Home / ಬಾಲ ಚಿಲುಮೆ / ಕವಿತೆ / ಯಾರೂ ಇಲ್ಲದ ಜಾಗ

ಯಾರೂ ಇಲ್ಲದ ಜಾಗ

ವ್ಯಾಸಮಠದ ಶ್ರೀವ್ಯಾಸರಾಯರು
ಪರೀಕ್ಷೆ ಮಾಡಲು ಶಿಷ್ಯರನು
ನೀಡಿದರೆಲ್ಲರಿಗೆರಡೆರಡಂತೆ
ಮಾಗಿದ ಬಾಳೆಯ ಹಣ್ಣನ್ನು

’ತಿಂದು ಬನ್ನಿರಿ ಬಾಳೆಯ ಹಣ್ಣನು
ಯಾರೂ ಇಲ್ಲದ ಜಾಗದಲಿ’
-ಎಂದು ಕಳುಹಿದರು ಎಲ್ಲ ಶಿಷ್ಯರನು
ಒಂದಿನ ಸಂಜೆಯ ವೇಳೆಯಲಿ

ಅರ್ಧಗಂಟೆಯಲಿ ಎಲ್ಲರೂ ಬಂದರು
ಹಣ್ಣನು ನುಂಗಿದ ಖುಷಿಯಲ್ಲಿ
ಆದರೆ ಕನಕನು ಹಿಂದಕೆ ತಂದನು
ತಿನ್ನದೆ ಹಣ್ಣನು ಮರೆಯಲ್ಲಿ

ವ್ಯಾಸರಾಯರ ಮಠದಲ್ಲಿದ್ದುದು
ಬ್ರಾಹ್ಮಣ ಶಿಷ್ಯರೇ ಹೆಚ್ಚಾಗಿ
ತಾವೇ ಶ್ರೇಷ್ಠರು ಎನ್ನುತ ಜಂಬವ
ಕೊಚ್ಚುತಲಿದ್ದರು ಬಲು ಬೀಗಿ

ಶಿಷ್ಯರೊಳಿದ್ದವ ಕನಕನಾಯಕ
ಹೆಸರಿನ ಕುರುಬರ ವಂಶದವ
ಜಂಬವು ಇಲ್ಲದೆ ವಿನಯತೆ ತುಂಬಿದ
ಚಿನ್ನದ ಗುಣಗಳ ಹೊಂದಿದವ

ಕುಲಹೀನನು ಅವನೆನ್ನುತಲಿದ್ದರು
ತಾವುಗಳೇ ಮೇಲೆನ್ನುತ್ತ
ಅವನನು ಕಡೆಗಣಿಸಿದ್ದರು ಎಲ್ಲರು
ತಮ್ಮಲಿ ತಾವೇ ಗೊಣಗುತ್ತ

ಬ್ರಾಹ್ಮಣ ಶಿಷ್ಯರು ಕನಕನ ಕೈಯಲಿ
ಹಣ್ಣನು ಕಂಡು ನಗಾಡಿದರು
ಶೂದ್ರನಿಗೆಲ್ಲಿಯೂ ಜಾಗವು ಸಿಕ್ಕದೆ
ಬಂದನೆಂದು ಗೊಣಗಾಡಿದರು

ವ್ಯಾಸರು ಶಿಷ್ಯರ ಕೇಳಿದೊಡನೆಯೆ
ನುಡಿದರು ಎಲ್ಲರೂ ಖುಷಿಯಿಂದ
ಯಾರೂ ಇಲ್ಲದ ಜಾಗದಿ ಹಣ್ಣನು
ತಿಂದುದನ್ನು ಲಗುಬಗೆಯಿಂದ

ಒಬ್ಬನು ನುಡಿದನು ಬಲು ಖುಷಿಯಿಂದ-
’ಬಾಗಿಲು ಮುಚ್ಚಿದ ಕೋಣೆಯಲಿ’
ಇನ್ನೊಬ್ಬನು ತಾ ತಿಂದೆನು ಎಂದನು
’ನೀರಲಿ ಮುಳುಗುತ ಹೊಳೆಯಲ್ಲಿ’
ಒಬ್ಬನು ತಿಂದೆನು ಎಂದನು ನಾಚುತ-
’ಶೌಚದ ಕೋಣೆಯ ಮೂಲೆಯಲಿ’

ಕಡೆಯಲಿ ಕನಕನು ನುಡಿದನು ಹೀಗೆ-
’ಗುರುಗಳೆ, ನನಗೀ ಜಗದಲ್ಲಿ
ದೇವರು ಇಲ್ಲದ ಜಾಗವು ಸಿಕ್ಕದೆ
ಹಿಂದಕೆ ತಂದೆನು ಈಗಿಲ್ಲಿ’
ಎನ್ನುತ ಹಣ್ಣನು ಹಿಂದಕೆ ಕೊಟ್ಟನು
ಗುರುಗಳ ಪಾದಕೆ ವಂದಿಸುತ
ಬ್ರಾಹ್ಮಣ ಶಿಷ್ಯರು ನಾಚಿಕೆಯಿಂದ
ನಿಂತರು ತಲೆಯನು ತಗ್ಗಿಸುತ!
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...