ಯಾರೂ ಇಲ್ಲದ ಜಾಗ

ವ್ಯಾಸಮಠದ ಶ್ರೀವ್ಯಾಸರಾಯರು
ಪರೀಕ್ಷೆ ಮಾಡಲು ಶಿಷ್ಯರನು
ನೀಡಿದರೆಲ್ಲರಿಗೆರಡೆರಡಂತೆ
ಮಾಗಿದ ಬಾಳೆಯ ಹಣ್ಣನ್ನು

’ತಿಂದು ಬನ್ನಿರಿ ಬಾಳೆಯ ಹಣ್ಣನು
ಯಾರೂ ಇಲ್ಲದ ಜಾಗದಲಿ’
-ಎಂದು ಕಳುಹಿದರು ಎಲ್ಲ ಶಿಷ್ಯರನು
ಒಂದಿನ ಸಂಜೆಯ ವೇಳೆಯಲಿ

ಅರ್ಧಗಂಟೆಯಲಿ ಎಲ್ಲರೂ ಬಂದರು
ಹಣ್ಣನು ನುಂಗಿದ ಖುಷಿಯಲ್ಲಿ
ಆದರೆ ಕನಕನು ಹಿಂದಕೆ ತಂದನು
ತಿನ್ನದೆ ಹಣ್ಣನು ಮರೆಯಲ್ಲಿ

ವ್ಯಾಸರಾಯರ ಮಠದಲ್ಲಿದ್ದುದು
ಬ್ರಾಹ್ಮಣ ಶಿಷ್ಯರೇ ಹೆಚ್ಚಾಗಿ
ತಾವೇ ಶ್ರೇಷ್ಠರು ಎನ್ನುತ ಜಂಬವ
ಕೊಚ್ಚುತಲಿದ್ದರು ಬಲು ಬೀಗಿ

ಶಿಷ್ಯರೊಳಿದ್ದವ ಕನಕನಾಯಕ
ಹೆಸರಿನ ಕುರುಬರ ವಂಶದವ
ಜಂಬವು ಇಲ್ಲದೆ ವಿನಯತೆ ತುಂಬಿದ
ಚಿನ್ನದ ಗುಣಗಳ ಹೊಂದಿದವ

ಕುಲಹೀನನು ಅವನೆನ್ನುತಲಿದ್ದರು
ತಾವುಗಳೇ ಮೇಲೆನ್ನುತ್ತ
ಅವನನು ಕಡೆಗಣಿಸಿದ್ದರು ಎಲ್ಲರು
ತಮ್ಮಲಿ ತಾವೇ ಗೊಣಗುತ್ತ

ಬ್ರಾಹ್ಮಣ ಶಿಷ್ಯರು ಕನಕನ ಕೈಯಲಿ
ಹಣ್ಣನು ಕಂಡು ನಗಾಡಿದರು
ಶೂದ್ರನಿಗೆಲ್ಲಿಯೂ ಜಾಗವು ಸಿಕ್ಕದೆ
ಬಂದನೆಂದು ಗೊಣಗಾಡಿದರು

ವ್ಯಾಸರು ಶಿಷ್ಯರ ಕೇಳಿದೊಡನೆಯೆ
ನುಡಿದರು ಎಲ್ಲರೂ ಖುಷಿಯಿಂದ
ಯಾರೂ ಇಲ್ಲದ ಜಾಗದಿ ಹಣ್ಣನು
ತಿಂದುದನ್ನು ಲಗುಬಗೆಯಿಂದ

ಒಬ್ಬನು ನುಡಿದನು ಬಲು ಖುಷಿಯಿಂದ-
’ಬಾಗಿಲು ಮುಚ್ಚಿದ ಕೋಣೆಯಲಿ’
ಇನ್ನೊಬ್ಬನು ತಾ ತಿಂದೆನು ಎಂದನು
’ನೀರಲಿ ಮುಳುಗುತ ಹೊಳೆಯಲ್ಲಿ’
ಒಬ್ಬನು ತಿಂದೆನು ಎಂದನು ನಾಚುತ-
’ಶೌಚದ ಕೋಣೆಯ ಮೂಲೆಯಲಿ’

ಕಡೆಯಲಿ ಕನಕನು ನುಡಿದನು ಹೀಗೆ-
’ಗುರುಗಳೆ, ನನಗೀ ಜಗದಲ್ಲಿ
ದೇವರು ಇಲ್ಲದ ಜಾಗವು ಸಿಕ್ಕದೆ
ಹಿಂದಕೆ ತಂದೆನು ಈಗಿಲ್ಲಿ’
ಎನ್ನುತ ಹಣ್ಣನು ಹಿಂದಕೆ ಕೊಟ್ಟನು
ಗುರುಗಳ ಪಾದಕೆ ವಂದಿಸುತ
ಬ್ರಾಹ್ಮಣ ಶಿಷ್ಯರು ನಾಚಿಕೆಯಿಂದ
ನಿಂತರು ತಲೆಯನು ತಗ್ಗಿಸುತ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆಟ್ಟಕ್ಕೆ ಮಣ್ಣೊತ್ತವು
Next post ಪ್ರೊಫೆಶನಲಿಸಂ ಎಂಬ ಮಾಯೆ

ಸಣ್ಣ ಕತೆ

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…