆಯಲಿ ನಿಲ್ಲುವ ಸ್ಥೈರ್ಯವು
ಯಾರಿಗೂ ಇಲ್ಲದೆ ಕುಳಿತಿರೆ ಸುಮ್ಮನೆ
ವ್ಯಾಸರಾಯರೂ ಬಿಡಲಿಲ್ಲ!

ವ್ಯಾಸರು ಎಲ್ಲೆಡೆ ತಿರುಗಿ ನೋಡಿದರು
ಕನಕದಾಸನನು ಕರೆದು ಕೇಳಿದರು-
’ಕನಕನೆ ಉತ್ತರ ಕೊಡು ನೀನು’
ಕನಕನು ಎಲ್ಲರ ಒಮ್ಮೆ ನೋಡಿರಲು
ಪಂಡಿತರೆಲ್ಲರೂ ಕೊಂಕು ಬೀರಿರಲು
ಉತ್ತರ ಕೊಡುವುದು ಹಿತವೇನು?

ಬ್ರಾಹ್ಮಣ ಪಂಡಿತರೆಲ್ಲರು ಕೂಡಿ
ಒಬ್ಬರ ಮುಖವನ್ನೊಬ್ಬರು ನೋಡಿ
ಶೂದ್ರನಾದವನು ಮೋಕ್ಷದ ಬಗ್ಗೆ
ಉತ್ತರ ಕೊಡುವುದು ಸಾಧ್ಯವೆ? ಹೇಗೆ?
ಕನಕದಾಸರೆಡೆ ನಕ್ಕು ನೋಡಿದರು
’ಹೇಳಬಾರದೆ?’ ಕುಹಕವಾಡಿದರು
ಮುಸಿಮುಸಿ ನಗುತ್ತ ಮನದಲ್ಲಿ
ನುಡಿಯಲಾಗದೆ ಎದುರಲ್ಲಿ!

ಕನಕದಾಸರು ನಮಿಸಿ ವ್ಯಾಸರಿಗೆ
ನಗುತ ಹೇಳಿದರು ಅವರಿಗೆ ಹೀಗೆ-
’ಗುರುಗಳೆ, ಬಲ್ಲವರೆಲ್ಲರು ಇರುವರು
ಆದರೆ ಇವರಲಿ ಯಾರೂ ಹೋಗರು
ನಾನು ಹೋದರೆ ಹೋಗಲುಬಹುದು
ವೈಕುಂಠವನು ಸೇರಲುಬಹುದು
ತಮ್ಮ ಅನುಗ್ರಹವೆನಗಿರಲಿ
ತಪ್ಪಾಗಿದ್ದರೆ ಕ್ಷಮೆ ಇರಲಿ’

ಪಂಡಿತರೆಲ್ಲರು ಉರಿದು ಬಿದ್ದರು
ಕನಕನ ಮಾತನು ಖಂಡಿಸಿ ನುಡಿದರು
ದುರಹಂಕಾರದ ಮಾತಿದು ಎಂದರು
ಶೂದ್ರನ ಬುದ್ಧಿಯು ಲದ್ದಿಯು ಅಂದರು
ಎದ್ದು ನಿಂತು ತೋಳ್ತಟ್ಟಿದರು
ಕೋಪದಿಂದ ಬುಸುಗುಟ್ಟಿದರು

ಗುರುಗಳು ಎಲ್ಲರ ಕೂರಲು ಹೇಳಿ
ನುಡಿದರು- ’ಕೇಳಿರಿ ಸಂಯಮ ತಾಳಿ
ಕನಕನು ಹೇಳುವ ಮಾತನು ಕೇಳಿ’
ಪಂಡಿತರಿಗೆ ತಿಳಿಹೇಳಿದರು
ನಂತರ ಕನಕನ ಹತ್ತಿರ ಬಂದು
ಕೇಳಿದರವನನು- ’ಹೇಗಿದು?’ ಎಂದು
ವಿವರಿಸಿ ಹೇಳಲು ಕೇಳಿದರು!

ಗುರುಗಳೆ, ’ನಾನು’ ನನ್ನದು ಎನ್ನುವ
ಅಹಂಕಾರದಲಿ ಮುಳುಗಿದ ಮಾನವ
ಇರುವನು ಮೋಕ್ಷಕೆ ಬಲು ದೂರ
ಈ ಮಮಕಾರವ ಜಯಿಸಿದ ಒಡನೆ
ಮೋಕ್ಷವು ದೊರೆವುದು ತಂತಾನೆ
ಎಂಬುದೆನ್ನ ಮಾತಿನ ಸಾರ

ಗುರುಗಳು ಶಿಷ್ಯನ ಮಾತನು ಕೇಳಿ
ತುಂಬಿದ ಮನದಲಿ ಸಂತಸ ತಾಳಿ
ಪಂಡಿತರೆಡೆಗೆ ನೋಡಿದರು
ಪಂಡಿತರೆಲ್ಲ ಅಹಮ್ಮಿನ ನುಡಿಗೆ
ಮಾತಿನ ಮರ್ಮವ ಅರಿಯದ ಪರಿಗೆ
ನಾಚುತ ತಲೆಯನು ಬಾಗಿದರು!
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...